ಶಕೀಬ್ ಅಲ್ ಹಸನ್ 
ಕ್ರಿಕೆಟ್

2 ನಿಷೇಧಿತ ಶಕಿಬ್ ಅಲ್ ಹಸನ್-ಭಾರತೀಯ ಬುಕ್ಕಿ ನಡುವಿನ ಸಂಭಾಷಣೆ ಇಲ್ಲಿದೆ ನೋಡಿ!

ಮ್ಯಾಚ್‌ ಫಿಕ್ಸಿಂಗ್‌ ಸಲುವಾಗಿ ಬುಕೀಗಳು ಸಂಪರ್ಕಿಸಿದ್ದ ವಿಚಾರವನ್ನು ಐಸಿಸಿ ಗಮನಕ್ಕೆ ತರದೆ ಭ್ರಷ್ಟಾಚಾರ ತಡೆ ನಿಯಮವನ್ನು ಉಲ್ಲಂಘಿಸಿರುವ ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಸ್ಟಾರ್‌ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌, ಇದೀಗ ಎಲ್ಲಾ...

ದುಬೈ: ಮ್ಯಾಚ್‌ ಫಿಕ್ಸಿಂಗ್‌ ಸಲುವಾಗಿ ಬುಕೀಗಳು ಸಂಪರ್ಕಿಸಿದ್ದ ವಿಚಾರವನ್ನು ಐಸಿಸಿ ಗಮನಕ್ಕೆ ತರದೆ ಭ್ರಷ್ಟಾಚಾರ ತಡೆ ನಿಯಮವನ್ನು ಉಲ್ಲಂಘಿಸಿರುವ ಬಾಂಗ್ಲಾದೇಶ ಕ್ರಿಕೆಟ್‌ ತಂಡದ ಸ್ಟಾರ್‌ ಆಲ್‌ರೌಂಡರ್‌ ಶಕಿಬ್‌ ಅಲ್‌ ಹಸನ್‌, ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ನಿಂದ 2 ವರ್ಷಗಳ ನಿಷೇಧ ಶಿಕ್ಷೆಗೆ ಗುರಿಯಾಗಿದ್ದಾರೆ. ಶಕಿಬ್ ಅಲ್ ಹಸನ್ ಹಾಗೂ ಬುಕಿ ನಡುವಿನ ಸಂಭಾಷಣೆಯನ್ನು ಐಸಿಸಿ ಬಿಡುಗಡೆ ಮಾಡಿದ್ದು, ಬುಕ್ಕಿಯನ್ನು ಭಾರತ ಮೂಲದ ದೀಪಕ್ ಅಗರ್ವಾಲ್ ಎಂದು ಗುರುತಿಸಲಾಗಿದೆ.

ವರ್ಷದ ಸ್ಟಾರ್‌ ಆಲ್‌ರೌಂಡರ್‌ ಶಕಿಬ್‌ ತಮ್ಮ ತಪ್ಪನ್ನು ಒಪ್ಪಿಕೊಂಡಿದ್ದಾರೆ. ಅಲ್ಲದೆ ತಮ್ಮ ವಿರುದ್ಧದ ಶಿಕ್ಷೆಗೂ ಸಮ್ಮತಿಸಿದ್ದಾರೆ. ಇದರೊಂದಿಗೆ 2020ರ ಅಕ್ಟೋಬರ್‌ 29ರವರೆಗೆ ನಿಷೇಧ ಜಾರಿಯಿರಲಿದೆ. ಈ ಮಧ್ಯೆ ಐಸಿಸಿ ಭ್ರಷ್ಟಾಚಾರ ನಿಯಮಗಳಿಗೆ ಬದ್ಧರಾಗಿ ನಡೆದುಕೊಳ್ಳುವಲ್ಲಿ ಶಕಿಬ್‌ ವಿಫಲರಾದರೆ ಹೆಚ್ಚುವರಿ 12 ತಿಂಗಳ ಅಮಾನತು ಶಿಕ್ಷೆ ಸೇರ್ಪಡೆಯಾಗಲಿದ್ದು, ಒಟ್ಟು 2 ವರ್ಷ ಕಾಲ ಕ್ರಿಕೆಟ್‌ನಿಂದ ದೂರ ಉಳಿಯುವಂತಾಗುತ್ತದೆ. 12 ತಿಂಗಳ ಶಿಕ್ಷೆ ತಪ್ಪಿಸಿಕೊಳ್ಳುವುದು ಇದೀಗ ಶಕಿಬ್‌ ಕೈಲಿದೆ.

ಮೊದಲಿಗೆ 12 ತಿಂಗಳ ನಿಷೇಧ ಅವಧಿಯಲ್ಲಿ ಶಕಿಬ್‌ ವರ್ಷ ಅಕ್ಟೋಬರ್‌ 8ರಿಂದ ನವೆಂಬರ್‌ 15ರ ವರೆಗೆ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಟಿ20 ಕ್ರಿಕೆಟ್‌ ವಿಶ್ವಕಪ್‌, ಅದಕ್ಕೂ ಮುನ್ನ ಇಂಡಿಯನ್‌ ಪ್ರೀಮಿಯರ್‌ ಲೀಗ್‌ಗಳಿಂದ ಹೊರಗುಳಿಯುವಂತಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!