ರಿಷಬ್ ಪಂತ್ 
ಕ್ರಿಕೆಟ್

ರಿಷಬ್ ಪಂತ್ ರನ್ನು ನ್ಯೂಜಿಲೆಂಡ್ ಗೆ ಕರೆದುಕೊಂಡು ಹೋಗಿದ್ದು ಬೆಂಚ್ ಕಾಯುವುದಕ್ಕಾ?: ಡೆಲ್ಲಿ ಕ್ಯಾಪಿಟಲ್ಸ್ ಸಹ ಮಾಲೀಕ

ಜೆಎಸ್ ಡಬ್ಲ್ಯು ಸ್ಪೋರ್ಟ್ಸ್ ನಿರ್ದೇಶಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕ ಪರ್ತ್ ಜಿಂದಾಲ್ ಅವರು ರಿಷಬ್ ಪಂತ್ ಮತ್ತು ಆರ್ ಅಶ್ವಿನ್ ಅವರನ್ನು ಭಾರತದ ಸೀಮಿತ ಓವರ್ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ.

ನವದೆಹಲಿ: ಜೆಎಸ್ ಡಬ್ಲ್ಯು ಸ್ಪೋರ್ಟ್ಸ್ ನಿರ್ದೇಶಕ ಹಾಗೂ ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸಹ ಮಾಲೀಕ ಪರ್ತ್ ಜಿಂದಾಲ್ ಅವರು ರಿಷಬ್ ಪಂತ್ ಮತ್ತು ಆರ್ ಅಶ್ವಿನ್ ಅವರನ್ನು ಭಾರತದ ಸೀಮಿತ ಓವರ್ ತಂಡದಿಂದ ಹೊರಗಿಟ್ಟಿರುವುದನ್ನು ಪ್ರಶ್ನಿಸಿದ್ದಾರೆ.

ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಜಿಂದಾಲ್ ಅವರು, ಈ ಇವರಿಬ್ಬರನ್ನೂ "ಎಕ್ಸ್-ಫ್ಯಾಕ್ಟರ್" ಆಟಗಾರರು ಎಂದು ಬಣ್ಣಿಸಿದ್ದಾರೆ. ಅಲ್ಲದೆ ರಿಷಬ್ ಪಂತ್ ರನ್ನು ನ್ಯೂಜಿಲೆಂಡ್ ಗೆ ಕರೆದುಕೊಂಡು ಹೋಗಿದ್ದು ಬೆಂಚ್ ಕಾಯುವುದಕ್ಕಾ? ಎಂದು ಪ್ರಶ್ನಿಸಿದ್ದಾರೆ.

ನ್ಯೂಜಿಲೆಂಡ್ ಪ್ರವಾಸದ ವೇಳೆ ಸೀಮಿತ್ ಓವರ್ ಗಳಲ್ಲಿ ಪಂತ್ ಆಡದಿರುವುದು ಅರ್ಥವಿಲ್ಲದ ನಿರ್ಧಾರ ಮತ್ತು ವಿಕೆಟ್ ಪಡೆಯುವ ಆರ್ ಅಶ್ವಿನ್ ಅವರ ಬಗ್ಗೆ ಅರ್ಥ ಮಾಡಿಕೊಳ್ಳುವಲ್ಲಿ ತಂಡ ವಿಫಲವಾಗಿದೆ ಎಂದು ಹೇಳಿದ್ದಾರೆ.

ವಿಶ್ವಕಪ್ ನಂತರ ಭಾರತದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಮಹೇಂದ್ರ ಸಿಂಗ್ ಧೋನಿ ತಂಡದಿಂದ ದೂರ ಸರಿದ ಬಳಿಕ ರಿಷಭ್ ಪಂತ್ ಅವರನ್ನು ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಾಗಿತ್ತು, ಆದರೆ ನ್ಯೂಜಿಲೆಂಡ್ ಪ್ರವಾಸದಲ್ಲಿ ಅವರು ಕೇವಲ ಪ್ರೇಕ್ಷಕರಾಗಿ ಉಳಿದಿದ್ದಾರೆ ಮತ್ತು ಇಲ್ಲಿಯವರೆಗೆ ಎಂಟು ಪಂದ್ಯಗಳಲ್ಲಿ ಅವರು ಒಂದು ಪಂದ್ಯದಲ್ಲೂ ಆಡಲು ಅವಕಾಶ ಪಡೆದಿಲ್ಲ. 

ಕಳೆದ ವರ್ಷ ಇಂಗ್ಲೆಂಡ್‌ನಲ್ಲಿ ನಡೆದ ಐಸಿಸಿ ವಿಶ್ವಕಪ್‌ನ ಸೆಮಿಫೈನಲ್ಸ್ನಲ್ಲಿ ಭಾರತವು ನ್ಯೂಜಿಲೆಂಡ್‌ ವಿರುದ್ಧ ಸೋಲು ಕಂಡಿತು. ಇದೇ ಪಂದ್ಯದಲ್ಲಿ ಎಂಎಸ್ ಧೋನಿ ಕೊನೆಯ ಓವರ್ ನಲ್ಲಿ ರನ್ ಔಟ್ ಆದರು. ಅಂದಿನಿಂದ ಧೋನಿ ಭಾರತೀಯ ತಂಡದಿಂದ ಹೊರಗಿದ್ದಾರೆ. ಅಲ್ಲದೆ, ಆಗಿನ ಆಯ್ಕೆ ಸಮಿತಿಯ ಮುಖ್ಯಸ್ಥ ಎಂ.ಎಸ್.ಕೆ ಪ್ರಸಾದ್ ಕೂಡ ತಂಡದ ಗಮನವು ಭವಿಷ್ಯದ ಆಟಗಾರರತ್ತ ನೆಟ್ಟಿದ್ದು, ಪಂತ್ ಅವರ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT