ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌ 
ಕ್ರಿಕೆಟ್

ವಿರಾಟ್‌ ನಾಯಕತ್ವದ ಯಶಸ್ಸಿನ ಹಿಂದಿನ ಗುಟ್ಟು ಬಿಚ್ಚಿಟ್ಟ ಗಂಭೀರ್‌  

ಮಹೇಂದ್ರ ಸಿಂಗ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರ ಉಪಸ್ಥಿತಿ ವಿರಾಟ್‌ ಕೊಹ್ಲಿ ಅವರು ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಲು ಸಹಕಾರಿಯಾಗುತ್ತದೆ.

ನವದೆಹಲಿ: ಮಹೇಂದ್ರ ಸಿಂಗ್‌ ಧೋನಿ ಹಾಗೂ ರೋಹಿತ್‌ ಶರ್ಮಾ ಅವರ ಉಪಸ್ಥಿತಿ ವಿರಾಟ್‌ ಕೊಹ್ಲಿ ಅವರು ಭಾರತ ತಂಡವನ್ನು ಸಮರ್ಥವಾಗಿ ಮುನ್ನಡೆಸಲು ಸಹಕಾರಿಯಾಗುತ್ತದೆ ಎಂದು ಟೀಮ್ ಇಂಡಿಯಾ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಹಾಗೂ ಸಂಸದ ಗೌತಮ್‌ ಗಂಭೀರ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

"ಕಳೆದ ವಿಶ್ವಕಪ್‌ ಟೂರ್ನಿಯಲ್ಲಿ ವಿರಾಟ್‌ ಕೊಹ್ಲಿ ಉತ್ತಮವಾಗಿ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಿದ್ದರು. ಇನ್ನೂ ಅವರು ಹೆಚ್ಚು ಅನುಭವವಾಗಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿರಾಟ್ ಕೊಹ್ಲಿ ಉತ್ತಮವಾಗಿ ತಂಡವನ್ನು ಮುನ್ನಡೆಸುತ್ತಾರೆ. ಏಕೆಂದರೆ ಅವರೊಂದಿಗೆ ರೋಹಿತ್‌ ಶರ್ಮಾ ಹಾಗೂ ಮಹೇಂದ್ರ ಸಿಂಗ್‌ ಇದ್ದಾರೆ ಎಂದರು.

ವಿರಾಟ್‌ ಕೊಹ್ಲಿ ಸ್ವತಂತ್ರವಾಗಿ ತಂಡವನ್ನು ಮುನ್ನಡೆಸಿದಾಗ ಅವರ ನಾಯಕತ್ವದ ಪರಿಪಕ್ಷತೆ ನಮಗೆ ಅರಿವಾಗುತ್ತದೆ. ರೋಹಿತ್‌ ಶರ್ಮಾ ಹಾಗೂ ಮಹೇಂದ್ರ ಸಿಂಗ್‌ ಧೋನಿ ಅವರ ಅನುಪಸ್ಥಿಯಲ್ಲಿ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಫ್ರಾಂಚೈಸಿ ತಂಡ ಆರ್‌ಸಿಬಿ ತಂಡವನ್ನು ಅವರು ಮುನ್ನಡೆಸಿದಾಗ ಅವರ ನಾಯಕತ್ವದ ಸಾಮರ್ಥ್ಯ ಗೊತ್ತಾಗುತ್ತದೆ ಎಂದು ಗಂಭೀರ್‌ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT