ಪದಾರ್ಪಣೆ ಪಂದ್ಯದಲ್ಲೇ ವಿಕೆಟ್ ಕಬಳಿಸಿದ ನದೀಮ್ ಸಂಭ್ರಮ 
ಕ್ರಿಕೆಟ್

3ನೇ ಟೆಸ್ಟ್: ಭಾರತೀಯ ಬೌಲರ್ ಗಳ ದಾಳಿಗೆ ತತ್ತರಿಸಿದ ದ.ಆಫ್ರಿಕಾ, ಸಂಕಷ್ಟದಲ್ಲಿ ಡುಪ್ಲೆಸಿಸ್ ಬಳಗ

ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ 130 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿದೆ.

ರಾಂಚಿ: ರಾಂಚಿಯಲ್ಲಿ ನಡೆಯುತ್ತಿರುವ ಭಾರತದ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕೇವಲ 130 ರನ್ ಗಳಿಗೆ 8 ವಿಕೆಟ್ ಕಳೆದುಕೊಂಡಿದೆ.

ರಾಂಚಿ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಮೊದಲ ಇನ್ನಿಂಗ್ಸ್ ನಲ್ಲಿ ದಕ್ಷಿಣ ಆಫ್ರಿಕಾ ಕೇವಲ 130 ರನ್ ಗಳಿಗೆ  ವಿಕೆಟ್ ಕಳೆದುಕೊಂಡಿದೆ. ಆಫ್ರಿಕಾ ಪರ ಹಮ್ಜಾ (62 ರನ್) ಮತ್ತು ಭವುಮಾ (32 ರನ್) ಕೊಂಚ ಪ್ರತಿರೋಧ ಒಡ್ಡಿದರಾದರೂ, ಭಾರತೀಯ ಬೌಲರ್ ಗಳ ಸಾಂಘಿಕ ಪ್ರದರ್ಶನಕ್ಕೆ ತತ್ತರಿಸಿ ವಿಕೆಟ್ ಕೈ ಚೆಲ್ಲಿದರು. ಆರಂಭದಿಂದಲೂ ನಿಗದಿತವಾಗಿ ವಿಕೆಟ್ ಕೈ ಚೆಲ್ಲುತ್ತಾ ಸಾಗಿದ್ದ ಆಫ್ರಿಕಾ ತಂಡಕ್ಕೆ ವೇಗಿಗಳಾದ ಮಹಮದ್ ಶಮಿ, ಉಮೇಶ್ ಯಾದವ್ ಆಘಾತ ನೀಡಿದರೆ, ಹಮ್ಜಾ ವಿಕೆಟ್ ಪಡೆಯುವ ಮೂಲಕ ರವೀಂದ್ರ ಆಫ್ರಿಕಾಗೆ ಮರ್ಮಾಘಾತ ನೀಡಿದರು.

ಇತ್ತೀಚಿನ ವರದಿಗಳು ಬಂದಾಗ ಆಫ್ರಿಕಾ ತಂಡ 131 ರನ್ ಗಳಿಸಿದ್ದು, 8 ವಿಕೆಟ್ ಕಳೆದುಕೊಂಡಿದೆ. ಭಾರತದ ಪರ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡಿರುವ ಶೆಬಾಜ್ ನದೀಮ್ ಪದಾರ್ಪಣೆ ಪಂದ್ಯದಲ್ಲೇ ಮೊದಲ ವಿಕೆಟ್ ಗಳಿಸಿದ್ದು, ಆಫ್ರಿಕಾ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದ ಬವುಮಾರನ್ನು ಪೆವಿಲಿಯನ್ ಗೆ ಅಟ್ಟಿದ್ದಾರೆ. ಇನ್ನುಳಿದಂತೆ ಮಹಮದ್ ಶಮಿ, ಉಮೇಶ್ ಯಾದವ್ ಮತ್ತು ರವೀಂದ್ರ ಜಡೇಜಾ ತಲಾ 2 ವಿಕೆಟ್ ಗಳಿಸಿದ್ದಾರೆ.

16 ರನ್ ಗಳಿಸಿರುವ ಲಿಂಡೆ ಮತ್ತು ಖಾತೆ ತೆರೆಯದ ನಾರ್ಟ್ಜೆ ಕ್ರೀಸ್ ಕಾಯ್ದುಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT