ಸಾಂದರ್ಭಿಕ ಚಿತ್ರ 
ಕ್ರಿಕೆಟ್

ಇದೇ ಮೊದಲ ಬಾರಿಗೆ ರಣಜಿ ಟೂರ್ನಿಯ ಸೆಮಿಫೈನಲ್ಸ್ ಮತ್ತು ಫೈನಲ್ ನಲ್ಲಿ ಡಿಆರ್ ಎಸ್

ದೇಶಿಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿಫೈನಲ್ಸ್  ಮತ್ತು ಅಂತಿಮ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ (ಡಿಆರ್ಎಸ್) ಅವಕಾಶವನ್ನು ಮೊದಲ ಬಾರಿಗೆ ಬಳಸಲಾಗುತ್ತದೆ.

ನವದೆಹಲಿ: ದೇಶಿಯ ಕ್ರಿಕೆಟ್ ಟೂರ್ನಿ ರಣಜಿ ಟ್ರೋಫಿಯ ಸೆಮಿಫೈನಲ್ಸ್ ಮತ್ತು ಅಂತಿಮ ಪಂದ್ಯಗಳಲ್ಲಿ ಅಂಪೈರ್ ನಿರ್ಧಾರದ ಬಗ್ಗೆ ಮೇಲ್ಮನವಿ ಸಲ್ಲಿಸುವ(ಡಿಆರ್ಎಸ್) ಅವಕಾಶವನ್ನು ಮೊದಲ ಬಾರಿಗೆ ಬಳಸಲಾಗುತ್ತದೆ.
  
ರಣಜಿ ಟೂರ್ನಿಯಲ್ಲಿ ಇದೇ ಮೊದಲ ಬಾರಿಗೆ ಆಟಗಾರರು ಡಿಆರ್ಎಸ್ ಅನ್ನು ಸೆಮಿಫೈನಲ್ಸ್ ಮತ್ತು ಅಂತಿಮ ಪಂದ್ಯಗಳಲ್ಲಿ ಬಳಸಲು  ಬಿಸಿಸಿಐ ಅವಕಾಶ ನೀಡಿದೆ. ರಣಜಿ ಟ್ರೋಫಿಯ ಸೆಮಿಫೈನಲ್ಸ್ ಪಂದ್ಯಗಳು ಫೆಬ್ರವರಿ 29 ರಿಂದ ನಡೆಯಲಿವೆ. ಸೌರಾಷ್ಟ್ರ, ಗುಜರಾತ್ ಮತ್ತು ಕರ್ನಾಟಕ-ಬಂಗಾಳ ನಡುವೆ ಸೆಮಿಫೈಲ್ಸ್ ಪಂದ್ಯಗಳು ನಡೆಯಲಿವೆ. ಮಾರ್ಚ್ 9 ರಿಂದ ಫೈನಲ್ ಪಂದ್ಯ ನಡೆಯಲಿದೆ.
  
ಟೆಸ್ಟ್ ಕ್ರಿಕೆಟ್‌ನಲ್ಲಿ, ಪ್ರತಿ ತಂಡಕ್ಕೆ ಸಾಮಾನ್ಯವಾಗಿ ಎರಡು ಡಿಆರ್‌ಎಸ್ಗಳು ಲಭ್ಯವಿರುತ್ತವೆ. ಮೇಲ್ಮನವಿಯನ್ನು ತಂಡ ಯಶಸ್ವಿಯಾಗಿ ಬಳಿಸಿಕೊಂಡಲ್ಲಿ ತಂಡಕ್ಕೆ ಲಾಭವಾಗುತ್ತದೆ. ಈ ಎರಡು ಡಿಆರ್ ಎಸ್ ಗಳನ್ನು ತಂಡ ಕಳೆದುಕೊಂಡಲ್ಲಿ ಮತ್ತೆ ಈ ಅವಕಾಶ ಬಳಸಲು ಸಾಧ್ಯವಿಲ್ಲ. ಆದರೆ ರಣಜಿ ಟ್ರೋಫಿಯಲ್ಲಿ ಪ್ರತಿ ಇನ್ನಿಂಗ್ಸ್‌ನಲ್ಲಿ ತಂಡವು ಗರಿಷ್ಠ ನಾಲ್ಕು ಬಾರಿ ಡಿಆರ್ ಎಸ್ ಬಳಸ ಬಹುದು.
  
ರಣಜಿ ಟ್ರೋಫಿಯಲ್ಲಿ ಡಿಆರ್‌ಎಸ್ ಬಳಕೆ ಸೀಮಿತವಾಗಿರುತ್ತದೆ ಮತ್ತು ಸ್ನಿಕೋ, ಹಾಟ್ ಸ್ಪಾಟ್ ಮತ್ತು ಬಾಲ್ ಟ್ರ್ಯಾಕರ್ ಅನ್ನು ಬಳಸಲಾಗುವುದಿಲ್ಲ. ಮೂರನೇ ಅಂಪೈರ್‌ಗೆ ಸಹಾಯ ಮಾಡಲು ನಿಧಾನ ಚಲನೆಯ ಕ್ಯಾಮೆರಾ ಇರುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT