ಬಾಂಗ್ಲಾ ಆಟಗಾರರ ಉದ್ಧಟತನ 
ಕ್ರಿಕೆಟ್

'ಗೆಲುವನ್ನು ಹೇಗೆ ಸಂಭ್ರಮಿಸಬೇಕು ಎಂಬುದೇ ಗೊತ್ತಿಲ್ಲ': ಬಾಂಗ್ಲಾ ಯುವಪಡೆಗೆ ತಿವಿದ ಟ್ವೀಟಿಗರು

ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದ ಬಾಂಗ್ಲಾದೇಶ ಯುವ ಕ್ರಿಕೆಟಿಗರು ಪ್ರಶಸ್ತಿ ಜಯಿಸಿದ್ದಾರೆಯಾದರೂ, ಕ್ರಿಕೆಟ್ ಅಭಿಮಾನಿಗಳ ಮನ ಗೆಲುವಲ್ಲಿ ವಿಫಲರಾಗಿದ್ದಾರೆ.

ಅಂಡರ್ 19 ಕ್ರಿಕೆಟ್ ವಿಶ್ವಕಪ್ ಗೆದ್ದರೂ, 'ಜಂಟಲ್ ಮನ್' ಗೌರವ ಕಳೆದುಕೊಂಡ ಬಾಂಗ್ಲಾ ಯುವಪಡೆ!

ನವದೆಹಲಿ: ಅಂಡರ್ 19 ವಿಶ್ವಕಪ್ ಟೂರ್ನಿಯ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದ ಬಾಂಗ್ಲಾದೇಶ ಯುವ ಕ್ರಿಕೆಟಿಗರು ಪ್ರಶಸ್ತಿ ಜಯಿಸಿದ್ದಾರೆಯಾದರೂ, ಕ್ರಿಕೆಟ್ ಅಭಿಮಾನಿಗಳ ಮನ ಗೆಲುವಲ್ಲಿ ವಿಫಲರಾಗಿದ್ದಾರೆ.

ಹೌದು.. ನಿನ್ನೆ ದಕ್ಷಿಣ ಆಫ್ರಿಕಾದ ಪೊಚೆಫ್‌ಸ್ಟ್ರೂಮ್ ನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಭಾರತದ ವಿರುದ್ಧ ಗೆದ್ದ ಬಾಂಗ್ಲಾದೇಶ ಯುವ ಆಟಗಾರರು ಗೆಲುವಿನ ಬಳಿಕ ಮೈದಾನದಲ್ಲಿ ಅಕ್ಷರಶಃ ದಾಂಧಲೆ ಸೃಷ್ಟಿಸಿದ್ದರು. ಗೆಲುವು ಸಾಧಿಸುತ್ತಲೇ ಮೈದಾನಕ್ಕೆ ನುಗ್ಗಿದ ಆಟಗಾರರು ಭಾರತದ ಯುವ ಆಟಗಾರರನ್ನು ಕಿಚಾಸಿದ್ದು ಮಾತ್ರವಲ್ಲದೇ ಗಲಾಟೆ ಸೃಷ್ಟಿಸಿದ್ದರು. ಈ ಗಲಾಟೆ ಒಂದು ಹಂತದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೂ ತಲುಪಿತ್ತು.

 ಬಾಂಗ್ಲಾ ಯುವ ಆಟಗಾರರು ಭಾರತವನ್ನು ಫೈನಲ್ ನಲ್ಲಿ ಸೋಲಿಸಿದ ನಂತರ ಬಾಂಗ್ಲಾ ಆಟಗಾರನೊಬ್ಬ ಭಾರತೀಯ ಆಟಗಾರನ ಕುರಿತು ಆಡಿದ ಮಾತು ಅಲ್ಲಿದ್ದ ಇತರೆ ಭಾರತೀಯ ಆಟಗಾರರನ್ನು ರೊಚ್ಚಿಗೆಬ್ಬಿಸಿತ್ತು. ಇದರಿಂದಾಗಿ ಆಟಗಾರರ ನಡುವೆ ಮಾತಿನ ಚಕಮಕಿ ಆರಂಭವಾಯಿತು. ಈ ಸಂದರ್ಭದಲ್ಲಿ ಭಾರತ ತಂಡದ ನಾಯಕ ಪ್ರಿಯಂಗರ್ಗ್ ಮಧ್ಯಪ್ರವೇಶಿಸಿದಾಗಲೂ ಬಾಂಗ್ಲಾ ಆಟಗಾರರು ತಮ್ಮ ದರ್ಪ ತೋರಿದರು. ಆಗ ಎರಡೂ ಆಟಗಾರರ ನಡುವೆ ಘರ್ಷಣೆ ನಡೆಯುವ ಹಂತಕ್ಕೆ ತಲುಪಿತು. 

ಈ ಘಟನೆ ವಿಶ್ವ ಕ್ರಿಕೆಟ್ ಪ್ರೇಮಿಗಳಲ್ಲಿ ಬೇಸರಕ್ಕೆ ಕಾರಣವಾಗಿದ್ದು, ಕ್ರಿಕೆಟ್ ಅಭಿಮಾನಿಗಳು ಬಾಂಗ್ಲಾ ಆಟಗಾರರನ್ನು ಭೀಕರವಾಗಿ ಟ್ರೋಲ್ ಮಾಡುತ್ತಿದ್ದಾರೆ. ಬಾಂಗ್ಲಾದೇಶಕ್ಕೆ ಸರಣಿ ಗೆದ್ದ ಅನುಭವವಿಲ್ಲ. ಹೀಗಾಗಿ ಅವರಿಗೆ ಗೆಲವನ್ನು ಹೇಗೆ ಸಂಭ್ರಮಿಸಬೇಕು ಎಂಬುದೂ ತಿಳಿದಿಲ್ಲ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಇದಾದ ನಂತರ ಈ ಬಗ್ಗೆ ಪ್ರತಿಕ್ರಿಯಿಸಿದ ಬಾಂಗ್ಲಾ ತಂಡದ ನಾಯಕ ಅಕ್ಬರ್ ಅಲಿ, ‘ಪಂದ್ಯದ ನಂತರ ಏನಾಗಿದೆಯೋ ಅದು ಅನಿವಾರ್ಯವಾಗಿ ನಡೆದದ್ದು. ನಮ್ಮ ಕೆಲವು ಬೌಲರ್​​ಗಳು ಎಮೋಷನಲ್ ಆಗಿ ಉತ್ತೇಜನಕ್ಕೆ ಒಳಗಾಗಿದ್ದರು. ಹೀಗಾಗಿ ಈ ಘಟನೆ ನಡೆದಿದ್ದು, ಇದು ಖಂಡಿತಾ ದುರದೃಷ್ಟಕರ. ನಾನು ಟೀಮ್ ಇಂಡಿಯಾವನ್ನ ಅಭಿನಂದಿಸುತ್ತೇನೆ’ ಎಂದು ಹೇಳಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT