ಏಡೆನ್ ಮಾರ್ಕ್ರಮ್ 
ಕ್ರಿಕೆಟ್

3ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ಆಫ್ರಿಕಾಗೆ ಗಾಯದ ಮತ್ತೊಂದು ಬರೆ, ಆರಂಭಿಕ ಬ್ಯಾಟ್ಸ್‌‌ಮನ್ ಔಟ್!

ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್‌‌ಮನ್ ಏಡೆನ್ ಮರ್ಕರಮ್ ಅವರು ಗಾಯದಿಂದಾಗಿ ಭಾರತದ ವಿರುದ್ಧ ರಾಂಚಿಯಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ರಾಂಚಿ: ದಕ್ಷಿಣ ಆಫ್ರಿಕಾ ಆರಂಭಿಕ ಬ್ಯಾಟ್ಸ್‌‌ಮನ್ ಏಡೆನ್ ಮರ್ಕರಮ್ ಅವರು ಗಾಯದಿಂದಾಗಿ ಭಾರತದ ವಿರುದ್ಧ ರಾಂಚಿಯಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ.

ಕಳೆದ ಎರಡು ಪಂದ್ಯಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಏಡೆನ್ ಮರ್ಕರಮ್ ಅವರು ನಿರಾಸೆಗೆ ಒಳಗಾಗಿದ್ದರು. ಅಲ್ಲದೇ, ಪುಣೆ ಪಂದ್ಯದ ವೇಳೆ ಡ್ರೆಸ್ಸಿಂಗ್  ಕೊಠಡಿಯಲ್ಲಿ ಅವರ ವೈಫಲ್ಯದ ಬಗ್ಗೆ ಅಸಮಾಧಾನವಿತ್ತು. ಇದರ ನಡುವೆ ಅವರ ಮುಷ್ಟಿ ಗೆ ಗಾಯವಾಗಿದ್ದು, ಶನಿವಾರ ರಾಂಚಿನಲ್ಲಿ ನಡೆಯುವ ಪಂದ್ಯದಿಂದ ಮರ್ಕರಮ್ ದೂರ ಉಳಿಯಲಿದ್ದಾರೆ.

ಮರ್ಕರಮ್ ಅವರ ಸ್ಥಾನಕ್ಕೆ ಬೇರೆ ಆಟಗಾರನ ಹೆಸರನ್ನು ದಕ್ಷಿಣ ಆಫ್ರಿಕಾ ಗುರುತಿಸಲಿಲ್ಲ. ಏಡೆನ್ ಮರ್ಕರಮ್ ಅವರ  ಮುಷ್ಟಿಗೆ ಗಾಯವಾಗಿದ್ದು, ಅವರು ತವರಿಗೆ ಮರಳಿದ ಬಳಿಕ ಅವರು ವಿಶೇಷ ತಜ್ಞರನ್ನು ಭೇಟಿಯಾಗಲಿದ್ದಾರೆ ಎಂದು ದಕ್ಷಿಣ ಆಫ್ರಿಕಾ ವೈದ್ಯ ಹಾಶೇಂದ್ರ ರಾಮ್‌ಜೀ ಮಾಹಿತಿ ನೀಡಿದ್ದಾರೆ.

ಮರ್ಕರಮ್ ಅವರ ಮುಷ್ಟಿಯನ್ನು ಸಿಟಿ ಸ್ಕ್ಯಾನ್ ಮಾಡಲಾಗಿದೆ. ಅವರ ಮುಷ್ಟಿ ಮೂಳೆಗೆ ಬಲವಾಗಿ ಹೊಡೆತ ಬಿದ್ದಿರುವುದು ವರದಿ ಧೃಡೀಕರಿಸಿದೆ. ಹಾಗಾಗಿ, ಅವರನ್ನು ರಾಂಚಿಯಲ್ಲಿ ನಡೆಯುವ ಮೂರನೇ ಹಾಗೂ ಅಂತಿಮ ಟೆಸ್ಟ್‌ ಪಂದ್ಯಕ್ಕೆೆ ಅವರನ್ನು ಕೈ ಬಿಡಲಾಗಿದೆ ಎಂದು ಹೇಳಿದ್ದಾರೆ.

ಏಡೆನ್ ಮರ್ಕರಮ್ ಅವರು ಕಳೆದ ಎರಡು ಪಂದ್ಯಗಳಲ್ಲಿ ವಿಫಲರಾಗಿದ್ದಾಾರೆ. ಗುರುವಾರ ಬೆಳಗ್ಗೆ ಅವರು ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಸ್ಪಿನ್ನರ್ ಕೇಶವ್ ಮಹರಾಜ್ ಕೂಡ ಭುಜದಲ್ಲಿ ನೋವು ಕಂಡುಬಂದಿರುವ ಹಿನ್ನೆಲೆಯಲ್ಲಿ ಅವರು ಮೂರನೇ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ. ಈಗಾಗಲೇ ದಕ್ಷಿಣ ಆಫ್ರಿಕಾ ತಂಡ 0-2 ಅಂತರದಲ್ಲಿ ಭಾರತದ ವಿರುದ್ಧ ಟೆಸ್ಟ್‌ ಸರಣಿ ಬಿಟ್ಟುಕೊಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT