ಭಾರತ ಯುವ ತಂಡದ ನಾಯಕ ಪ್ರಿಯಮ್ ಗರ್ಗ್ 
ಕ್ರಿಕೆಟ್

ಬಾಂಗ್ಲಾ ಆಟಗಾರರು ತೋರಿದ್ದ ವರ್ತನೆ ಅಸಹ್ಯ ಮೂಡಿಸಿತ್ತು: ಪ್ರಿಯಮ್ ಗರ್ಗ್, ಕ್ಷಮೆ ಕೋರಿದ ಬಾಂಗ್ಲಾ ನಾಯಕ

ಅಂಡರ್ 19 ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯದ ವೇಳೆ ಬಾಂಗ್ಲಾದೇಶ ಆಟಗಾರರು ತೋರಿದ್ದ ವರ್ತನೆ ಅಸಹ್ಯ ಮೂಡಿಸಿತ್ತು ಎಂದು ಭಾರತ ತಂಡದ ನಾಯಕ ಪ್ರಿಯಮ್‌ ಗರ್ಗ್‌ ಹೇಳಿದ್ದಾರೆ.

ನವದೆಹಲಿ: ಅಂಡರ್ 19 ಕ್ರಿಕೆಟ್ ವಿಶ್ವಕಪ್ ಪೈನಲ್ ಪಂದ್ಯದ ವೇಳೆ ಬಾಂಗ್ಲಾದೇಶ ಆಟಗಾರರು ತೋರಿದ್ದ ವರ್ತನೆ ಅಸಹ್ಯ ಮೂಡಿಸಿತ್ತು ಎಂದು ಭಾರತ ತಂಡದ ನಾಯಕ ಪ್ರಿಯಮ್‌ ಗರ್ಗ್‌ ಹೇಳಿದ್ದಾರೆ.

ಪಂದ್ಯ ಮುಕ್ತಾಯದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಗರ್ಗ್, ಬಾಂಗ್ಲಾ ಆಟಗಾರರು ವರ್ತನೆ ಅಸಹ್ಯ ಮೂಡಿಸಿತ್ತು. ಇಂಥ ಘಟನೆ ನಡೆಯಬಾರದಿತ್ತು ಎಂದು ಭಾವಿಸುತ್ತೇನೆ. ಆದರೂ ಪರವಾಗಿಲ್ಲ ನಾವು ಸಮಾಧಾನವಾಗಿ ವರ್ತಸಿದೆವು. ಇದೆಲ್ಲವು ಆಟದ ಒಂದು ಭಾಗ ಎಂದು ಭಾವಿಸಿದೆವು ಎಂದು  ಹೇಳಿದರು. ಅಲ್ಲದೆ ನಾವು ಒಂದನ್ನು ಗೆದ್ದುಕೊಂಡರೆ , ಮತ್ತೊಂದನ್ನು ಕಳೆದುಕೊಳ್ಳುತ್ತೇವೆ ಎಂದು ಪ್ರಿಯಮ್ ಬಾಂಗ್ಲಾ ತಂಡವನ್ನು ಪರೋಕ್ಷವಾಗಿ ಟೀಕಿಸಿದರು.

ಇನ್ನು ಇದೇ ವಿಚಾರವಾಗಿ ಮಾತನಾಡಿದ ಬಾಂಗ್ಲಾ ಯುವ ಕ್ರಿಕೆಟ್‌ ತಂಡ ನಾಯಕ ಅಕ್ಬರ್‌ ಅಲಿ, ‘ಈ ರೀತಿಯ ಘಟನೆ ನಡೆಯಬಾರದಿತ್ತು. ಅಲ್ಲಿ ಏನು ನಡೆಯಿತು ಎಂಬುದರ ಬಗ್ಗೆ ನಿಜಕ್ಕೂ ನನಗೆ ಸರಿಯಾದ ಮಾಹಿತಿ ಇಲ್ಲ. ಆದರೆ, ಫೈನಲ್‌ ಪಂದ್ಯದ ವೇಳೆ ಆಟಗಾರರು ಭಾವೋದ್ವೇಗಕ್ಕೆ ಒಳಗಾಗುತ್ತಾರೆ ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ನಾವು ಎದುರಾಳಿ ತಂಡವನ್ನು ವಿಶ್ವಾಸದಿಂದ ಕಾಣಬೇಕು. ಕ್ರೀಡೆಯನ್ನು ಗೌರವಿಸಬೇಕು. ಕ್ರಿಕೆಟ್‌ ಜಂಟಲ್ ಮನ್‌ಗಳ ಆಟ ಎಂಬುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನನ್ನ ತಂಡದ ಪರವಾಗಿ ನಾನು ಕ್ಷಮೆ ಕೋರುತ್ತೇನೆ,’ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

SCROLL FOR NEXT