ವಿರಾಟ್ ಕೊಹ್ಲಿ, ರಶೀಧ್ ಲತೀಫ್ 
ಕ್ರಿಕೆಟ್

ಕೊಹ್ಲಿ ಬಗ್ಗೆ ಎಚ್ಚರಿಸಿದ ಪಾಕ್ ಮಾಜಿ ನಾಯಕ ರಶೀದ್ ಲತೀಫ್!

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿಯನ್ನು ಕೆಣಕಿದರೆ ಅವರು ಶತಕದಿಂದಲೇ ಪ್ರತ್ಯುತ್ತರ ನೀಡುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ರಶೀದ್‌ ಲತೀಫ್‌ ವಿಡಿಯೋ ಒಂದರಲ್ಲಿ ಹೇಳಿದ್ದಾರೆ.

ನವದೆಹಲಿ:ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್‌ ಕೊಹ್ಲಿಯನ್ನು ಕೆಣಕಿದರೆ ಅವರು ಶತಕದಿಂದಲೇ ಪ್ರತ್ಯುತ್ತರ ನೀಡುತ್ತಾರೆ ಎಂದು ಪಾಕಿಸ್ತಾನ ಕ್ರಿಕೆಟ್‌ ತಂಡದ ಮಾಜಿ ನಾಯಕ ರಶೀದ್‌ ಲತೀಫ್‌ ವಿಡಿಯೋ ಒಂದರಲ್ಲಿ ಹೇಳಿದ್ದಾರೆ.

ಟೆಸ್ಟ್‌, ಏಕದಿನ ಮತ್ತು ಟಿ20 ಕ್ರಿಕೆಟ್‌ನಲ್ಲಿ 50ಕ್ಕೂ ಹೆಚ್ಚಿನ ಬ್ಯಾಟಿಂಗ್‌ ಸರಾಸರಿ ಹೊಂದಿರುವ ವಿಶ್ವದ ಏಕಮಾತ್ರ ಬ್ಯಾಟ್ಸ್‌ಮನ್‌ ವಿರಾಟ್‌ ಕೊಹ್ಲಿ, ಅಂಗಳದಲ್ಲಿ  ತಮ್ಮ ಆಕ್ರಮಣಕಾರಿ ಸ್ವಭಾವದಿಂದಲೇ ಎದುರಾಳಿಗಳ ಆತ್ಮಬಲವನ್ನು ಅಡಗಿಸಿಬಿಡುತ್ತಾರೆ. ಜೊತೆಗೆ ದೊಡ್ಡ ಶತಕಗಳನ್ನು ಬಾರಿಸುವ ಮೂಲಕ ಎದುರಾಳಿ ತಂಡಗಳನ್ನು ಧೂಳೀಪಟ ಮಾಡುತ್ತಾರೆ.

ಈ ಬಗ್ಗೆ ಮಾತನಾಡಿರುವ ಪಾಕಿಸ್ತಾನದ ಮಾಜಿ ವಿಕೆಟ್‌ ಕೀಪರ್‌ ಬ್ಯಾಟ್ಸ್‌ಮನ್‌ ಹಾಗೂ ನಾಯಕ ರಶೀದ್‌ ಲತೀಫ್, ಕೊಹ್ಲಿಯನ್ನು ಬೌಲರ್‌ಗಳು ಅನಗತ್ಯವಾಗಿ ಕೆಣಕಿದ ಸಂದರ್ಭವನ್ನು ವಿವರಿಸಿದ್ದಾರೆ.

"2014ರ ಟೆಸ್ಟ್‌ ಸರಣಿಯಲ್ಲಿ ಎರಡು ಟೆಸ್ಟ್‌ಗಳ ಬಳಿಕ ಧೋನಿ ನಿವೃತ್ತಿ ಘೊಷಿಸಿದ್ದರು. ನಂತರ ಅಂತಿಮ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಕೊಹ್ಲಿ ಶತಕ ಬಾರಿಸಿದ್ದರು. ಇದಕ್ಕೂ ಮುನ್ನ ಎಂಸಿಜಿಯಲ್ಲಿ ನಡೆದ 3ನೇ ಟೆಸ್ಟ್‌ನ 2ನೇ ಇನಿಂಗ್ಸ್‌ನಲ್ಲೂ ಕೊಹ್ಲಿ ಶತಕ ಗಳಿಸಿದ್ದರು.

 ಸಿಡ್ನಿ ಕ್ರಿಕೆಟ್‌ ಗ್ರೌಂಡ್‌ನ ನಾಲ್ಕನೇ ಟೆಸ್ಟ್‌ನ ಎರಡನೇ ಇನಿಂಗ್ಸ್‌ನಲ್ಲಿ ಆಸೀಸ್‌ ವೇಗಿ ಮಿಚೆಲ್‌ ಜಾನ್ಸರ್‌ ಕೊಹ್ಲಿ ಎದುರು ಮಾತಿಗಿಳಿದು ಸಿಕ್ಕಾಪಟ್ಟೆ ಬೈದಾಡುತ್ತಿದ್ದರು. ಕೊಹ್ಲಿ ಕೂಡ ಮಾತಿನ ಜಟಾಪಟಿಗೆ ನಿಂತು ಹ್ಯಾಟ್ರಿಕ್‌ ಶತಕದ ಪೆಟ್ಟನ್ನೂ ನೀಡಿದ್ದರು. ಸಿಡ್ನಿ ಟೆಸ್ಟ್‌ನ ಎರಡೂ ಇನಿಂಗ್ಸ್‌ಗಳಲ್ಲಿ ಕೊಹ್ಲಿ ಬ್ಯಾಟ್‌ ಗರ್ಜಿಸಿತ್ತು. ಕೊಹ್ಲಿಯನ್ನು ಈ ರೀತಿ ಕೆಣಕಿದರೆ ಅವರಿಂದ ಉತ್ತರ ಒಂದೆ ಶತಕ," ಎಂದು ಲತೀಫ್‌ ವಿವರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗೋವಾ ನೈಟ್ ಕ್ಲಬ್​ನಲ್ಲಿ ಭೀಕರ ಅಗ್ನಿ ದುರಂತ: ಪ್ರವಾಸಿಗರು ಸೇರಿ 23 ಮಂದಿ ಸಜೀವ ದಹನ, ತನಿಖೆಗೆ ಆದೇಶ

ಗೋವಾ ನೈಟ್ ಕ್ಲಬ್​ ಅಗ್ನಿ ದುರಂತ: ಪ್ರಧಾನಿ ಮೋದಿ, ರಾಷ್ಟ್ರಪತಿ ತೀವ್ರ ಸಂತಾಪ, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಣೆ

'ಹಿಂದೂ ಬೆಳವಣಿಗೆ ದರ' ಧರ್ಮ ಕೆಣಕುವ ಒಂದು ಮಾರ್ಗವಾಗಿತ್ತು: ಪ್ರಧಾನಿ ಮೋದಿ

ನನ್ನ ಶ್ರಮ, ನನ್ನ ಸಂಪಾದನೆ, ನನ್ನ ಆಸ್ತಿ, ನನಗೆ ಇಷ್ಟವಾದ ಶೂ, ವಾಚ್ ಧರಿಸುವೆ: ಡಿ.ಕೆ. ಶಿವಕುಮಾರ್

ದೆಹಲಿಯಲ್ಲಿ 2ನೇ ಮದುವೆಗೆ ಪತಿಯ ಸಿದ್ಧತೆ: ನ್ಯಾಯಕ್ಕಾಗಿ ಪ್ರಧಾನಿ ಮೋದಿ ಬೇಡಿದ ಪಾಕ್ ಮಹಿಳೆ!

SCROLL FOR NEXT