ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ 
ಕ್ರಿಕೆಟ್

ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್: ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ

ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಕೇಪ್ ಟೌನ್: ದಕ್ಷಿಣ ಆಫ್ರಿಕಾದ ಪೊಚೆಫ್ ಸ್ಟ್ರೂಮ್‌ನಲ್ಲಿ ನಡೆಯುತ್ತಿರುವ ಅಂಡರ್ 19 ವಿಶ್ವಕಪ್ ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಬಾಂಗ್ಲಾದೇಶ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.

ಈಗಾಗಲೇ ನಾಲ್ಕು ಬಾರಿ ಪ್ರಶಸ್ತಿ ಗೆದ್ದಿರುವ ಭಾರತ ತಂಡ ಐದನೇ ಬಾರಿಗೆ ಪ್ರಶಸ್ತಿ ಗೆಲ್ಲುವ ತವಕದಲ್ಲಿದ್ದು, ಇದೇ ಮೊದಲ ಬಾರಿಗೆ ಫೈನಲ್ ಪ್ರವೇಶ ಮಾಡಿರುವ ಬಾಂಗ್ಲಾದೇಶ ಚೊಚ್ಚಲ ಅಂಡರ್ 19 ವಿಶ್ವಕಪ್ ಪ್ರಶಸ್ತಿಗೆ ಮುತ್ತಿಡಲು ತುದಿಗಾಲಲ್ಲಿ ನಿಂತಿದೆ. ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ರಾಹುಲ್ ಡ್ರಾವಿಡ್ ತರಬೇತಿ ನೀಡುತ್ತಿರುವ ಕಿರಿಯ ತಂಡ ವಿಶ್ವ ಕಪ್ ನಲ್ಲಿ ಐದನೇ ಪ್ರಶಸ್ತಿ ಗೆಲ್ಲುವ ತವಕದಲ್ಲಿದೆ. 

ಏಷ್ಯಾ ಖಂಡದ ಎರಡು ತಂಡಗಳು ಮುಖಾಮುಖಿಯಾಗುತ್ತಿರುವುದು ವಿಶೇಷ. 2018ರಲ್ಲಿ ಪೃಥ್ವಿ ಶಾ, ಶುಭಮನ್ ಗಿಲ್ ಅವರಿದ್ದ ತಂಡವು ಪ್ರಶಸ್ತಿ ಗೆದ್ದಿತ್ತು. ಅವರಿಬ್ಬರೂ ಸದ್ಯ ಭಾರತ ರಾಷ್ಟ್ರೀಯ ತಂಡದಲ್ಲಿದ್ದಾರೆ. ಈ ಬಾರಿ ಫೈನಲ್ ಗೆ ತಂಡವು ಲಗ್ಗೆ ಹಾಕಲು ಮುಂಬೈ ಹುಡುಗ ಯಶಸ್ವಿ ಜೈಸ್ವಾಲ್, ಸ್ಪಿನ್ನರ್ ರವಿ ಬಿಷ್ಣೋಯಿ ಮತ್ತು ಮಧ್ಯಮವೇಗಿ ಕಾರ್ತಿಕ್ ತ್ಯಾಗಿ ಕಾರಣರಾಗಿದ್ದಾರೆ. ಸೆಮಿಫೈನಲ್‌ನಲ್ಲಿ ಪಾಕಿಸ್ತಾನ ತಂಡದ ಎದುರು ಯಶಸ್ವಿ ಶತಕ ಬಾರಿಸಿದ್ದರು. ತಂಡವು 10 ವಿಕೆಟ್‌ಗಳಿಂದ ಜಯಿಸಿತ್ತು.  2000ನೇ ಇಸವಿಯಲ್ಲಿ ಭಾರತವು ಮೊದಲ ಬಾರಿಗೆ ಪ್ರಶಸ್ತಿ ಗೆದ್ದಿತ್ತು. ಅಲ್ಲಿಂದ ಇಲ್ಲಿಯವರೆಗೆ ಒಟ್ಟು ನಾಲ್ಕು ಸಲ ಚಾಂಪಿಯನ್ ಆಗಿತ್ತು. ಎರಡು ಬಾರಿ ರನ್ನರ್ಸ್ ಅಪ್ ಆಗಿದೆ. ಫೈನಲ್‌ಗೆರಿರುವುದು ಇದು ಏಳನೇ ಸಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಯಾವುದೇ ನೋವಿಲ್ಲ, ಮನಃಪೂರ್ವಕವಾಗಿ ರಾಜೀನಾಮೆ ನೀಡುತ್ತಿದ್ದೇನೆ; ಸಿದ್ದರಾಮಯ್ಯ ಘೋಷಣೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT