ಕಸ್ತೂರಿ ರಂಗನ್ 
ಕ್ರಿಕೆಟ್

ಮಾಜಿ ಕ್ರಿಕೆಟಿಗ ಕಸ್ತೂರಿ ರಂಗನ್ ನಿಧನ

ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ (90) ವಯೋಸಹಜ ಕಾಯಿಲೆಯಿಂದ ಬಳಲಿ ನಿಧನರಾಗಿದ್ದಾರೆ.

ಬೆಂಗಳೂರು: ಹಿರಿಯ ಕ್ರಿಕೆಟಿಗ ಕಸ್ತೂರಿ ರಂಗನ್ (90) ವಯೋಸಹಜ ಕಾಯಿಲೆಯಿಂದ ಬಳಲಿ ನಿಧನರಾಗಿದ್ದಾರೆ.

ಕರ್ನಾಟಕ ತಂಡದ ಮಾಜಿ ಆಟಗಾರ, ಬಿಸಿಸಿಐ ಕ್ಯೂರೆಟರ್, ಕೆಎಸ್ ಸಿಎ ಉಪಾಧ್ಯಕ್ಷ ರಾಗಿ ಕಸ್ತೂರಿ ರಂಗನ್ ಕಾರ್ಯನಿರ್ವಹಿಸಿದ್ದಾರೆ. ಅಲ್ಲದೆ ಚಿನ್ನಸ್ವಾಮಿ ಕ್ರೀಡಾಂಗಣದ ಪಿಚ್ ನಿರ್ಮಿಸಿದ ಹೆಮ್ಮೆ ಇವರದ್ದಾಗಿದೆ.

“ಜಿ ಕಸ್ತುರಿರಂಗನ್ ಇಂದು ಬೆಳಿಗ್ಗೆ ನಿಧನರಾದರು. ಅವರು ಚಾಮರಾಜಪೇಟೆಯಲ್ಲಿರುವ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ನಿಧನರಾದರು ”ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಖಜಾಂಚಿ ಮತ್ತು ವಕ್ತಾರ ವಿನಯಾ ಮೃತ್ಯುಂಜಯ ತಿಳಿಸಿದ್ದಾರೆ.

ಕಸ್ತುರಿರಂಗನ್ ಮೈಸೂರು ಪರ ರಣಜಿ ಟ್ರೋಫಿಯಲ್ಲಿ ಬಲಗೈ ಮಧ್ಯಮ ವೇಗದ ಬೌಲರ್ ಆಗಿ 1948 ರಿಂದ 1963 ರವರೆಗೆ ಆಡಿದ್ದರು ಎಂದು ಮೂಲಗಳು ತಿಳಿಸಿವೆ.

ಅವರ ನಿಧನಕ್ಕೆ ಸಂತಾಪ ಸೂಚಿಸಿದ ಖ್ಯಾತ ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಅನಿಲ್ ಕುಂಬ್ಳೆ, “ಜಿ ಕಸ್ತುರಿರಂಗನ್ ಅವರ ನಿಧನದ ಬಗ್ಗೆ ಕೇಳಲು ಬೇಸರವಾಗಿದೆ. ಕ್ರಿಕೆಟ್‌ಗೆ ಅವರು ನೀಡಿದ ಎಲ್ಲ ಕೊಡುಗೆಗಳನ್ನು ನಾನು  ಪ್ರೀತಿಯಿಂದ ಸ್ಮರಿಸುತ್ತೇನೆ. ಅವರ ಕುಟುಂಬಕ್ಕೆ ನನ್ನ ಹೃತ್ಪೂರ್ವಕ  ಸಂತಾಪವಿದೆ"  ಎಂದರು. 

"ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘದ ಅಧ್ಯಕ್ಷ, ಕಾರ್ಯದರ್ಶಿ ಮತ್ತು ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಜಿ ರಣಜಿ ಆಟಗಾರ, ಕೆಎಸ್ಸಿಎ ಉಪಾಧ್ಯಕ್ಷ ಮತ್ತು ಬಿಸಿಸಿಐ ಕ್ಯುರೇಟರ್ಜಿ ಕಸ್ತುರಿರಂಗನ್ ಅವರ ಹಠಾತ್ ನಿಧನಕ್ಕೆ ತೀವ್ರವಾಗಿ ವಿಷಾದಿಸುತ್ತೇವೆ"  ಕೆಎಸ್ಸಿಎ ಟ್ವೀಟ್ ಮೂಲಕ ಹೇಳಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?