ಸಂಗ್ರಹ ಚಿತ್ರ 
ಕ್ರಿಕೆಟ್

ವಿದೇಶಿ ನೆಲಗಳಲ್ಲಿ ಟಾಸ್ ಗೆ ತೆರಳಲ್ಲ; ಡುಪ್ಲೆಸಿಸ್ ನಿರ್ಧಾರಕ್ಕೆ ಕ್ರಿಕೆಟ್ ಅಭಿಮಾನಿಗಳ ಕಿಡಿ

ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲುಕಂಡಿರುವ ಆಫ್ರಿಕಾ ತಂಡದ ನಾಯಕ ತಮ್ಮ ಸೋಲಿಗೆ ಟಾಸ್ ಕಾರಣ ಎಂದು ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ.

ಕೇಪ್ ಟೌನ್: ಭಾರತದ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಹೀನಾಯ ಸೋಲುಕಂಡಿರುವ ಆಫ್ರಿಕಾ ತಂಡದ ನಾಯಕ ತಮ್ಮ ಸೋಲಿಗೆ ಟಾಸ್ ಕಾರಣ ಎಂದು ಗೂಬೆ ಕೂರಿಸುವ ಕೆಲಸ ಮಾಡಿದ್ದಾರೆ.

ಭಾರತದ ವಿರುದ್ಧ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಅಂತರದಲ್ಲಿ ಹೀನಾಯವಾಗಿ ಸೋತು ಸ್ವದೇಶ ಆಫ್ರಿಕಾಗೆ ತೆರಳಿದ ಬಳಿಕ ಅಲ್ಲಿ ತಮ್ಮ ರಾಗ ಬದಲಿಸಿದ್ದು, ತಮ್ಮ ತಂಡದ ಹೀನಾಯ ಸೋಲಿಗೆ ಟಾಸ್ ಕಾರಣ ಎಂದು ಹೇಳಿದ್ದಾರೆ. ಅಲ್ಲದೆ ಇನ್ನು ಮುಂದೆ ವಿದೇಶಗಳಲ್ಲಿ ನಡೆಯುವ ಸರಣಿಗಳ ಟಾಸ್ ಗೆ ಹೋಗುವುದಿಲ್ಲ ಎಂದು ಘೋಷಣೆ ಮಾಡಿದ್ದಾರೆ.

ಆಫ್ರಿಕಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಫಾಫ್ ಡುಪ್ಲೆಸಿಸ್, 'ಇನ್ನೂ ಮಂದೆ ಹೊರ ದೇಶಗಳಲ್ಲಿ ನಡೆಯುವ ಪಂದ್ಯಗಳಲ್ಲಿ ಟಾಸ್ ಗೆ ತೆರಳವುದಿಲ್ಲ. ಭಾರತದಲ್ಲಿ ನಮಗೆ ಕಹಿ ಅನುಭವವಾಗಿದ್ದು, ಟೆಸ್ಟ್ ಸರಣಿಯ ಪ್ರತಿಯೊಂದು ಪಂದ್ಯದಲ್ಲಿ ಭಾರತ ತಂಡವೇ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿ 500 ಕ್ಕೂ ಹೆಚ್ಚು ರನ್ ಗಳಿಸುತ್ತಿತ್ತು. ನಂತರ, ಮಂಧ ಬೆಳಕಿನಿಂದ ಡಿಕ್ಲೇರ್ ಮಾಡಿಕೊಂಡು ನಮ್ಮ ತಂಡದ ಮೂರು ವಿಕೆಟ್ ಕಬಳಿಸುತ್ತಿತ್ತು. ನಂತರ ಮೂರನೇ ದಿನ ಆರಂಭದಲ್ಲಿ ನಾವು ತೀವ್ರ ಒತ್ತಡಕ್ಕೆ ಒಳಗಾಗುತ್ತಿದ್ದೆವು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನು ಡುಪ್ಲೆಸಿಸ್ ಹೇಳಿಕೆಗೆ ಕ್ರಿಕೆಟ್ ಅಭಿಮಾನಿಗಳು ತೀವ್ರ ಕಿಡಿಕಾರುತ್ತಿದ್ದು, ಸೋಲನ್ನು ಸ್ವೀಕರಿಸಿದ ನಾಯಕನಿಂದ ಮಾತ್ರ ಇಂತಹ ಹೇಳಿಕೆ ಬರಲು ಸಾಧ್ಯ. ಡುಪ್ಲೆಸಿಸ್‌ಗೆ ತಿರುಗೇಟು ನೀಡಲು ಮನಸ್ಸಾಗುತ್ತಿದೆ. ಆದರೆ ನಾನು ಸಿಎಸ್‌ಕೆ ಅಭಿಮಾನಿ ಹೀಗಾಗಿ ಸುಮ್ಮನಿದ್ದೇನೆ ಎಂದು ಅಭಿಮಾನಿಗಳು ಪ್ರತಿಕ್ರಿಯೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT