ಟೀಂ-ಇಂಡಿಯಾ-ಧೋನಿ-ರವಿಶಾಸ್ತ್ರಿ 
ಕ್ರಿಕೆಟ್

ರಾಂಚಿಯಲ್ಲಿ ಎಂಎಸ್ ಧೋನಿಗೆ ಟೀಂ ಇಂಡಿಯಾದಿಂದ ಗೆಲುವಿನ ಉಡುಗೊರೆ, ಅದು ಏನು ಅಂತೀರಾ?

ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

ರಾಂಚಿ: ಇಲ್ಲಿನ ಜೆಎಸ್‍ಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ಮೂರನೇ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಕೊಹ್ಲಿ ಪಡೆ ಡ್ರೆಸ್ಸಿಂಗ್ ಕೊಠಡಿಯಲ್ಲಿ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಕಾಣಿಸಿಕೊಂಡರು.

ಚೊಚ್ಚಲ ಟೆಸ್ಟ್ ಪಂದ್ಯವಾಡಿದ ಜಾರ್ಖಂಡ್ ರಾಜ್ಯದ ಶಹಬಾಜ್ ನದೀಮ್ ಅವರ ಬಳಿ ಕೆಲಕಾಲ ಮಾತನಾಡಿದ ಧೋನಿ, ಉಪಯುಕ್ತ ಸಲಹೆಗಳನ್ನು ನೀಡಿದರು.

ನಾಲ್ಕನೇ ದಿನ ಭಾರತ ಕೇವಲ 10 ನಿಮಿಷಗಳಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಆಲೌಟ್ ಮಾಡಿತು. ಆ ಮೂಲಕ ಇನಿಂಗ್ಸ್ ಹಾಗೂ 202 ರನ್‍ಗಳ ಜಯ ದಾಖಲಿಸಿ 3-0 ಅಂತರದಲ್ಲಿ ಟೆಸ್ಟ್ ಸರಣಿ ತನ್ನದಾಗಿಸಿಕೊಂಡಿತು.

ಟೀಮ್ ಇಂಡಿಯಾ ಮುಖ್ಯ ಕೋಚ್ ರವಿಶಾಸ್ತ್ರಿ ಅವರು ಧೋನಿ ಅವರೊಂದಿಗಿನ ಫೋಟೊವನ್ನು ತಮ್ಮ ಅಧಿಕೃತ ಟ್ವಿಟರ್ ನಲ್ಲಿ ಪೋಸ್ಟ್ ಮಾಡಿದ್ದಾರೆ. ಅದ್ಭುತ ಟೆಸ್ಟ್ ಸರಣಿ ಜಯದ ಬಳಿಕ ಭಾರತೀಯ ನಿಜವಾದ ದಂತಕತೆ ನೋಡಿದ್ದಕ್ಕೆ ತುಂಬಾ ಸಂತಸವಾಯಿತು ಎಂದು ಶೀರ್ಷಿಕೆ ನೀಡಿದ್ದಾರೆ.

ಮಹೇಂದ್ರ ಸಿಂಗ್ ಧೋನಿ 2014ರಲ್ಲಿಯೇ ಟೆಸ್ಟ್ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಹೇಳಿದ್ದರು. ಜುಲೈ 14 ರಂದು ಮುಕ್ತಾಯವಾಗಿದ್ದ ಐಸಿಸಿ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ದಿಂದ ದೂರ ಉಳಿದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT