ರಾಹುಲ್ ದ್ರಾವಿಡ್-ಶೋಯೆಬ್ ಅಖ್ತರ್ 
ಕ್ರಿಕೆಟ್

'ಚೌಕಾಸಿ ಮಾಡಬೇಡಿ' ಪಾಕ್ ಮಾಜಿ ಕ್ರಿಕೆಟಿಗರೆಲ್ಲಾ ಈಗ ಯೂಟ್ಯೂಬ್ ಚಾನಲ್ ನಡೆಸುವಂತಾಗಿದೆ: ಅಖ್ತರ್ ಆಕ್ರೋಶ

ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸರಿಯಾಗಿ ನಡೆಸಿಕೊಳ್ಳದ ಕಾರಣ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗರೆಲ್ಲಾ ಯೂಟ್ಯೂಬ್ ಚಾನಲ್ ನಡೆಸಿ ಬದುಕುವಂತಾಗಿದೆ ಎಂದು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ಮಂಡಳಿ(ಪಿಸಿಬಿ) ಸರಿಯಾಗಿ ನಡೆಸಿಕೊಳ್ಳದ ಕಾರಣ ಇಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗರೆಲ್ಲಾ ಯೂಟ್ಯೂಬ್ ಚಾನಲ್ ನಡೆಸಿ ಬದುಕುವಂತಾಗಿದೆ ಎಂದು ಮಾಜಿ ಕ್ರಿಕೆಟಿಗ ಶೋಯೆಬ್ ಅಖ್ತರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ 10 ವಿಕೆಟ್ ಗಳಿಂದ ಹೀನಾಯ ಸೋಲು ಕಂಡು ಟೂರ್ನಿಯಿಂದ ಹೊರಬಂದಿದ್ದು ಈ ಸಂಬಂಧ ಪ್ರತಿಕ್ರಿಯಿಸಿರುವ ಶೋಯೆಬ್ ಅಖ್ತರ್ ಪಿಸಿಬಿ ನಿಮ್ಮ ಚೌಕಾಸಿ ತನದಿಂದಾಗಿ ಪಾಕ್ ಕಿರಿಯರ ತಂಡವೂ ದುರ್ಬಲವಾಗಿದೆ ಎಂದು ತಮ್ಮ ಯೂಟ್ಯೂಬ್ ಚಾನಲ್ ನಲ್ಲಿ ಆರೋಪಿಸಿದ್ದಾರೆ. 

ಅಂಡರ್ 19 ಭಾರತ ತಂಡವು ಅತ್ಯಂತ ಪ್ರಬುದ್ಧವಾಗಿದೆ. ಏಕೆಂದರೆ ಅವರಿಗೆ ಪ್ರಬುದ್ಧವಾದ ಕೋಚ್ ಇದ್ದಾರೆ. ಅವರು ಭಾರತದ ಶ್ರೇಷ್ಠ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ರಾಹುಲ್ ದ್ರಾವಿಡ್. ಇಂತಹ ಗ್ರೇಟ್ ಆಟಗಾರನಿಂದ ಅತ್ಯುತ್ತಮ ತಂಡವನ್ನು ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾರೆ. 

ಪಾಕ್ ತಂಡಕ್ಕೂ ಇಂತಹ ಅತ್ಯುತ್ತಮ ಕೋಚ್ ಅನ್ನು ನೇಮಿಸಲು ಅದಕ್ಕೆ ತಕ್ಕಂತೆ ಹಣವನ್ನು ನೀಡಬೇಕಾಗುತ್ತದೆ. ಅದೇ ರೀತಿ ತಂಡಕ್ಕೆ ಕೋಚ್ ಆಗಲು ಬಂದ ಯೂನಿಸ್ ಖಾನ್ ರಂತ ಶ್ರೇಷ್ಠ ಆಟಗಾರನ ಬಳಿ ಚೌಕಾಸಿ ಮಾಡಿದ್ದಕ್ಕೆ ಅವರು ಕೋಚ್ ಹುದ್ದೆ ಬೇಡ ಎಂದು ಬರಬೇಕಾಯಿತು. ಹೀಗೇನಾ ನೀವೂ ಖ್ಯಾತ ಆಟಗಾರರನ್ನು ನಡೆಸಿಕೊಳ್ಳುವುದು ಎಂದು ಪ್ರಶ್ನಿಸಿದ್ದಾರೆ.

ಐಸಿಸಿ ಅಂಡರ್ 19 ವಿಶ್ವಕಪ್ ಟೂರ್ನಿಯ ಸೆಮಿಫೈನಲ್ ಪಂದ್ಯದಲ್ಲಿ ಪಾಕ್ ತಂಡ ನಿಗದಿತ ಓವರ್ ನಲ್ಲಿ 172 ರನ್ ಗಳಿಗೆ ಆಲೌಟ್ ಆಗಿತ್ತು. ಈ ರನ್ ಗುರಿ ಬೆನ್ನಟ್ಟಿದ ಟೀಂ ಇಂಡಿಯಾದ ಆರಂಭಿಕರಾದ ಜೈಸ್ವಾಲ್ ಅಜೇಯ್ 105 ಮತ್ತು ಸಕ್ಸೇನಾ ಅಜೇಯ 59 ರನ್ ಬಾರಿಸಿ ತಂಡಕ್ಕೆ 10 ವಿಕೆಟ್ ಗಳ ಭರ್ಜರಿ ಜಯ ತಂದುಕೊಟ್ಟಿದ್ದು ತಂಡ ಫೈನಲ್ ಪ್ರವೇಶಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT