ಮಾಯಾಂಕ್ ಅಗರವಾಲ್ 
ಕ್ರಿಕೆಟ್

ಕರ್ನಾಟಕ ತಂಡ ಸೇರಿದ 'ದ್ವಿಶತಕ ವೀರ' ಮಯಾಂಕ್ ಅಗರವಾಲ್

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರ್ನಾಟಕದ ಮಯಾಂಕ್ ಅಗರ್ ವಾಲ್, ಕರ್ನಾಟಕ ತಂಡ ಸೇರಿಕೊಂಡಿದ್ದಾರೆ.

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರ್ನಾಟಕದ ಮಯಾಂಕ್ ಅಗರ್ ವಾಲ್, ಕರ್ನಾಟಕ ತಂಡ ಸೇರಿಕೊಂಡಿದ್ದಾರೆ. 

ಬುಧವಾರ ವಿಜಯ ಹಜಾರೆ ಏಕದಿನ ಸರಣಿಯ ಸೆಮಿಫೈನಲ್ಸ್ ಪಂದ್ಯದಲ್ಲಿ ಕರ್ನಟಕ, ಚತ್ತೀಸ್ ಗಢ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಸೋಮವಾರ ತಂಡವನ್ನು ಪ್ರಕಟಿಸಲಾಗಿತ್ತು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯ ನಾಲ್ಕನೇ ದಿನಕ್ಕೆ ಮುಗಿದಿದೆ. ಹೀಗಾಗಿ ಕರ್ನಾಟಕದ ಸ್ಟಾರ್ ಆಟಗಾರ ಮಾಯಾಂಕ್ ಅಗರ್ ವಾಲ್ ಮಹತ್ವದ ಪಂದ್ಯದಲ್ಲಿ ಕರ್ನಾಟಕ ತಂಡ ಸೇರಿಕೊಂಡಿದ್ದಾರೆ. 

ಭರವಸೆಯ ಆಟಗಾರ ಅಭಿಷೇಕ್ ರೆಡ್ಡಿ ಅವರ ಸ್ಥಾನದಲ್ಲಿ ಮಯಾಂಕ್ ಬ್ಯಾಟ್ ಮಾಡಲಿದ್ದಾರೆ. ಮಯಾಂಕ್ ತಂಡಕ್ಕೆ ಮರಳಿದ್ದರಿಂದ ಬ್ಯಾಟಿಂಗ್ ಬಲ ಹೆಚ್ಚಿದೆ. ಮನೀಷ್ ಪಾಂಡೆ ಪಡೆ ಈ ಬಾರಿ ವಿಜಯ ಹಜಾರೆ ಏಕದಿನ ಸರಣಿಯ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಮಾಯಾಂಕ್ ದ್ವಿಶತಕ ಸಾಧನೆ (215 ರನ್) ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವು ಇಲ್ಲಿ ಹುಟ್ಟೋದು ಬೇಡ ನಿಮ್ಮ ಕ್ಷೇತ್ರದ ಶೇ. 75 ರಷ್ಟಾದರೂ ಇಲ್ಲಿ ಅಭಿವೃದ್ಧಿ ಮಾಡಿ: ಡಿಕೆಶಿಗೆ ಖರ್ಗೆ ಟಾಂಗ್

ಯಶ್ 'ಟಾಕ್ಸಿಕ್' ಟೀಸರ್ ವಿರುದ್ಧ ಮಹಿಳಾ ಆಯೋಗಕ್ಕೆ ಎಎಪಿ ದೂರು; ಆ ದೃಶ್ಯಕ್ಕೆ ಆಕ್ಷೇಪ!

ಟ್ರಂಪ್ ಗೆ 'ಮರೆಯಲಾಗದ ಪಾಠ' ಕಲಿಸುತ್ತೇವೆ: ಖಡಕ್ ವಾರ್ನಿಂಗ್ ನೀಡಿದ ಇರಾನ್ ಸಂಸತ್ ಸ್ಪೀಕರ್!

ಲೂಟಿಕೋರನ ಭಯವೇ? ಖರ್ಗೆಯವರೇ, ಭಿಕ್ಷೆ ಬೇಡುವ 'ದಯನೀಯ ಸ್ಥಿತಿ' ಬರಬಾರದಿತ್ತು! ಜೆಡಿಎಸ್ ಟಾಂಗ್

ಕುರ್ಚಿ ಕದನ: ಡಿಕೆಶಿ ಸಿಎಂ ಆಗುವುದು ಯಾವಾಗ?; ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ

SCROLL FOR NEXT