ಕಾರ್ಯಕ್ರಮದಲ್ಲಿ ಅನುಷ್ಕಾ ಹಾಗೂ ವಿರಾಟ್ ಕೊಹ್ಲಿ 
ಕ್ರಿಕೆಟ್

ಕೊಹ್ಲಿ ಕೈಗೆ ಅನುಷ್ಕಾ ಕಿಸ್: ವಿಡಿಯೋ ವೈರಲ್, ನೆಟ್ಟಿಗರಿಂದ ಮೆಚ್ಚುಗೆಯೋ ಮೆಚ್ಚುಗೆ!

ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. 

ನವದೆಹಲಿ: ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿದ್ದ ನಟಿ ಅನುಷ್ಕಾ ಶರ್ಮಾ ಅವರು, ಪತಿ ವಿರಾಟ್ ಕೊಹ್ಲಿಯವರಿಗೆ ನೀಡಿರುವ ಕಿಸ್ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆಯ ಮಹಾಪೂರವನ್ನೇ ಹರಿಸುತ್ತಿದ್ದಾರೆ. 

ವಿಶ್ವದ ಶ್ರೇಷ್ಠ ಕ್ರಿಕೆಟ್ ಮೈದಾನಗಳ ಪೈಕಿ ಒಂದಾಗಿರುವ ದೆಹಲಿಯ ಫಿರೋಜ್ ಷಾ ಕೋಟ್ಲಾ ಕ್ರೀಡಾಂಗಣಕ್ಕೆ ಬಿಜೆಪಿ ಹಿರಿಯ ನಾಯಕ ಮಾಜಿ ಸಚಿವ ದಿವಂಗತ ಅರುಣ್ ಜೇಟ್ಲಿಯವರ ಹೆಸರನ್ನು ಮರುನಾಮಕರಣ ಮಾಡಲಾಗಿದೆ. ಜೊತೆಗೆ ಮೈದಾನದ ಒಂದು ಪೆವಿಲಿಯನ್ ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೆಸರಿಟ್ಟು ಗೌರವಿಸಲಾಗಿದೆ. 

ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿರುಷ್ಕಾ ಜೋಡಿ, ಗಣ್ಯರ ಮಧ್ಯೆ ಕುಳಿತು ಮಾತನಾಡುತ್ತಿದ್ದರು. ಈ ವೇಳೆ ಕೊಹ್ಲಿಯವರ ಕೈಗೆ ಅನುಷ್ಕಾ ಮುತ್ತು ನೀಡಿದ್ದಾರೆ. ಇದರ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದ್ದು, ಇಬ್ಬರ ಪ್ರೀತಿಗೆ ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಅಷ್ಟೇ ಅಲ್ಲದೆ, ಭಾರತದ ಪ್ರಸಿದ್ಧ ಮನರಂಜನೆ ತಾಣವಾದ ಫಿಲ್ಮ್ ಫೇರ್ ವಿಡಿಯೋವನ್ನು ಹಂಚಿಕೊಂಡು ಮುದ್ದಾಗಿದೆ ಎಂದು ಬರೆದುಕೊಂಡಿದೆ.

ಇನ್ನು ಕಾರ್ಯಕ್ರಮದಲ್ಲಿ ಮಾತನಾಡಿರುವ ಕೊಹ್ಲಿಯವರು, ಇದು ಸುಂದರವಾದ ಸಂಜೆಯಾಗಿದೆ. ನನಗಿದು ಎರೆಡೆರಡು ಸಂತೋಷವನ್ನು ನೀಡಿದೆ. ಇದೇ ಸಂಜೆ ಕ್ರೀಡಾಂಗಣಕ್ಕೆ ಗೌರವಾನ್ವಿತ ಜೇಟ್ಲಿಯವರ ಹೆಸರನ್ನೂ ನೀಡಲಾಗಿದೆ ಎಂದು ಹೇಳಿದ್ದಾರೆ. ಅಲ್ಲದೆ, ಹಲವು ವರ್ಷಗಳಿಂದ ಸಹಕಾರ ನೀಡಿದ ತಮ್ಮ ಕುಟುಂಬಕ್ಕೆ ಹಾಗೂ ಬಾಲ್ಯದ ತರಬೇತುದಾರ ರಾಜ್ ಕುಮಾರ್ ಶರ್ಮಾ ಅವರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. 

2001ರಲ್ಲಿ ಕ್ರಿಕೆಟ್ ನೋಡಲು ಟಿಕೆಟ್ ಪಡೆದು ಸ್ಟೇಡಿಯಂಗೆ ಬರುತ್ತಿದ್ದೆ. ಆಟಗಾರರ ಆಟೋಗ್ರಾಫ್ ಕೇಳುತ್ತಿದ್ದೆ. ಇದೇ ಸ್ಟೇಡಿಯಂ ನಲ್ಲಿ ನನಗಿಂದು ಗೌರವ ಸಿಗುತ್ತಿರುವುದು ಹೆಮ್ಮೆ ಎನಿಸುತ್ತಿದೆ ಎಂದತು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT