ವಿರಾಟ್ ಕೊಹ್ಲಿ-ಫಾಫ್ ಡುಪ್ಲೆಸಿಸ್ 
ಕ್ರಿಕೆಟ್

ಕೊಹ್ಲಿ ನಾಯಕತ್ವದ ಟೀಂ ಇಂಡಿಯಾವನ್ನು ಮಣಿಸುವುದು ತುಂಬ ಕಷ್ಟ: ಆಫ್ರಿಕಾ ನಾಯಕ ಡುಪ್ಲೆಸಿಸ್

ಭಾರತ ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ನಮ್ಮ ಮೇಲೆ ಪಾರಮ್ಯ ಮೆರೆದರು ಎಂದು ದಕ್ಷಿಣ ಆಫ್ರಿಕಾ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದರು.

ರಾಂಚಿ: ಭಾರತ ತಂಡ ಬ್ಯಾಟಿಂಗ್, ಬೌಲಿಂಗ್ ಹಾಗೂ ಫೀಲ್ಡಿಂಗ್ ಮೂರು ವಿಭಾಗಗಳಲ್ಲಿ ನಮ್ಮ ಮೇಲೆ ಪಾರಮ್ಯ ಮೆರೆದರು ಎಂದು ದಕ್ಷಿಣ ಆಫ್ರಿಕಾ ನಾಯಕ ಫಾಫ್ ಡುಪ್ಲೆಸಿಸ್ ಹೇಳಿದರು.

ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ಭಾರತ ತಂಡ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಇನಿಂಗ್ಸ್ ಹಾಗೂ 202 ರನ್ ಗಳಿಂದ ಭರ್ಜರಿ ಜಯ ಸಾಧಿಸಿತು. ಇದರೊಂದಿಗೆ ಮೂರು ಪಂದ್ಯಗಳ ಟೆಸ್ಟ್ ಸರಣಿಯನ್ನು ಭಾರತ 3-0 ಅಂತರದಲ್ಲಿ ಕ್ಲೀನ್ ಸ್ವೀಪ್ ಮಾಡಿಕೊಂಡಿತು.

ಪಂದ್ಯದ ಬಳಿಕ ಮಾತನಾಡಿದ ಹರಿಣಗಳ ನಾಯಕ ಫಾಫ್ ಡುಪ್ಲೆಸಿಸ್, ಪ್ರಸಕ್ತ ಸರಣಿ ನಮ್ಮ ಪಾಲಿಗೆ ಕಠಿಣವಾಗಿತ್ತು. ಮತ್ತೊಮ್ಮೆ ಬಲಿಷ್ಟ ಬ್ಯಾಟಿಂಗ್ ಪಡೆಯೊಂದಿಗೆ ಭಾರತಕ್ಕೆ ಪ್ರವಾಸ ಮಾಡುತ್ತೇವೆ ಎಂದು ಭರವಸೆ ನೀಡಿದರು.

ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ತಂಡವನ್ನು ಎದುರಿಸುವುದು ನಿಜಕ್ಕೂ ಕಷ್ಟ. ಸರಣಿಯುದ್ದಕ್ಕೂ ಬ್ಯಾಟಿಂಗ್, ಬೌಲಿಂಗ್ ಹಾಗೂ ಫಿಲ್ಡಿಂಗ್ ಮೂರು ವಿಭಾಗಗಳಲ್ಲಿ ನಮ್ಮ ಮೇಲೆ ಪ್ರಭುತ್ವ ಸಾಧಿಸಿತು. ವಿಶೇಷವಾಗಿ ಭಾರತದ ವೇಗಿಗಳನ್ನು ಎದುರಿಸುವುದು ಕಠಿಣವಾಗಿತ್ತು. ಭಾರತದ ವೇಗಿಗಳಿಗೆ ನಮ್ಮ ತಂಡದ ವೇಗಿಗಳನ್ನು ಹೊಂದಾಣಿಕೆ ಮಾಡಲು ಸಾಧ್ಯವಿಲ್ಲ ಎಂದರು.

ಸರಣಿ ಆರಂಭಕ್ಕೂ ಮುನ್ನ ಭಾರತದ ಸ್ಪಿನ್ ಬಗ್ಗೆ ಚರ್ಚೆ ನಡೆಸಲಾಗಿತ್ತು. ಇದೇ ಸಂಗತಿ ಮನಸಿನಲ್ಲಿಟ್ಟುಕೊಂಡು ಭಾರತಕ್ಕೆ ಬಂದಿದ್ದೆವು. ಏಕೆಂದರೆ, 2015ರ ಬಳಿಕ ಇಲ್ಲಿನ ಪಿಚ್‍ಗಳಿಗೆ ಪೂರಕವಾಗಿ ಸಿದ್ಧಪಡಿಸಲಾಗಿದೆ.

ನಮ್ಮದು ಯುವ ಆಟಗಾರರನ್ನು ಒಳಗೊಂಡ ತಂಡವಾಗಿದ್ದು, ಇನ್ನೂ ಮೂರು ಅಥವಾ ನಾಲ್ಕು ವರ್ಷಗಳ ಬಳಿಕ ಇವರೆಲ್ಲ ಅನುಭವಿಗಳಾಗಿರುತ್ತಾರೆ ಎಂದು ಡುಪ್ಲೆಸಿಸ್ ಹೇಳಿದರು. ದಕ್ಷಿಣ ಆಫ್ರಿಕಾ ಡಿಸೆಂಬರ್ 26 ರಿಂದ ತವರಿನಲ್ಲಿ ಇಂಗ್ಲೆಂಡ್ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT