ಸಂಜು ಸ್ಯಾಮ್ಸನ್ 
ಕ್ರಿಕೆಟ್

ಧೋನಿ-ಕೊಹ್ಲಿಯಷ್ಟು ಸಿರಿವಂತನಲ್ಲದಿದ್ದರೂ ಮೈದಾನದ ಸಿಬ್ಬಂದಿಗಳಿಗೆ ಸಂಭಾವನೆ ದಾನ ಮಾಡಿದ ಕ್ರಿಕೆಟಿಗ!

ಜಗತ್ತಿನ ಶ್ರೀಮಂತ ಕ್ರಿಕೆಟಿಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಶ್ರೀಮಂತ ಕ್ರಿಕೆಟಿಗ ಎಂಎಸ್ ಧೋನಿ ಕೋಟಿ ಕೋಟಿ ಹಣ ಸಂಪಾದಿಸುತ್ತಾರೆ. ಆದರೆ ಇಲ್ಲೊಬ್ಬ ಆಟಗಾರ ತನಗೆ ನೀಡುವ ಪಂದ್ಯದ ಸಂಭಾವನೆಯನ್ನೇ ಮೈದಾನದ ಸಿಬ್ಬಂದಿಗಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.

ತಿರುವನಂತಪುರಂ: ಜಗತ್ತಿನ ಶ್ರೀಮಂತ ಕ್ರಿಕೆಟಿಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಮತ್ತು ಶ್ರೀಮಂತ ಕ್ರಿಕೆಟಿಗ ಎಂಎಸ್ ಧೋನಿ ಕೋಟಿ ಕೋಟಿ ಹಣ ಸಂಪಾದಿಸುತ್ತಾರೆ. ಆದರೆ ಇಲ್ಲೊಬ್ಬ ಆಟಗಾರ ತನಗೆ ನೀಡುವ ಪಂದ್ಯದ ಸಂಭಾವನೆಯನ್ನೇ ಮೈದಾನದ ಸಿಬ್ಬಂದಿಗಳಿಗೆ ನೀಡಿ ಮಾನವೀಯತೆ ಮೆರೆದಿದ್ದಾರೆ.  

ಹೌದು, ಟೀಂ ಇಂಡಿಯಾ ಎ ತಂಡದ ಆಟಗಾರ ಸಂಜು ಸ್ಯಾಮ್ ಸನ್ ಗ್ರೀನ್ ಫೀಲ್ಡ್ ಮೈದಾನದ ಸಿಬ್ಬಂದಿಗಳಿಗೆ ತನಗೆ ಸಿಕ್ಕ 1.5 ಲಕ್ಷ ರುಪಾಯಿಯನ್ನು ನೀಡಿದ್ದಾರೆ.

ದಕ್ಷಿಣ ಆಫ್ರಿಕಾ ಎ ಮತ್ತು ಭಾರತ ಎ ತಂಡಗಳು ನಡುವೆ ಐದು ಪಂದ್ಯಗಳ ಅನಧಿಕೃತ ಏಕದಿನ ಸರಣಿ ನಡೆದಿದ್ದು ಭಾರತ 4-1 ಅಂತರದಿಂದ ಸರಣಿ ಕೈವಶ ಮಾಡಿಕೊಂಡಿತ್ತು. 

ಇನ್ನು ಕೇರಳದಲ್ಲಿ ನಡೆದಿದ್ದ ಪಂದ್ಯಗಳಿಗೆ ಮಳೆಯಿಂದ ಅಡ್ಡಿಯಾಗಿತ್ತು. ಹೀಗಾಗಿ ಕೆಲ ಓವರ್ ಗಳನ್ನು ಕಡಿತಗೊಳಿಸಲಾಗಿತ್ತು. ಹೀಗೆ ಪಂದ್ಯಗಳ ವೇಳೆ ಮಳೆಯಾದಾಗ ಅಲ್ಲಿನ ಸಿಬ್ಬಂದಿ ಉತ್ತಮವಾಗಿ ಕೆಲಸ ಮಾಡಿ ಪಂದ್ಯಗಳು ಪುನರಾರಂಭವಾಗುವುದಕ್ಕೆ ಕಾರಣರಾಗಿದ್ದರು. ಹೀಗಾಗಿ ನನ್ನ ಸಂಭಾವಣೆಯನ್ನು ಸಿಬ್ಬಂದಿಗಳಿಗೆ ನೀಡಿದ್ದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT