ಹರ್ಮನ್ ಪ್ರೀತ್ ಕೌರ್ 
ಕ್ರಿಕೆಟ್

ಟಿ20 ವಿಶ್ವಕಪ್‌: ಯುವ ಭಾರತೀಯ ಪಡೆಯೇ ಉನ್ನತ ಸ್ಪರ್ಧಿ - ನಾಯಕಿ ಹರ್ಮನ್‌ಪ್ರೀತ್‌ ಕೌರ್‌

ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ಭಾರತ ತಂಡ ದಿನದಿಂದ ದಿನಕ್ಕೆ ಸುಧಾರಣೆ ಕಂಡುಕೊಳ್ಳುತ್ತಿದೆ ಎಂದು ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ತಿಳಿಸಿದ್ದಾರೆ.

ಸಿಡ್ನಿ: ಐಸಿಸಿ ಮಹಿಳಾ ಟಿ-20 ವಿಶ್ವಕಪ್ ಆರಂಭವಾಗಲು ಇನ್ನು ಒಂದು ವಾರ ಮಾತ್ರ ಬಾಕಿಯಿದೆ. ಭಾರತ ತಂಡ ದಿನದಿಂದ ದಿನಕ್ಕೆ ಸುಧಾರಣೆ ಕಂಡುಕೊಳ್ಳುತ್ತಿದೆ ಎಂದು ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ತಿಳಿಸಿದ್ದಾರೆ.

ಮುಂದಿನ ಶುಕ್ರವಾರ ಭಾರತ ಮಹಿಳಾ ತಂಡ ಇಲ್ಲಿನ ಸಿಡ್ನಿ ಶೋಗ್ರೌಂಡ್ ಅಂಗಳದಲ್ಲಿ ಆಸ್ಟ್ರೇಲಿಯಾ ವಿರುದ್ಧ ಉದ್ಘಾಟನಾ ಪಂದ್ಯದಲ್ಲಿ ಸೆಣಸಲಿದೆ. ಕಳೆದ 2017ರ ವಿಶ್ವಕಪ್ ರೀತಿ ಪ್ರದರ್ಶನ ತೋರಲು ತಂಡ ಉತ್ಸುಕವಾಗಿದೆ. ಅಂದು ಭಾರತ ಫೈನಲ್ ಹಣಾಹಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಲಾರ್ಡ್ಸ್ ಅಂಗಳದಲ್ಲಿ ಸೋಲು ಅನುಭವಿಸಿತ್ತು.

ಟಿ-20 ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮೂರು ಬಾರಿ ಸೆಮಿಫೈನಲ್ ಹಣಾಹಣಿಯಲ್ಲಿ ಸೋಲು ಅನುಭವಿಸಿತ್ತು. ಆದರೆ, ಒಮ್ಮೆಯೂ ಫೈನಲ್ ತಲುಪಿರಲಿಲ್ಲ. ವೆಸ್ಟ್ ಇಂಡೀಸ್ ನಲ್ಲಿ ಕಳೆದ 2018ರ ಆವೃತ್ತಿಯಲ್ಲಿ 2009ರ ಚಾಂಪಿಯನ್ ಇಂಗ್ಲೆಂಡ್ ಗೆ ಎಂಟು ವಿಕೆಟ್ ಗೆ ಮಣಿದಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT