ವಿರಾಟ್ ಕೊಹ್ಲಿ 
ಕ್ರಿಕೆಟ್

ಮುಂದಿನ ಪಂದ್ಯದಲ್ಲಿ ಭಾರತ ಖಂಡಿತಾ ಪುಟಿದೇಳಲಿದೆ- ವಿರಾಟ್ ಕೊಹ್ಲಿ

 ಆಸ್ಟ್ರೇಲಿಯಾ ವಿರುದ್ಧದ ಡೇ-ನೈಟ್‌ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಬಗ್ಗೆ ವಿವರಿಸಲು ಪದಗಳಿಲ್ಲ ಎಂದು ಹೇಳಿದ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಆಟವನ್ನು ಟೀಕಿಸಿದರು.

ಆಡಿಲೇಡ್‌: ಆಸ್ಟ್ರೇಲಿಯಾ ವಿರುದ್ಧದ ಡೇ-ನೈಟ್‌ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಬಗ್ಗೆ ವಿವರಿಸಲು ಪದಗಳಿಲ್ಲ ಎಂದು ಹೇಳಿದ ಟೀಮ್‌ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ತಂಡದ ಬ್ಯಾಟ್ಸ್‌ಮನ್‌ಗಳ ಕಳಪೆ ಆಟವನ್ನು ಟೀಕಿಸಿದ್ದಾರೆ.

ಶನಿವಾರ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಭಾರತ ತಂಡ, ಪ್ಯಾಟ್‌ ಕಮಿನ್ಸ್ ಹಾಗೂ ಜಾಶ್ ಹೇಝಲ್‌ವುಡ್‌ ಮಾರಕ ದಾಳಿಗೆ ನಲುಗಿ ಕೇವಲ 36 ರನ್‌ಗಳಿಗೆ ಸರ್ವ ಪತನ ಕಂಡಿತು. ಬಳಿಕ ಗುರಿ ಹಿಂಬಾಲಿಸಿದ ಆಸ್ಟ್ರೇಲಿಯಾ ತಂಡ ಎಂಟು ವಿಕೆಟ್‌ಗಳಿಂದ ಗೆಲುವು ಸಾಧಿಸಿತು ಹಾಗೂ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 1-0 ಮುನ್ನಡೆ ಪಡೆಯಿತು.

ಪಂದ್ಯದ ಬಳಿಕ ಪೋಸ್ಟ್‌ ಮ್ಯಾಚ್‌ ಪ್ರೆಸೆಂಟೇಷನ್‌ನಲ್ಲಿ ಮಾತನಾಡಿದ ವಿರಾಟ್‌ ಕೊಹ್ಲಿ,"ಸೋಲಿನ ಬಗ್ಗೆ ಉಂಟಾಗಿರುವ ಭಾವನೆಗಳನ್ನು ಪದಗಳಲ್ಲಿ ಹೇಳುವುದು ತುಂಬಾ ಕಷ್ಟ. 60 ರನ್‌ ಮುನ್ನಡೆಯೊಂದಿಗೆ ಅಂಗಳಕ್ಕೆ ಬಂದ ನಾವು ಸರ್ವಪತನವಾದೆವು. ಕಳೆದ ಎರಡು ದಿನಗಳಲ್ಲಿ ಕಠಿಣ ಪರಿಶ್ರಮ ಪಟ್ಟು ಉತ್ತಮ ಹಂತದಲ್ಲಿದ್ದ ನಾವು, ಕೇವಲ ಒಂದೇ ಒಂದು ಗಂಟೆಯಲ್ಲಿ ಗೆಲ್ಲಲಾಗದ ಪರಿಸ್ಥಿತಿಗೆ ಒಳಗಾದೆವು," ಎಂದು ಬೇಸರ ವ್ಯಕ್ತಪಡಿಸಿದರು.

ತಂಡಕ್ಕಾಗಿ ನೀವು ಬದ್ದರಾಗಿದ್ದರೆ, ಉತ್ತಮ ಫಲಿತಾಂಶ ಮೂಡಿ ಬರುತ್ತದೆ. ಈಗಿನ ಪಂದ್ಯದಲ್ಲಿ ಮಾಡಿದ ತಪ್ಪನ್ನು ತಿದ್ದಿಕೊಂಡು ಹುಡುಗರು ಬಾಕ್ಸಿಂಗ್‌ ಡೇ ಟೆಸ್ಟ್‌ ಪಂದ್ಯಕ್ಕೆ ಖಂಡಿತಾ ಪುಟಿದೇಳಲಿದ್ದಾರೆಂಬ ನಂಬಿಕೆ ಇದೆ  ಎಂದು ಹೇಳಿದರು. ಎರಡನೇ ಪಂದ್ಯ ಮೆಲ್ಬೋರ್ನ್‌ನಲ್ಲಿ ಡಿ.26 ರಂದು ಜರುಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT