ಅಜಿಂಕ್ಯ ರಹಾನೆ 
ಕ್ರಿಕೆಟ್

ವೇಗಿ ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ನಮ್ಮ ಬೌಲಿಂಗ್ ದಾಳಿ ಪ್ರಬಲವಾಗಿದೆ: ಅಜಿಂಕ್ಯ ರಹಾನೆ

ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ಆಡಿಲೇಡ್: ವೇಗದ ಬೌಲರ್ ಇಶಾಂತ್ ಶರ್ಮಾ ಅನುಪಸ್ಥಿತಿಯ ಹೊರತಾಗಿಯೂ, ತಂಡದ ಬೌಲಿಂಗ್ ದಾಳಿ ಪ್ರಬಲವಾಗಿದೆ ಮತ್ತು ತಂಡದ ಬೌಲರ್‌ಗಳು ಆಸ್ಟ್ರೇಲಿಯಾ ವಿರುದ್ಧ ಉತ್ತಮ ಪ್ರದರ್ಶನ ನೀಡಲು ಸಮರ್ಥರಾಗಿದ್ದಾರೆ ಎಂದು ಭಾರತ ಟೆಸ್ಟ್ ತಂಡದ ಉಪನಾಯಕ ಅಜಿಂಕ್ಯ ರಹಾನೆ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ನಾಲ್ಕು ಟೆಸ್ಟ್ ಸರಣಿಯ ಮೊದಲ ಪಂದ್ಯ ಡಿಸೆಂಬರ್ 17 ರಂದು ನಡೆಯಲಿದೆ. 

ಇದು ಹಗಲು-ರಾತ್ರಿ ಟೆಸ್ಟ್ ಪಂದ್ಯವಾಗಿದ್ದು, ಇದು ಗುಲಾಬಿ ಚೆಂಡಿನೊಂದಿಗೆ ಆಡಲಾಗುತ್ತದೆ. ಈ ಪ್ರವಾಸಕ್ಕಾಗಿ, ಅನುಭವಿ ವೇಗದ ಬೌಲರ್ ಇಶಾಂತ್ ಗಾಯದಿಂದಾಗಿ ತಂಡದಲ್ಲಿ ಸ್ಥಾನ ಪಡೆದಿಲ್ಲ.

"ನನ್ನ ಪ್ರಕಾರ, ನಾವು ಬಲವಾದ ಬೌಲಿಂಗ್ ದಾಳಿಯನ್ನು ಹೊಂದಿದ್ದೇವೆ. ಆದರೆ ಹೌದು ನಾವು ಹಿರಿಯ ವೇಗದ ಬೌಲರ್ ಆಗಿರುವ ಇಶಾಂತ್ ಮಾರಕ ದಾಳಿಯನ್ನು ಖಂಡಿತವಾಗಿಯೂ ಕಳೆದುಕೊಳ್ಳುತ್ತೇವೆ ಎಂದು ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ರಹಾನೆ ಹೇಳಿದರು.

ಐಪಿಎಲ್ ಸಮಯದಲ್ಲಿ ಪಕ್ಕೆಲುಬಿನ ಗಾಯದ ಸಮಸ್ಯೆಗೆ ಗುರಿಯಾಗಿದ್ದ ಇಶಾಂತ್ ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ.

ಆದಾಗ್ಯೂ, ಇಶಾಂತ್ ಅನುಪಸ್ಥಿತಿಯ ಹೊರತಾಗಿಯೂ, ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ ಅವರ ವೇಗದ ದಾಳಿಯು ಆಸ್ಟ್ರೇಲಿಯನ್ನರಿಗೆ ಮಾರಕವಾಗಲಿದೆ ಎಂದು ರಹಾನೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ತಂಡದಲ್ಲಿರುವ ಉಮೇಶ್ ಯಾದವ್, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್ ಅವರೊಂದಿಗೆ ಜಸ್ಪ್ರಿತ್ ಬುಮ್ರಾ ಮತ್ತು ಮೊಹಮ್ಮದ್ ಶಮಿ, ಅವರೆಲ್ಲರೂ ನಿಜವಾಗಿಯೂ ಅದ್ಭುತ ಮತ್ತು ಅನುಭವಿಗಳು. ಈ ಪರಿಸ್ಥಿತಿಗಳಲ್ಲಿ ಹೇಗೆ ಬೌಲಿಂಗ್ ಮಾಡುಬೇಕು ಎಂಬುದು ಅವರಿಗೆ ತಿಳಿದಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ವಿದೇಶದಲ್ಲೂ ನಂದಿನಿ ತುಪ್ಪಕ್ಕೆ ಹೆಚ್ಚಿದ ಬೇಡಿಕೆ; ಅಮೆರಿಕಾ ಸೇರಿದಂತೆ ಮೂರು ರಾಷ್ಟ್ರಗಳಿಗೆ ರಫ್ತು..!

CLP ಸಭೆಯಲ್ಲಿ ಸರ್ವಾನುಮತದಿಂದ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿತ್ತು, 50:50 ಒಪ್ಪಂದವಾಗಿಲ್ಲ: ಕೆ.ಜೆ. ಜಾರ್ಜ್ ಸ್ಪಷ್ಟನೆ

SCROLL FOR NEXT