ಕ್ರಿಕೆಟ್

ಮೂರನೇ ಏಕದಿನ: ಪಾಂಡ್ಯ, ಜಡೇಜಾ ಅಬ್ಬರದ ಬ್ಯಾಟಿಂಗ್; ಅಸೀಸ್ ಪಡೆಗೆ ಗೆಲ್ಲಲು 303 ರನ್ ಗುರಿ

ಬುಧವಾರ ಇಲ್ಲಿನ ಮನುಕಾ ಓವಲ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.

ಕ್ಯಾನ್ಬೆರಾ: ಬುಧವಾರ ಇಲ್ಲಿನ ಮನುಕಾ ಓವಲ್‌ ಕ್ರೀಡಾಂಗಣದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಓಡಿಐ ಪಂದ್ಯದಲ್ಲಿ ಭಾರತ 5 ವಿಕೆಟ್ ನಷ್ಟಕ್ಕೆ302 ರನ್ ಕಲೆಹಾಕುವ ಮೂಲಕ ಅತಿಥೇಯ ಅಸೀಸ್ ಗೆ ಗೆಲ್ಲಲು 303 ರನ್ ಗುರಿ ನೀಡಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ನಡೆಸಿದ ಟೀಂ ಇಂಡಿಯಾ ಪರ ಹಾರ್ದಿಕ್ ಪಾಂಡ್ಯ (92*), ರವೀಂದ್ರ ಜಡೇಜಾ (66*), ಕ್ಯಾಪ್ಟನ್ ವಿರಾಟ್ ಕೊಹ್ಲಿ (63) ರನ್ ಸಿಡಿಸಿ ಭಾರತ ಉತ್ತಮ ಮೊತ್ತ ಕಲೆಹಾಕಲು ನೆರವಾದರು.

ಆದರೆ ಆರಂಭಿಕರಾದ ಶಿಖರ್ ಧವನ್ ಕೇವಲ 16 ರನ್ ಗಳಿಸಿ ನಿರಾಶೆ ಮೂಡಿಸಿದ್ದರೆ ಎಸ್. ಗಿಲ್ 33, ಶ್ರೇಯಸ್ ಅಯ್ಯರ್ 19 ರನ್ ಗಳಿಸಿದ್ದರು. ಇನ್ನು ಕನ್ನಡಿಗ ಕೆ.ಎಲ್. ರಾಹುಲ್ ಸಹ ಕೇವಲ 5 ರನ್ ಕಲೆಹಾಕಿ ಪೆವಿಲಿಯನ್ ಹಾದಿ ಹಿಡಿದರು. 

ಆಸ್ಟ್ರೇಲಿಯಾ ಪರ ಆಸ್ಟನ್ ಅಗರ್ 2, ಜೋಶ್‌ ಹ್ಯಾಝೆಲ್‌ವುಡ್, ಸೀನ್ ಅಬೊಟ್ಟ್,  ಮತ್ತು ಆಡಮ್ ಜಂಪಾ ತಲಾ ಒಂದು ವಿಕೆಟ್ ಪಡೆದಿದ್ದರು.

ಕಳೆದ ಎರಡು ಪಂದ್ಯಗಳಲ್ಲಿ ಭಾರತ, ಸೋಲು ಕಂಡಿದೆ. ಹಾಗಾಗಿ ಏಕದಿನ ಸರಣಿಯನ್ನು 2-0 ಅಂತರದಲ್ಲಿ ಆಸ್ಟ್ರೇಲಿಯಾ ತನ್ನದಾಗಿಸಿಕೊಂಡಿದೆ. ಇದೀಗ ಭಾರತಕ್ಕೆ ಈ ಗೆಲುವು ಗೌರವದ ಪ್ರಶ್ನೆಯಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಕ್ರಿಕೆಟ್‌ ಪಂದ್ಯ, ರಾಜ್ಯ ಸಚಿವ ಸಂಪುಟದ ಒಪ್ಪಿಗೆ? ಗೃಹ ಇಲಾಖೆಗೆ ಭದ್ರತೆಯ ಹೊಣೆ!

2ನೇ ಟಿ20: 51 ರನ್ ಗಳ ಅಂತರದಿಂದ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ! ಅನಗತ್ಯ ದಾಖಲೆ ಬರೆದ ಅರ್ಷದೀಪ್

ಸಿಎಂ ಸಿದ್ದರಾಮಯ್ಯರ ವಿಮಾನ ಪ್ರಯಾಣ: 'ರಾಜ್ಯದ ಬೊಕ್ಕಸ'ದಿಂದ ಆದ ಖರ್ಚು ಎಷ್ಟು ಗೊತ್ತಾ?

ಟ್ರಂಪ್ ಗೆ ಮೋದಿ ದೂರವಾಣಿ ಕರೆ: ಮಹತ್ವದ ಚರ್ಚೆ!

KSCA ಗೆ ಹೊಸ ಸದಸ್ಯರ ಸೇರ್ಪಡೆ: ರಾಜ್ಯಾದ್ಯಂತ ಸದಸ್ಯತ್ವ ಅಭಿಯಾನ- ವೆಂಕಟೇಶ್ ಪ್ರಸಾದ್

SCROLL FOR NEXT