ಸೌರವ್ ಗಂಗೂಲಿ 
ಕ್ರಿಕೆಟ್

ಸದ್ಯಕ್ಕೆ ಯಾವುದೇ ರಾಜಕೀಯ ಬೆಳವಣಿಗೆ ಇಲ್ಲ: ಬಿಜೆಪಿ ಸೇರ್ಪಡೆ ವದಂತಿ ಅಲ್ಲಗಳೆದ ಗಂಗೂಲಿ

ಬಿಸಿಸಿಐ ಅಧ್ಯಕ್ಷರಾಗಿ ಬಹುತೇಕ ಚುನಾಯಿತರಾಗಿರುವ ಸೌರವ್ ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ

ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷರಾಗಿ ಬಹುತೇಕ ಚುನಾಯಿತರಾಗಿರುವ ಸೌರವ್ ಗಂಗೂಲಿ ಬಿಜೆಪಿ ಸೇರಲಿದ್ದಾರೆ ಎಂಬ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.ಸದ್ಯಕ್ಕೆ ಅಂತಹ ಯಾವುದೇ ರಾಜಕೀಯ ಬೆಳವಣಿಗೆ ಆಗಿಲ್ಲ. ಇತ್ತೀಚಿಗೆ ನಡೆದ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ರಾಜಕೀಯ ಸಂಬಂಧ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಪಪಡಿಸಿದ್ದಾರೆ.

ಶನಿವಾರ ಅಮಿತ್ ಶಾ ಗಂಗೂಲಿ ಭೇಟಿಯಾದ ಬಳಿಕ ಮಾಜಿ ಟೀಂ ಇಂಡಿಯಾ ನಾಯಕ ಸೌರವ್ ಗಂಗೂಲಿ 2021ರ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ ಎಂಬಂತಹ ಊಹಾಪೋಹಗಳು ಎದ್ದಿದ್ದವು.

ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಗಂಗೂಲಿ, ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಅವರೊಬ್ಬರೇ ಕಣದಲ್ಲಿರುವುದರಿಂದ ಬಹುತೇಕ ಅವರೇ ಅಧ್ಯಕ್ಷರಾಗಿ ಆಯ್ಕೆಯಾಗಲಿದ್ದಾರೆ . ಆಕ್ಟೋಬರ್ 23 ರಂದು ಬಿಸಿಸಿಐ ಪದಾಧಿಕಾರಿಗಳಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದು, ಸೌರವ್ ಗಂಗೂಲಿ ಅಧಿಕೃತವಾಗಿ ಬಿಸಿಸಿಐ ಅಧ್ಯಕ್ಷರಾಗಿ ಕಾರ್ಯಾರಂಭ ಮಾಡಲಿದ್ದಾರೆ.

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರನ್ನು ಭೇಟಿಯಾದಾಗ ಈ ರೀತಿಯ ರಾಜಕೀಯ ಪ್ರಶ್ನೆಗಳನ್ನು ಕೇಳಿದ್ದೇನೆ. ಮೊದಲ ಬಾರಿಗೆ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದೇನೆ. ನೀವು ಏಕೆ ಆ ರೀತಿಯಲ್ಲಿ ಅರ್ಥೈಹಿಸಿಕೊಳ್ಳುತ್ತೀರಿ, ಅಲ್ಲಿ ಯಾವುದೇ ರಾಜಕೀಯ ಬೆಳವಣಿಗೆ ಆಗಿಲ್ಲ ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಸೌರವ್ ಗಂಗೂಲಿ ಬಿಜೆಪಿ ಸೇರ್ಪಡೆಯಾದರೆ ಪಕ್ಷಕ್ಕೆ ಒಳಿತಾಗಲಿದೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್ ಸೋಮವಾರ ಹೇಳಿಕೆ ನೀಡಿದ್ದರು. ಆದರೆ, ಸೌರವ್ ಬಿಸಿಸಿಐ ಅಧ್ಯಕ್ಷರಾಗುವುದು ಖಚಿತವಾಗುತ್ತಿದ್ದಂತೆ ಪಶ್ಚಿಮ ಬಂಗಾಳದಲ್ಲಿ ಪಕ್ಷ ಬೇಧ ಮರೆತು ಎಲ್ಲರೂ ಅಭಿನಂದಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT