ಚೇತನ್ ಶರ್ಮಾ 
ಕ್ರಿಕೆಟ್

ಚೇತನ್ ಶರ್ಮಾ ಬಿಸಿಸಿಐ ನೂತನ ಆಯ್ಕೆ ಸಮಿತಿ ಅಧ್ಯಕ್ಷ 

ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ. 

ಅಹಮದಾಬಾದ್: ಮಾಜಿ ಕ್ರಿಕೆಟಿಗ ಚೇತನ್ ಶರ್ಮಾ ಅವರು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಹಿರಿಯರ ಆಯ್ಕೆ ಸಮಿತಿಯ ನೂತನ ಮುಖ್ಯಸ್ಥರಾಗಿ ಗುರುವಾರ ನೇಮಕಗೊಂಡಿದ್ದಾರೆ. 

ಮದನ್ ಲಾಲ್ ನೇತೃತ್ವದ ಕ್ರಿಕೆಟ್ ಸಲಹಾ ಸಮಿತಿ ಚೇತನ್ ಶರ್ಮಾ, ಅಬೆಯ್ ಕುರುವಿಲ್ಲಾ ಮತ್ತು ದೇಬಾಶಿಶಿ ಮೊಹಾಂತಿ ಅವರನ್ನು ಹಿರಿಯರ ಆಯ್ಕೆ ಸಮಿತಿಯ ನೂತನ ಸದಸ್ಯರಾಗಿ ನೇಮಕ ಮಾಡಿದೆ. ಅಹಮದಾಬಾದ್ ನಲ್ಲಿ ವಾರ್ಷಿಕ ಮಹಾಸಭೆ ನಡೆದ ಬಳಿಕ ಬಿಸಿಸಿಐ ತನ್ನ ಪ್ರಕಟಣೆಯಲ್ಲಿ ಈ ಹೆಸರುಗಳನ್ನು ಪ್ರಕಟಿಸಿದೆ.

ಹಿರಿತನ (ಒಟ್ಟಾರೇ ಟೆಸ್ಟ್ ಪಂದ್ಯಗಳು) ಆಧಾರದ ಮೇಲೆ ಚೇತನ್ ಶರ್ಮಾ ಅವರನ್ನು ಹಿರಿಯರ ಆಯ್ಕೆ ಸಮಿತಿಯ ನೂತನ ಅಧ್ಯಕ್ಷರನ್ನಾಗಿ ಸಮಿತಿ ಶಿಫಾರಸು ಮಾಡಿದೆ.  ಸಿಎಸಿ ಒಂದು ವರ್ಷದ  ನಂತರ ಅಭ್ಯರ್ಥಿಗಳನ್ನು ಪರಿಶೀಲಿಸಲಿದ್ದು, ಬಿಸಿಸಿಐಗೆ ಶಿಫಾರಸು ಮಾಡುವುದಾಗಿ ಅದು ಹೇಳಿದೆ. 

ನೂತನ ಮೂವರು ಸದಸ್ಯರು ಆಯ್ಕೆ ಸಮಿತಿಯಲ್ಲಿ  ಸುನೀಲ್ ಜೋಷಿ ಮತ್ತು ಹರವಿಂದರ್ ಸಿಂಗ್ ಅವರನ್ನು ಸೇರಿಕೊಳ್ಳಲಿದ್ದಾರೆ.  ಟೀಂ ಇಂಡಿಯಾ ಮಾಜಿ ವೇಗಿ ಅಜಿತ್ ಅಗರ್ ಕರ್ ಕೂಡಾ ರಾಷ್ಟ್ರೀಯ ಆಯ್ಕೆ ಸಮಿತಿಯ ಮುಖ್ಯಸ್ಥರ ಹುದ್ದೆಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಕೊನೆಯಲ್ಲಿ ಅವರು ಆಯ್ಕೆಯಾಗಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT