ಕೊಹ್ಲಿ ಪಡೆ-ಲಾಥಮ್ 
ಕ್ರಿಕೆಟ್

ಎರಡನೇ ಪಂದ್ಯದಲ್ಲಿಯೂ ಕೊಹ್ಲಿ ಪಡೆಯನ್ನು ಸುಲಭವಾಗಿ ಬಗ್ಗು ಬಡಿಯುತ್ತೇವೆ: ಲಥಾಮ್

ಪ್ರಸ್ತುತ ಸಾಗುತ್ತಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ರನ್ ಮಶೀನ್ ಎಂದೇ ಖ್ಯಾತಿ ಗಳಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಲಯ ಮುಂದುವರಿಸುವಲ್ಲಿ ಎಡವುತ್ತಿದ್ದಾರೆ.

ಕ್ರೈಸ್ಟ್ ಚರ್ಚ್: ಪ್ರಸ್ತುತ ಸಾಗುತ್ತಿರುವ ನ್ಯೂಜಿಲೆಂಡ್ ಪ್ರವಾಸದಲ್ಲಿ ರನ್ ಮಶೀನ್ ಎಂದೇ ಖ್ಯಾತಿ ಗಳಿಸಿರುವ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ತಮ್ಮ ಬ್ಯಾಟಿಂಗ್ ಲಯ ಮುಂದುವರಿಸುವಲ್ಲಿ ಎಡವುತ್ತಿದ್ದಾರೆ. ನ್ಯೂಜಿಲೆಂಡ್ ಪ್ರವಾಸದ ಒಟ್ಟು ಒಂಬತ್ತು ಇನಿಂಗ್ಸ್ ಗಳಲ್ಲಿ ಕೇವಲ 201 ರನ್ ಗಳಿಗೆ ಸೀಮಿತರಾಗಿದ್ದಾರೆ. ಆ ಮೂಲಕ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ಉಂಟು ಮಾಡಿದ್ದಾರೆ.

ಮೊದಲನೇ ಟೆಸ್ಟ್ ಪಂದ್ಯದಲ್ಲಿ ಕ್ರಮವಾಗಿ ಎರಡೂ ಇನಿಂಗ್ಸ್ ಗಳಲ್ಲಿ 2 ಮತ್ತು 19 ರನ್ ಗಳಿಸಿದ್ದರು. ಈ ಪಂದ್ಯದಲ್ಲಿ ಭಾರತ 10 ವಿಕೆಟ್ ಗಳಿಂದ ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು ಅನುಭವಿಸಿತ್ತು. ಇದರ ಪರಿಣಾಮ ಟೀಮ್ ಇಂಡಿಯಾ ನಾಯಕ ವಿರಾಟ್, ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಮುಂದಿನ ಶನಿವಾರ ಕ್ರೈಸ್ಟ್ ಚರ್ಚ್ ನಲ್ಲಿ ಎರಡನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಕಿವೀಸ್ ಆರಂಭಿಕ ಟಾಮ್ ಲಥಾಮ್ ಅವರು ಭಾರತ ತಂಡದ ನಾಯಕನನ್ನು ಮತ್ತೊಮ್ಮೆ ಕಟ್ಟಿ ಹಾಕಲು ಇನ್ನೊಂದು ರಣತಂತ್ರವನ್ನು ರೂಪಸಿದ್ದೇವೆ ಎಂದು ಸೂಚನೆ ನೀಡಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ ಟೀಂ ಇಂಡಿಯಾ ನಾಯಕ ಬ್ಯಾಟಿಂಗ್ ಗೆ ಬರುತ್ತಿದ್ದಂತೆ ನಾವು ಅವರನ್ನು ಕಟ್ಟಿ ಹಾಕಲು ಸಿದ್ದರಾಗುತ್ತೇವೆ. ಅವರೊಬ್ಬ ಗುಣಮಟ್ಟದ ಆಟಗಾರ ಹಾಗೂ ಆ ಕಾರಣದಿಂದಲೇ ಅವರು ವಿಶ್ವ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಅಗ್ರ ಸ್ಥಾನವನ್ನು ಹೆಚ್ಚು ದಿನಗಳ ಕಾಲ ಅಲಂಕರಿಸಿದ್ದಾರೆ,' ಎಂದು ಹೇಳಿದರು.

ತಾನೊಬ್ಬ ವಿಶ್ವ ಶ್ರೇಷ್ಠ ಬ್ಯಾಟ್ಸ್ ಮನ್ ಎಂಬುದನ್ನು ಎಲ್ಲ ಪರಿಸ್ಥಿತಿಗಳಲ್ಲಿಯೂ ಕೊಹ್ಲಿ  ಸಾಬೀತು ಪಡಿಸಿದ್ದಾರೆ. ಅದರಂತೆ ದೀರ್ಘ ಅವಧಿ ಕಾಲ ಅಗ್ರ ಸ್ಥಾನದಲ್ಲಿ ಮೆರೆದಿದ್ದಾರೆ. ಇಲ್ಲಿನ ಪಿಚ್ ಹೆಚ್ಚಿನ ಚಲನೆ ಹೊಂದಿದ್ದರೆ, ಅದನ್ನು ಬಳಸಿಕೊಳ್ಳಲು ಪ್ರಯತ್ನಿಸುತ್ತೇವೆ ಎಂದು ಉಲ್ಲೇಖಿಸಿದ್ದಾರೆ.

ಗಾಯದಿಂದಾಗಿ ಮೊದಲನೇ ಪಂದ್ಯಕ್ಕೆ ಅಲಭ್ಯರಾಗಿದ್ದ ನೀಲ್ ವ್ಯಾಗ್ನರ್ ಎರಡನೇ ಹಣಾಹಣಿಗೆ ತಂಡಕ್ಕೆ ಮರಳುತ್ತಿದ್ದು, ಬೌಲಿಂಗ್ ಇನ್ನಷ್ಟು ಬಲಿಷ್ಟವಾಗಲಿದೆ ಎಂದು ಎಡಗೈ ಬ್ಯಾಟ್ಸ್ ಮನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಎರಡು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ನ್ಯೂಜಿಲೆಂಡ 1-0 ಮುನ್ನಡೆ ಸಾಧಿಸಿದೆ. ಆದರೂ, ಎರಡನೇ ಹಣಾಹಣಿಯಲ್ಲಿ ಗೆದ್ದು ಮತ್ತೊಮ್ಮೆ 60 ಅಂಕಗಳನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿ ಖಾತೆಗೆ ಹಾಕಿಕೊಳ್ಳಲು ಕಿವೀಸ್ ತವಕಿಸುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT