ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌ 
ಕ್ರಿಕೆಟ್

ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌  

ಮಹೇಂದ್ರ ಸಿಂಗ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರ ಉಪಸ್ಥಿತಿ ವಿರಾಟ್‌ ಕೊಹ್ಲಿ ಅವರು ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಲು ಸಹಕಾರಿಯಾಗುತ್ತದೆ.

ನವದೆಹಲಿ: ಮಹೇಂದ್ರ ಸಿಂಗ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರ ಉಪಸ್ಥಿತಿ ವಿರಾಟ್‌ ಕೊಹ್ಲಿ ಅವರು ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಲು ಸಹಕಾರಿಯಾಗುತ್ತದೆ ಎಂದು ಟೀಮ್ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಹಾಗೂ ಸಂಸದ ಗೌತಮ್‌ ಗಂಭೀರ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

"ಕಳೆದ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಉತ್ತಮವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇನ್ನೂ ಅವರು ಹೆಚ್ಚು ಅನುಭವವಾಗಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿರಾಟ್ ಕೊಹ್ಲಿ ಉತ್ತಮವಾಗಿ ತಂಡವನ್ನು ಮುನ್ನಡೆಸುತ್ತಾರೆ. ಏಕೆಂದರೆ ಅವರೊಂದಿಗೆ ರೋಹಿತ್‌ ಶರ್ಮಾ ಹಾಗೂ ಮಹೇಂದ್ರ ಸಿಂಗ್‌ ಇದ್ದಾರೆ ಎಂದರು.

ವಿರಾಟ್‌ ಕೊಹ್ಲಿ ಸ್ವತಂತ್ರವಾಗಿ ತಂಡವನ್ನು ಮುನ್ನಡೆಸಿದಾಗ ಅವರ ನಾಯಕತ್ವದ ಪರಿಪಕ್ಷತೆ ನಮಗೆ ಅರಿವಾಗುತ್ತದೆ. ರೋಹಿತ್‌ ಶರ್ಮಾ ಹಾಗೂ ಮಹೇಂದ್ರ ಸಿಂಗ್‌ ಧೋನಿ ಅವರ ಅನುಪಸ್ಥಿಯಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಫ್ರಾಂಚೈಸಿ ತಂಡ ಆರ್‌ಸಿಬಿ ತಂಡವನ್ನು ಅವರು ಮುನ್ನಡೆಸಿದಾಗ ಅವರ ನಾಯಕತ್ವದ ಸಾಮರ್ಥ್ಯ ಗೊತ್ತಾಗುತ್ತದೆ ಎಂದು ಗಂಭೀರ್‌ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT