ಅಧಿಕಾರ ವಹಿಸಿಕೊಂಡ ಸೌರವ್ ಗಂಗೂಲಿ 
ಕ್ರಿಕೆಟ್

ಇಂದು ಅಧಿಕೃತ: ಬಿಸಿಸಿಐ ಅಧ್ಯಕ್ಷರಾಗಿ ಸೌರವ್ ಗಂಗೂಲಿ ಅಧಿಕಾರ ಸ್ವೀಕಾರ 

ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐನ 39ನೇ ಅಧ್ಯಕ್ಷರಾಗಿ ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಂಡಿದ್ದಾರೆ. 

ಮುಂಬೈ: ವಿಶ್ವದ ಅತಿ ಶ್ರೀಮಂತ ಕ್ರಿಕೆಟ್ ಮಂಡಳಿಯಾದ ಬಿಸಿಸಿಐನ 39ನೇ ಅಧ್ಯಕ್ಷರಾಗಿ ಬುಧವಾರ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಅಧಿಕಾರ ವಹಿಸಿಕೊಂಡಿದ್ದಾರೆ.


ಭಾರತೀಯ ಕ್ರಿಕೆಟ್ ತಂಡದ ಜವಾಬ್ದಾರಿಯನ್ನು ಮುಂದಿನ  11 ತಿಂಗಳವರೆಗೆ ಸೌರವ್ ಗಂಗೂಲಿಯವರಿಗೆ ವಹಿಸುವುದೆಂದು ಇತ್ತೀಚಿನ ಬಿಸಿಸಿಐ ಸಾಮಾನ್ಯ ಮಂಡಳಿ ಸಭೆಯಲ್ಲಿ ನೀಡಲಾಗಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಳಿತಾಧಿಕಾರಿಗಳ ಸಮಿತಿಯ 33 ತಿಂಗಳ ಆಳ್ವಿಕೆ ಇಂದಿಗೆ ಅಂತ್ಯವಾಗಿದೆ. ಈ ಮೂಲಕ ಸೌರವ್ ಗಂಗೂಲಿ ಬಿಸಿಸಿಐ ಅಧ್ಯಕ್ಷ ಎಂದು ಕಳೆದ ವಾರದ ತೆಗೆದುಕೊಂಡಿದ್ದ ತೀರ್ಮಾನಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.


ಗಂಗೂಲಿಯವರ ಆಳ್ವಿಕೆ ಸಂದರ್ಭದಲ್ಲಿ ಬಿಸಿಸಿಐ ಮಾಜಿ ಅಧ್ಯಕ್ಷ ಎನ್ ಶ್ರೀನಿವಾಸನ್ ಮತ್ತು ಮಾಜಿ ಕಾರ್ಯದರ್ಶಿ ನಿರಂಜನ್ ಶಾ ಅವರ ಸಹಾಯ ಪಡೆದುಕೊಂಡು ಆಳ್ವಿಕೆ ನಡೆಸಲಿದ್ದು, ಅವರ ಮಕ್ಕಳು ಇದೀಗ ಬಿಸಿಸಿಐ ಆಡಳಿತ ವಿಭಾಗದ ಭಾಗವಾಗಿದ್ದಾರೆ.

ವಿಜಿಯನಗರದ ಮಹಾರಾಜ ನಂತರ ಭಾರತೀಯ ಕ್ರಿಕೆಟ್ ಆಟಗಾರರಲ್ಲಿ ಬಿಸಿಸಿಐ ಅಧ್ಯಕ್ಷರಾಗಿರುವವರಲ್ಲಿ ಸೌರವ್ ಗಂಗೂಲಿ ಎರಡನೆಯವರು.ಸೌರವ್ ಗಂಗೂಲಿಯವರ ಅಧಿಕಾರಾವಧಿ ಮುಂದಿನ ವರ್ಷ ಸೆಪ್ಟೆಂಬರ್ ವರೆಗೆ ಮಾತ್ರ ಇರುತ್ತದೆ. ಏಕೆಂದರೆ ಅವರು ಈಗಾಗಲೇ ಬಂಗಾಳ ಕ್ರಿಕೆಟ್ ಅಸೋಸಿಯೇಷನ್ ನ ಅಧ್ಯಕ್ಷರು ಕೂಡ ಆಗಿದ್ದಾರೆ. ಬಿಸಿಸಿಐ ನಿಯಮ ಪ್ರಕಾರ ಅವರು ಕೂಲಿಂಗ್ ಆಫ್ ಪಿರೆಡ್ ನಿಂದಾಗಿ ನಂತರ ಬಿಸಿಸಿಐ ಹುದ್ದೆಗೆ ರಾಜೀನಾಮೆ ನೀಡಲೇ ಬೇಕು. 

ಬಿಸಿಸಿಐ ಮಾಜಿ ಅಧ್ಯಕ್ಷ ಮತ್ತು ಇಂದಿನ ಕಿರಿಯ ಹಣಕಾಸು ಸಚಿವ ಅನುರಾಗ್ ಠಾಕೂರ್ ಅವರ ಕಿರಿಯ ಸೋದರ ಅರುಣ್ ಧುಮಾಲ್ ಖಜಾಂಚಿ ಮತ್ತು ಕೇರಳದ ಜಯೇಶ್ ಜಾರ್ಜ್ ಜಂಟಿ ಕಾರ್ಯದರ್ಶಿಯಾಗಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪುತ್ರ ಜಯ್ ಶಾ ಕಾರ್ಯದರ್ಶಿಯಾಗಿರುತ್ತಾರೆ.

ಇವರೆಲ್ಲರೂ ಅವಿರೋಧವಾಗಿ ಆಯ್ಕೆಯಾಗಿರುವುದರಿಂದ ಈ ಬಾರಿ ಚುನಾವಣೆ ನಡೆಯಲಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

SCROLL FOR NEXT