ರೋಹಿತ್ ಶರ್ಮಾ-ಎಂಎಸ್ ಧೋನಿ 
ಕ್ರಿಕೆಟ್

ಹೊಡೆದಾಡಿಕೊಂಡ ಎಂಎಸ್ ಧೋನಿ-ರೋಹಿತ್ ಅಭಿಮಾನಿಗಳು: ಓರ್ವನ ಸ್ಥಿತಿ ಗಂಭೀರ!

ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳು ಬ್ಯಾನರ್ ವಿಚಾರಕ್ಕೆ ಬಡಿದಾಡಿಕೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. 

ಮುಂಬೈ: ಟೀಂ ಇಂಡಿಯಾದ ಮಾಜಿ ನಾಯಕ ಎಂಎಸ್ ಧೋನಿ ಮತ್ತು ಉಪನಾಯಕ ರೋಹಿತ್ ಶರ್ಮಾ ಅವರ ಅಭಿಮಾನಿಗಳು ಬ್ಯಾನರ್ ವಿಚಾರಕ್ಕೆ ಬಡಿದಾಡಿಕೊಂಡಿದ್ದು ಓರ್ವನ ಸ್ಥಿತಿ ಗಂಭೀರವಾಗಿದೆ. 

ಬ್ಯಾನರ್ ಹಾಕುವ ವಿಚಾರಕ್ಕೆ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಕುರುಂದವಾಡ್ ನಲ್ಲಿ ಈ ಘಟನೆ ನಡೆದಿದ್ದು ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿಯೋರ್ವನನ್ನು ಗಂಭೀರವಾಗಿ ಥಳಿಸಿದ್ದಾರೆ. 

ಎಂಎಸ್ ಧೋನಿ ಆಗಸ್ಟ್ 15ರಂದು ನಿವೃತ್ತಿ ಘೋಷಿಸಿದ್ದರು. ಈ ಹಿನ್ನೆಲೆಯಲ್ಲಿ ಧೋನಿ ಅಭಿಮಾನಿಗಳು ಕುರುಂದವಾಡ್ ನಲ್ಲಿ ಬ್ಯಾನರ್ ಹಾಕಿದ್ದರು. ಇನ್ನು ನಿನ್ನೆ ರೋಹಿತ್ ಶರ್ಮಾ ಅವರಿಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಘೋಷಣೆಯಾಗಿತ್ತು. ಇದರಿಂದಾಗಿ ರೋಹಿತ್ ಅಭಿಮಾನಿಗಳು ಅದೇ ಜಾಗದಲ್ಲಿ ಬ್ಯಾನರ್ ಹಾಕಿದ್ದರು. ಈ ವೇಳೆ ಧೋನಿ ಬ್ಯಾನರ್ ಅನ್ನು ಕಿತ್ತು ಹಾಕಲಾಗಿತ್ತು. 

ಇದರಿಂದ ರೊಚ್ಚಿಗೆದ್ದ ಎಂಎಸ್ ಧೋನಿ ಅಭಿಮಾನಿಗಳು ರೋಹಿತ್ ಅಭಿಮಾನಿ ಜೊತೆ ಗಲಾಟೆ ಮಾಡಿಕೊಂಡಿದ್ದಾರೆ. ನಂತರ ಆತನನ್ನು ಕಬ್ಬಿನ ಗದ್ದೆಗೆ ಎಳೆದೊಯ್ದು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT