ಮಾಯಾಂಕ್ ಅಗರವಾಲ್ 
ಕ್ರಿಕೆಟ್

ಕರ್ನಾಟಕ ತಂಡ ಸೇರಿದ 'ದ್ವಿಶತಕ ವೀರ' ಮಯಾಂಕ್ ಅಗರವಾಲ್

ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರ್ನಾಟಕದ ಮಯಾಂಕ್ ಅಗರ್ ವಾಲ್, ಕರ್ನಾಟಕ ತಂಡ ಸೇರಿಕೊಂಡಿದ್ದಾರೆ.

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶನ ನೀಡಿ ಎಲ್ಲರ ಚಿತ್ತ ಕದ್ದಿರುವ ಟೀಮ್ ಇಂಡಿಯಾದ ಸ್ಟಾರ್ ಆಟಗಾರ ಕರ್ನಾಟಕದ ಮಯಾಂಕ್ ಅಗರ್ ವಾಲ್, ಕರ್ನಾಟಕ ತಂಡ ಸೇರಿಕೊಂಡಿದ್ದಾರೆ. 

ಬುಧವಾರ ವಿಜಯ ಹಜಾರೆ ಏಕದಿನ ಸರಣಿಯ ಸೆಮಿಫೈನಲ್ಸ್ ಪಂದ್ಯದಲ್ಲಿ ಕರ್ನಟಕ, ಚತ್ತೀಸ್ ಗಢ ತಂಡವನ್ನು ಎದುರಿಸಲಿದೆ. ಈ ಪಂದ್ಯಕ್ಕಾಗಿ ಸೋಮವಾರ ತಂಡವನ್ನು ಪ್ರಕಟಿಸಲಾಗಿತ್ತು. ಆದರೆ, ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯ ನಾಲ್ಕನೇ ದಿನಕ್ಕೆ ಮುಗಿದಿದೆ. ಹೀಗಾಗಿ ಕರ್ನಾಟಕದ ಸ್ಟಾರ್ ಆಟಗಾರ ಮಾಯಾಂಕ್ ಅಗರ್ ವಾಲ್ ಮಹತ್ವದ ಪಂದ್ಯದಲ್ಲಿ ಕರ್ನಾಟಕ ತಂಡ ಸೇರಿಕೊಂಡಿದ್ದಾರೆ. 

ಭರವಸೆಯ ಆಟಗಾರ ಅಭಿಷೇಕ್ ರೆಡ್ಡಿ ಅವರ ಸ್ಥಾನದಲ್ಲಿ ಮಯಾಂಕ್ ಬ್ಯಾಟ್ ಮಾಡಲಿದ್ದಾರೆ. ಮಯಾಂಕ್ ತಂಡಕ್ಕೆ ಮರಳಿದ್ದರಿಂದ ಬ್ಯಾಟಿಂಗ್ ಬಲ ಹೆಚ್ಚಿದೆ. ಮನೀಷ್ ಪಾಂಡೆ ಪಡೆ ಈ ಬಾರಿ ವಿಜಯ ಹಜಾರೆ ಏಕದಿನ ಸರಣಿಯ ಚಾಂಪಿಯನ್ ಪಟ್ಟದ ಮೇಲೆ ಕಣ್ಣು ನೆಟ್ಟಿದೆ.

ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯವೊಂದರಲ್ಲಿ ಮಾಯಾಂಕ್ ದ್ವಿಶತಕ ಸಾಧನೆ (215 ರನ್) ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

SCO Summit: ಒಂದೇ ವೇದಿಕೆಯಲ್ಲಿ ಚೀನಾ- ಭಾರತ- ರಷ್ಯಾ; ಕೆರಳಿದ Trump ಭಾರತದ ಬಗ್ಗೆ ಹೇಳಿದ್ದೇನು?

ಎಲ್ಲರನ್ನೂ ಕಾಯಿಸುತ್ತಿದ್ದ ಪುಟಿನ್ ಪ್ರಧಾನಿ ಮೋದಿಗಾಗಿ 10 ನಿಮಿಷಗಳ ಕಾಲ ಕಾರಿನಲ್ಲಿ ಕಾದು ಕುಳಿತ್ತಿದ್ದರು, Video!

ಧರ್ಮಸ್ಥಳದ ವಿರುದ್ಧ ಬಿಜೆಪಿಯಿಂದಲೇ ಷಡ್ಯಂತ್ರ: ಡಿಕೆ ಶಿವಕುಮಾರ್

ಸರ್ಕಾರಿ ಬಂಗಲೆ ಖಾಲಿ ಮಾಡಿದ ಮಾಜಿ ಉಪರಾಷ್ಟ್ರಪತಿ ಜಗದೀಪ್ ಧಂಖರ್!

ಸೌಜನ್ಯ ಹೆಸರು ಹೇಳಿ ದುಡ್ಡು ಮಾಡಿದೆ ಎಂದು ನಿಮ್ಮ ಪಕ್ಷದವರೇ ಟೀಕಿಸಿದರು: ವಿಜಯೇಂದ್ರಗೆ ಸೌಜನ್ಯ ತಾಯಿ ತರಾಟೆ

SCROLL FOR NEXT