ಕ್ರಿಕೆಟ್

ಮಾಂಸಾಹಾರ ತ್ಯಜಿಸಿ ಸಂಪೂರ್ಣ ಸಸ್ಯಾಹಾರಿಯಾಗಿದ್ದು ಏಕೆ? ಕಾರಣ ತಿಳಿಸಿದ ವಿರಾಟ್ ಕೊಹ್ಲಿ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಿದ್ದು ಗೊತ್ತೇ ಇದೆ. ಮಾಂಸಪ್ರಿಯರಾಗಿದ್ದ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಲು ಕಾರಣವೇನೆಂದು ಹೇಳಿಕೊಂಡಿದ್ದಾರೆ.

ನವದೆಹಲಿ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಿದ್ದು ಗೊತ್ತೇ ಇದೆ. ಮಾಂಸಪ್ರಿಯರಾಗಿದ್ದ ಕೊಹ್ಲಿ ಸಂಪೂರ್ಣ ಸಸ್ಯಾಹಾರಿಯಾಗಲು ಕಾರಣವೇನೆಂದು ಹೇಳಿಕೊಂಡಿದ್ದಾರೆ.

ಕತ್ತಿನ ಕೆಳಗೆ ಬೆನ್ನುಮೂಳೆ ಸಮಸ್ಯೆಯಿಂದಾಗಿ ಮಾಂಸ ಸೇವಿಸುವುದನ್ನು ತ್ಯಜಿಸಿ ಸಂಪೂರ್ಣ ಸಸ್ಯಾಹಾರಿಯಾದೆ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಇಂಗ್ಲೆಂಡಿನ ಬ್ಯಾಟ್ಸ್ ಮೆನ್ ಕೆವಿನ್ ಪೀಟರ್ಸನ್ ಅವರ ಜೊತೆ ಇನ್ಸ್ಟಾಗ್ರಾಂ ಲೈವ್ ವಿಡಿಯೊ ಸೆಷನ್ ನಲ್ಲಿ ಹೇಳಿಕೊಂಡಿದ್ದಾರೆ.

 ಅದು ಇಂಗ್ಲೆಂಡ್ ಟೆಸ್ಟ್ ಸರಣಿ ಸಮಯ, 2018ರಲ್ಲಿ ದಕ್ಷಿಣ ಆಫ್ರಿಕಾಗೆ ಹೋದಾಗ ನನಗೆ ಬೆನ್ನುಮೂಳೆ ಸಮಸ್ಯೆ ಕಾಣಿಸಿಕೊಂಡಿತು. ನನ್ನ ಬಲಗೈಯ ಕಿರು ಬೆರಳಿನ ತನಕ ನರ ಸಂಕುಚಿತಗೊಳಿಸಿತು. ನರಗಳು ಜುಮ್ಮೆನ್ನುತ್ತಿತ್ತು. ಆ ದಿನ ರಾತ್ರಿ ಮಲಗಲು ಸಾಧ್ಯವಾಗದೆ ತೀವ್ರವಾದ ನೋವು ಕಾಡಿತು ಎಂದು ನೆನಪಿಸಿಕೊಂಡರು.

ನಂತರ ವೈದ್ಯರಲ್ಲಿ ಪರೀಕ್ಷೆ ಮಾಡಿಸಿದಾಗ ಹೊಟ್ಟೆಯಲ್ಲಿ ತೀವ್ರ ಆಸಿಡಿಟಿ, ಯೂರಿಕ್ ಆಮ್ಲ ಸಮಸ್ಯೆ ಇದೆ, ಹೀಗಾಗಿ ಮೈಕೈಯೆಲ್ಲಾ ನೋಯುತ್ತಿದೆ ಎಂದು ಗೊತ್ತಾಯಿತು. ಕ್ಯಾಲ್ಸಿಯಂ, ಮೆಗ್ನೇಸಿಯಂ ಮಾತ್ರೆ ತೆಗೆದುಕೊಳ್ಳುತ್ತಿದ್ದರೂ ನನ್ನ ದೇಹಕ್ಕೆ ಸಾಕಾಗುತ್ತಿರಲಿಲ್ಲ. ನೋವು ಕಡಿಮೆಯಾಗಲಿಲ್ಲ. ಮೂಳೆ ದುರ್ಬಲವಾಗತೊಡಗಿತು. ಹೀಗಾಗಿ ಇಂಗ್ಲೆಂಡ್ ಪ್ರವಾಸದ ಮಧ್ಯೆ ಮಾಂಸ ತಿನ್ನುವುದನ್ನು ಬಿಟ್ಟೆನು. ಯೂರಿಕ್ ಆಮ್ಲ, ಆಸಿಡಿಟಿ ಸಮಸ್ಯೆ ನಿಯಂತ್ರಣಕ್ಕೆ ಬಂದು ದೇಹ ಹಗುರವಾದಂತೆ ಅನಿಸಿತು. ನಿರಾಳತೆ ಸಿಕ್ಕಿತು.

ಆಗ ನನಗೆ ಅನಿಸಿದ್ದು, ಮಾಂಸ ತಿನ್ನುವುದನ್ನು ಬಿಡಬೇಕೆಂದು, ಅಲ್ಲಿಂದ ಸುಮಾರು ಎರಡು ವರ್ಷವಾಗುತ್ತಾ ಬಂದಿದೆ. ಮಾಂಸ ಇಂದಿನವರೆಗೆ ಮುಟ್ಟಿಲ್ಲ, ಇದು ನಾನು ತೆಗೆದುಕೊಂಡ ಉತ್ತಮ ನಿರ್ಧಾರ ಎಂದು ಅನಿಸುತ್ತಿದೆ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT