ವಿರಾಟ್ ಕೊಹ್ಲಿ-ಅನುಷ್ಕಾ 
ಕ್ರಿಕೆಟ್

ಇದಕ್ಕಿಂತ ದೊಡ್ಡ ಕ್ಷಣ ಮತ್ತೊಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ: ವಿರಾಟ್ ಕೊಹ್ಲಿ

ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಆ ಅಮೂಲ್ಯ ಕ್ಷಣದಲ್ಲಿ ತನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಅಡಿಲೇಡ್: ಮೊದಲ ಮಗುವಿನ ನಿರೀಕ್ಷೆಯಲ್ಲಿರುವ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಆ ಅಮೂಲ್ಯ ಕ್ಷಣದಲ್ಲಿ ತನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದ್ದಾರೆ.

ಹೌದು.. ಪ್ರಸ್ತುತ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಮೊದಲ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಂಡಿರುವ ನಾಯಕ ವಿರಾಟ್ ಕೊಹ್ಲಿ ಮೊದಲ ಪಂದ್ಯದ ಬಳಿಕ ತವರಿಗೆ ಮರಳಲಿದ್ದಾರೆ. ಈ ಬಗ್ಗೆ ಬಿಸಿಸಿಐ ಟಿವಿಯ ವಿಶೇಷ ಸಂದರ್ಶನದಲ್ಲಿ ಪಾಲ್ಗೊಂಡು ಮಾತನಾಡಿದ ಕೊಹ್ಲಿ,  ಇದಕ್ಕಿಂತ ದೊಡ್ಡ ಕ್ಷಣ ಮತ್ತೊಂದಿಲ್ಲ, ಯಾವುದೇ ಬೆಲೆ ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ. ಜೀವನದ ಅಮೂಲ್ಯ ಸಂದರ್ಭದಲ್ಲಿ ನನ್ನ ಪತ್ನಿಯೊಂದಿಗೆ ಇರಲು ಬಯಸುತ್ತೇನೆ ಎಂದು ಹೇಳಿದರು.

ಆಸ್ಟ್ರೇಲಿಯಾದ ಸ್ಟಾರ್ ಆಟಗಾರ ಸ್ಟೀವನ್ ಸ್ಮಿತ್ ಜೊತೆ ನಡೆಸಿದ ಸಂವಾದದಲ್ಲಿ ಪಾಲ್ಗೊಂಡಿದ್ದ ಕೊಹ್ಲಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದು, 'ನನ್ನ ಮನಸ್ಸಿನಲ್ಲಿ ಸ್ಪಷ್ಟ ನಿರ್ಧಾರವಿದೆ. ದೇಶಕ್ಕಾಗಿ ಆಡಲು ನೀವು ಬದ್ಧವಾಗಿರುವಂತೆಯೇ ಇದು ಜೀವನದ ಬಹಳ ವಿಶೇಷವಾದ ಕ್ಷಣವಾಗಿದ್ದು, ಯಾವುದೇ ಬೆಲೆ  ತೆತ್ತಾದರೂ ಆ ಕ್ಷಣ ಅಲ್ಲಿರಲು ಬಯಸುತ್ತೇನೆ ಎಂದು ಹೇಳಿದರು.

ಅಂತೆಯೇ ಬಾಲ್ ಟ್ಯಾಂಪರಿಂದ್ ವಿಚಾರವಾಗಿ ಪಂದ್ಯದ ವೇಳೆ ಸ್ಮಿತ್ ವಿರುದ್ಧದ ಘೋಷಣೆ ಸಂದರ್ಭವನ್ನು ನೆನಪಿಸಿಕೊಂಡ ಕೊಹ್ಲಿ, ಆಟಗಾರರನ್ನು ವೈಯಕ್ತಿಕವಾಗಿ ಗುರಿಯಾಗಿಸುವುದು ಸರಿಯಲ್ಲ. ಜನರು ತಪ್ಪುಗಳನ್ನು ಮಾಡುತ್ತಾರೆ ಮತ್ತು ಅದರಿಂದ ಕಲಿತುಕೊಳ್ಳುತ್ತಾರೆ. ಜೀವನದಲ್ಲಿ ಯಾವುದೂ ಶಾಶ್ವತವಲ್ಲ  ಎಂದು ನಾನು ಭಾವಿಸುತ್ತೇನೆ ಎಂದು ಹೇಳಿದರು.

ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಮ್ ಇಂಡಿಯಾವನ್ನು ಕೊನೆಯ ಮೂರು ಪಂದ್ಯಗಳಲ್ಲಿ ಅಜಿಂಕ್ಯ ರಹಾನೆ ಮುನ್ನಡೆಸಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT