ಮನೀಶ್ ಪಾಂಡೇ ಮತ್ತು ಕೆಎಲ್ ರಾಹುಲ್ 
ಕ್ರಿಕೆಟ್

3ನೇ ಏಕದಿನ: ಮೈದಾನದಲ್ಲಿ ಕನ್ನಡ ಬಳಸಿದ ಕೆಎಲ್ ರಾಹುಲ್, ಮನೀಶ್ ಪಾಂಡ್!

ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

ಮೌಂಟ್‌ಮೌಂಗಾನುಯಿ: ನ್ಯೂಜಿಲೆಂಡ್ ವಿರುದ್ಧದ 3ನೇ ಏಕದಿನ ಪಂದ್ಯದಲ್ಲಿ ಕನ್ನಡಿಗ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೇ ಮೈದಾನದಲ್ಲಿ ಕನ್ನಡದಲ್ಲೇ ಮಾತನಾಡಿ ಕನ್ನಡಿಗರ ಮನ ಗೆದ್ದಿದ್ದಾರೆ.

ಹೌದು.. ಮೌಂಟ್‌ಮೌಂಗಾನುಯಿಯ ಬೇ ಓವಲ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಪಂದ್ಯದಲ್ಲಿ ಕರ್ನಾಟಕ ಮೂಲದ ಆಟಗಾರರಾದ ಮನೀಶ್ ಪಾಂಡೇ ಹಾಗೂ ಶತಕ ವೀರ ಕೆಎಲ್ ರಾಹುಲ್ ಕನ್ನಡದಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಮನ ಗೆದ್ದಿದ್ದಾರೆ. ಶ್ರೇಯಶ್ ಅಯ್ಯರ್ ಔಟಾದ ಬಳಿಕ 5ನೇ ವಿಕೆಟ್ ಗೆ ಜೊತೆಯಾದ ಈ ಜೋಡಿ ಭಾರತಕ್ಕೆ ಶತಕದ ಜೊತೆಯಾಟ ನೀಡಿತು. ಈ ವೇಳೆ ಉಭಯ ಆಟಗಾರರು ಕನ್ನಡದಲ್ಲೇ ಮಾತನಾಡಿಕೊಂಡ ವಿಚಾರ ಸ್ಟಂಪ್ ಮೈಕ್ ನಲ್ಲಿ ದಾಖಲಾಗಿದೆ.

ಮನೀಶ್ ಪಾಂಡೆ ಚೆಂಡನ್ನು ತಳ್ಳಿ ಒಂಟಿ ರನ್‌ಗೆ ಓಡಲು ಮುಂದಾಗುತ್ತಾರೆ. ಈ ವೇಳೆ ನಾನ್ ಸ್ಟ್ರೈಕ್‌ನಲ್ಲಿದ್ದ ಕೆ.ಎಲ್ ರಾಹುಲ್‌ ಮನೀಶ್ ಪಾಂಡೆಗೆ 'ಬೇಡ ಬೇಡ' ಎಂದು ಜೋರಾಗಿ ಕೂಗಿ ಹೇಳುತ್ತಾರೆ. ಇದು ಸ್ಟಂಪ್ ಮೈಕ್‌ನಲ್ಲಿ ದಾಖಲಾಗಿದೆ. ಅಲ್ಲದೆ ಪ್ರತೀ ಓವರ್ ನ ಮುಕ್ತಾಯದ ಬಳಿಕವೂ ಉಭಯ ಆಟಗಾರರು ಕನ್ನಡದಲ್ಲೇ ಸಂಭಾಷಣೆ ನಡೆಸಿದ್ದಾರೆ. 

ಈ ಹಿಂದೆಯೇ ಕೂಡ ಮನೀಶ್ ಪಾಂಡೆ ಮೈದಾನದಲ್ಲಿ ಕನ್ನಡದಲ್ಲಿ ಮಾತನಾಡಿ ಸುದ್ದಿಯಾಗಿದ್ದರು. ಐಪಿಎಲ್ ಪಂದ್ಯಾವಳಿಯಲ್ಲಿ ಮನೀಶ್ ಪಾಂಡೇ ರಾಬಿನ್ ಉತ್ತಪ್ಪರೊಂದಿಗೆ ಪರಸ್ಪರ ಮಾತುಕತೆ ನಡೆಸಿದ್ದರು. ಈ ವೇಳೆ ವೀಕ್ಷಕ ವಿವರಣೆದಾರರೂ ಕೂಡ ಅದು ಕನ್ನಡ ಭಾಷೆಯಲ್ಲವೇ ಎಂದು ಪ್ರಶ್ನಿಸಿದ್ದಾಗ ಪಾಂಡೇ ಹೌದು ಅದು ಕನ್ನಡ ಎಂದು ಉತ್ತರಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT