Bangladeshi players 
ಕ್ರಿಕೆಟ್

ಪ್ರತಿಭಟನೆಗೆ ಮಣಿದ ಬಾಂಗ್ಲಾ ಕ್ರಿಕೆಟ್ ಮಂಡಳಿ, ಆಟಗಾರರ ಮುಷ್ಕರ ವಾಪಸ್

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಂಗ್ಲಾದೇಶ ಕ್ರಿಕೆಟಿಗರು ನಡೆಸುತ್ತಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

ಢಾಕಾ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಾಂಗ್ಲಾದೇಶ ಕ್ರಿಕೆಟಿಗರು ನಡೆಸುತ್ತಿದ್ದ ಮುಷ್ಕರವನ್ನು ಹಿಂಪಡೆಯಲಾಗಿದೆ.

ಆಟಗಾರರು ಮುಂದಿಟ್ಟದ್ದ 13 ಬೇಡಿಕೆಗಳ ಪೈಕಿ 11 ಬೇಡಿಕೆಗಳ ಈಡೇರಿಕೆಗೆ ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ ಒಪ್ಪಿಗೆ ನೀಡಿದ್ದು, ಮಂಡಳಿ ನಡೆಸಿದ ಸಂಧಾನ ಸಭೆಯಲ್ಲಿನ ನಿರ್ಧಾರಕ್ಕೆ ಆಟಗಾರರು ಒಪ್ಪಿಗೆ ಸೂಚಿಸಿದ್ದಾರೆ. ಅಲ್ಲದೆ ತಮ್ಮ ಮುಷ್ಕರವನ್ನು ವಾಪಸ್ ಪಡೆದಿದ್ದಾರೆ.

ಈ ಬಗ್ಗೆ ಸಂಧಾನಸಭೆ ಬಳಿಕ ಮಾತನಾಡಿದ ಬಿಸಿಬಿ ಅಧ್ಯಕ್ಷ ನಜ್ಮುಲ್ ಹಸನ್ ಪಪನ್ ಅವರು, ಸಭೆ ಫಲಪ್ರದವಾಗಿದ್ದು, ಆಟಗಾರರು ಮುಷ್ಕರ ಕೈ ಬಿಟ್ಟಿದ್ದಾರೆ. ಆಟಗಾರರು ಮುಂದಿಟ್ಟದ್ದ 13 ಬೇಡಿಕೆಗಳ ಪೈಕಿ 11 ಬೇಡಿಕೆಗಳ ಈಡೇರಿಸಲು ನಿರ್ಧರಿಸಲಾಗಿದೆ. ಅಲ್ಲದೆ ಬಿಸಿಬಿಯ ಲಾಭಾಂಶದಲ್ಲಿ ಕೆಲ ಪ್ರಮಾಣದ ಲಾಭಾಂಶವನ್ನು ಆಟಾಗರರಿಗೆ ಹಂಚಿಕೆ ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.

ಇದೇ ವಿಚಾರವಾಗಿ ಮಾತನಾಡಿದ ಬಾಂಗ್ಲಾದ ಹಿರಿಯ ಆಟಗಾರ ಶಕೀಬ್ ಅಲ್ ಹಸನ್ ಅವರು, ಪಪನ್ ಅವರು ಹೇಳಿದಂತೆ ಸಂಧಾನ ಯಶಸ್ವಿಯಾಗಿದೆ. ನಾವು ಈಗಿನಿಂದಲೇ ಮುಷ್ಕರವನ್ನು ಕೈಬಿಟ್ಟಿದ್ದೇವೆ ಎಂದು ಹೇಳಿದ್ದಾರೆ. 

50ಕ್ಕೂ ಅಧಿಕ ದೇಶೀಯ ಆಟಗಾರರು ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಯನ್ನು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿಯ ಮುಂದಿಟ್ಟಿದ್ದರು. ಮುಷ್ಕರದಿಂದಾಗಿ ಮುಂದಿನ ತಿಂಗಳ ಬಾಂಗ್ಲಾದೇಶದ ಭಾರತ ಪ್ರವಾಸದ ಮೇಲೂ ಕರಿನೆರಳು ಬಿದ್ದಿತ್ತು. ಇದೀಗ ಮುಷ್ಕರ ವಾಪಸ್ ಆಗಿದ್ದು, ಬಾಂಗ್ಲಾದೇಶದ ಭಾರತ ಪ್ರವಾಸ ಖಚಿತವಾದಂತಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

Pak ಸಚಿವನಿಗೆ ಮುಖಭಂಗ: ನೆತನ್ಯಾಹು ವಿರುದ್ಧ ಮಾತಾಡ್ತಿದ್ದಂತೆ ಶೋ ನಿಲ್ಲಿಸಿ ಆಸಿಫ್‌ನನ್ನು ಹೊರಕಹಿಸಿದ ಆ್ಯಂಕರ್, Video!

'ಅಪ್ಪ-ಅಮ್ಮನ ಪ್ರಜ್ಞೆ ತಪ್ಪಿಸಿ ಕಟ್ಟಿಹಾಕಿ ಕಳ್ಳತನ': ಮನೆಗೆಲಸದವರ ಮೇಲೆ ಮಾಜಿ ಐಎಎಸ್ ಅಧಿಕಾರಿ Puja Khedkar ಆರೋಪ!

1st ODI: ಮಿಚೆಲ್ ಸ್ಫೋಟಕ ಭರ್ಜರಿ ಬ್ಯಾಟಿಂಗ್, ಭಾರತಕ್ಕೆ ಗೆಲ್ಲಲು ಬೃಹತ್ ಗುರಿ ನೀಡಿದ ಕಿವೀಸ್

ಕೇರಳದಲ್ಲಿ ಕಾನೂನು ಸುವ್ಯವಸ್ಥೆಗೆ ಬೆದರಿಕೆ: SDPI, ಜಮಾತ್, ಸಂಘಟನೆಗಳ ಪಾತ್ರ ಪ್ರಶ್ನಿಸಿದ ಅಮಿತ್ ಶಾ!

SCROLL FOR NEXT