ರಾಹುಲ್, ಶ್ರೇಯಸ್ ಅಯ್ಯರ್ 
ಕ್ರಿಕೆಟ್

ಮೂರನೇ ಏಕದಿನ ಪಂದ್ಯ: 4ನೇ ವಿಕೆಟ್ ಜೊತೆಯಾಟದಲ್ಲಿ ರಾಹುಲ್ , ಶ್ರೇಯಸ್ ಅಯ್ಯರ್ ಸ್ಥಿರ ಪ್ರದರ್ಶನ

ಇಲ್ಲಿನ ಬೇ ಓವಲ್‌ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಟಿ-20 ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸನ್ ಪೀಲ್ಡಿಂಗ್ ಆಯ್ದುಕೊಂಡಿದ್ದಾರೆ.

 ಮೌಂಟ್‌ಮೌಂಗಾನುಯಿ: ಇಲ್ಲಿನ ಬೇ ಓವಲ್‌ ಕ್ರೀಡಾಂಗಣದಲ್ಲಿ ಭಾರತ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ  ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ತಂಡದ ನಾಯಕ ಕೇನ್‌ ವಿಲಿಯಮ್ಸನ್ ಪೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಭಾರತದ ಪರ ಆರಂಭಿಕರಾಗಿ ಕಣಕ್ಕಿಳಿದ ಪೃಥ್ವಿ ಶಾ 42 ಎಸೆತಗಳಲ್ಲಿ  ಎರಡು ಸಿಕ್ಸರ್, 3 ಬೌಂಡರಿಗಳ ಮೂಲಕ 40 ರನ್ ಸಿಡಿಸಿ ರನೌಟ್ ಆದರು. ಮಾಯಾಂಕ್ ಅಗರ್ ವಾಲ್  ಕೇವಲ 1 ರನ್ ಗಳಿಗೆ ಫೆವಿಲಿಯನ್ ಹಾದಿ ಹಿಡಿದರು. ನಂತರ ಬಂದ ವಿರಾಟ್ ಕೊಹ್ಲಿ ಕೇವಲ 9 ರನ್ ಗಳಿಸಿ ಹಮೀಸ್ ಬೆನೆಟ್ ಬೌಲಿಂಗ್ ನಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಈ ಹಂತದಲ್ಲಿ ಜೊತೆಯಾದ ಶ್ರೇಯಸ್ ಅಯ್ಯರ್ ಹಾಗೂ ಕೆಎಲ್ ರಾಹುಲ್ ಜೋಡಿ 59 ಎಸೆತಗಳಲ್ಲಿ 50 ರನ್ ಗಳಿಸುವ ಉತ್ತಮ ಪ್ರದರ್ಶನ ನೀಡುತ್ತಿದೆ. 

ಇಂದಿನ ಪಂದ್ಯದಲ್ಲಿ ಎರಡೂ ತಂಡಗಳು ತಮ್ಮ ಅಂತಿಮ 11ರಲ್ಲಿ ಬದಲಾವಣೆ ಮಾಡಿಕೊಂಡಿವೆ. ಕೇದಾರ್ ಜಾಧವ್ ಸ್ಥಾನಕ್ಕೆ ಕನ್ನಡಿಗ ಮನೀಶ್ ಪಾಂಡೆ ಆಯ್ಕೆ ಮಾಡಲಾಗಿದ್ದು, ನ್ಯೂಜಿಲೆಂಡ್‌ ಪಾಳಯದಲ್ಲಿ ಮಾರ್ಕ್ ಚಾಪ್ಮನ್ ಮತ್ತು ಟಾಮ್ ಬ್ಲಂಡೆಲ್ ಅವರ ಬದಲು ನಿಯಮಿತ ನಾಯಕ ಕೇನ್ ವಿಲಿಯಮ್ಸನ್ ಮತ್ತು ಮಿಚೆಲ್ ಸ್ಯಾಂಟ್ನರ್ ಅಂತಿಮ 11ಕ್ಕೆ ಮರಳಿದ್ದಾರೆ.

ಸತತ ಎರಡು ಪಂದ್ಯಗಳಲ್ಲಿ ಜಯ ಸಾಧಿಸಿರುವ ನ್ಯೂಜಿಲೆಂಡ್ ತಂಡ ಈಗಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-0 ಅಂತರದಲ್ಲಿ ವಶ ಪಡಿಸಿಕೊಂಡಿದೆ. ಕೊನೆಯ ಪಂದ್ಯ ಗೆದ್ದು ಗೌರವ ಉಳಿಸಿಕೊಳ್ಳುವುದು ಕೊಹ್ಲಿ ಪಡೆಯ ಗುರಿಯಾದರೆ, ನ್ಯೂಜಿಲೆಂಡ್ ತಂಡಕ್ಕೆ ಸರಣಿ ಕ್ಲೀನ್ ಸ್ವೀಪ್ ಮಾಡಿಕೊಳ್ಳುವ ಇರಾದೆಯಲ್ಲಿದೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

SCROLL FOR NEXT