ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಇದೇ ಮೊದಲ ಬಾರಿಗೆ ರಣಜಿ ಟೂರ್ನಿಯ ಸೆಮಿಫೈನಲ್ಸ್ ಮತ್ತು ಫೈನಲ್ ನಲ್ಲಿ ಡಿಆರ್ ಎಸ್

ದೇಶಿಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿಫೈನಲ್ಸ್  ಮತ್ತು ಅಂತಿಮ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ (ಡಿಆರ್ಎಸ್) ಅವಕಾಶವನ್ನು ಮೊದಲ ಬಾರಿಗೆ ಬಳಸಲಾಗುತ್ತದೆ.

ನವದೆಹಲಿ: ದೇಶಿಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿಫೈನಲ್ಸ್ ಮತ್ತು ಅಂತಿಮ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ(ಡಿಆರ್ಎಸ್) ಅವಕಾಶವನ್ನು ಮೊದಲ ಬಾರಿಗೆ ಬಳಸಲಾಗುತ್ತದೆ.
  
ರಣಜಿ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಆಟಗಾರರು ಡಿಆರ್ಎಸ್ ಅನ್ನು ಸೆಮಿಫೈನಲ್ಸ್ ಮತ್ತು ಅಂತಿಮ ಪಂದ್ಯಗಳಲ್ಲಿ ಬಳಸಲು  ಬಿಸಿಸಿಐ ಅವಕಾಶ ನೀಡಿದೆ. ರಣಜಿ ಟ್ರೋಫಿಯ ಸೆಮಿಫೈನಲ್ಸ್ ಪಂದ್ಯಗಳು ಫೆಬ್ರವರಿ 29 ರಿಂದ ನಡೆಯಲಿವೆ. ಸೌರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕ-ಬಂಗಾಳ ನಡುವೆ ಸೆಮಿಫೈಲ್ಸ್ ಪಂದ್ಯಗಳು ನಡೆಯಲಿವೆ. ಮಾರ್ಚ್ 9 ರಿಂದ ಫೈನಲ್ ಪಂದ್ಯ ನಡೆಯಲಿದೆ.
  
ಟೆಸ್ಟ್ ಕ್ರಿಕೆಟ್‌ನಲ್ಲಿ, ಪ್ರತಿ ತಂಡಕ್ಕೆ ಸಾಮಾನ್ಯವಾಗಿ ಎರಡು ಡಿಆರ್‌ಎಸ್ಗಳು ಲಭ್ಯವಿರುತ್ತವೆ. ಮೇಲ್ಮನವಿಯನ್ನು ತಂಡ ಯಶಸ್ವಿಯಾಗಿ ಬಳಿಸಿಕೊಂಡಲ್ಲಿ ತಂಡಕ್ಕೆ ಲಾಭವಾಗುತ್ತದೆ. ಈ ಎರಡು ಡಿಆರ್ ಎಸ್ ಗಳನ್ನು ತಂಡ ಕಳೆದುಕೊಂಡಲ್ಲಿ ಮತ್ತೆ ಈ ಅವಕಾಶ ಬಳಸಲು ಸಾಧ್ಯವಿಲ್ಲ. ಆದರೆ ರಣಜಿ ಟ್ರೋಫಿಯಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿ ತಂಡವು ಗರಿಷ್ಠ ನಾಲ್ಕು ಬಾರಿ ಡಿಆರ್ ಎಸ್ ಬಳಸ ಬಹುದು.
  
ರಣಜಿ ಟ್ರೋಫಿಯಲ್ಲಿ ಡಿಆರ್‌ಎಸ್ ಬಳಕೆ ಸೀಮಿತವಾಗಿರುತ್ತದೆ ಮತ್ತು ಸ್ನಿಕೋ, ಹಾಟ್ ಸ್ಪಾಟ್ ಮತ್ತು ಬಾಲ್ ಟ್ರ್ಯಾಕರ್ ಅನ್ನು ಬಳಸಲಾಗುವುದಿಲ್ಲ. ಮೂರನೇ ಅಂಪೈರ್‌ಗೆ ಸಹಾಯ ಮಾಡಲು ನಿಧಾನ ಚಲನೆಯ ಕ್ಯಾಮೆರಾ ಇರುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT