ವಿರಾಟ್ ಕೊಹ್ಲಿ 
ಕ್ರಿಕೆಟ್

ಟಾಸ್ ಗೆದ್ದ ಭಾರತ ಫೀಲ್ಡಿಂಗ್ ಆಯ್ಕೆ, ವರ್ಷದ ಮೊದಲ ಟಿ20ಗೆ ಮಳೆ ಕಾಟ

ಪ್ರಸಕ್ತ ವರ್ಷದ ಮೊದಲ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಪ್ರವಾಸಿ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.

ಗುವಾಹಟಿ: ಪ್ರಸಕ್ತ ವರ್ಷದ ಮೊದಲ ಸರಣಿಯಲ್ಲಿ ಭಾರತ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿ ಆಗಲಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ, ಪ್ರವಾಸಿ ತಂಡಕ್ಕೆ ಮೊದಲು ಬ್ಯಾಟಿಂಗ್ ಮಾಡಲು ಆಹ್ವಾನ ನೀಡಿದೆ.

ಮೊದಲ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ ನೀಡಿದೆ. ಎಷ್ಟು ಗಂಟೆಗೆ ಪಂದ್ಯ ಆರಂಭವಾಗುತ್ತದೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲ. ಗಾಯದಿಂದ ಚೇತರಿಸಿಕೊಂಡ ಬಳಿಕ ಜಸ್ಪ್ರಿತ್ ಬುಮ್ರಾ ತಂಡಕ್ಕೆ ಮರಳಿದ್ದಾರೆ. 

ಕಳೆದ ವರ್ಷ ವಿಶ್ವಕಪ್‌ ವೈಫಲ್ಯ ಹೊರತಾಗಿ ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲೂ ಕೊಹ್ಲಿ ಸಾರಥ್ಯದ ಭಾರತ ತಂಡ ಅಧಿಕಾರಯುತ ಪ್ರದರ್ಶನ ನೀಡಿದೆ. ಈ ವರ್ಷ ಆಸ್ಟ್ರೇಲಿಯಾದಲ್ಲಿ ಟಿ20 ವಿಶ್ವಕಪ್‌ ನಡೆಯುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಟಿ20 ಸರಣಿಗಳನ್ನಾಡಲು ಎದುರು ನೋಡುತ್ತಿದೆ.

 ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಟಿ20 ಸರಣಿ ಬಳಿಕ ಭಾರತ ಆಸ್ಟ್ರೇಲಿಯಾ ಎದುರು ಅಷ್ಟೇ ಪಂದ್ಯಗಳ ಒಡಿಐ ಸರಣಿಯನ್ನಾಡಲಿದ್ದು, ನಂತರ ಕಿವೀಸ್‌ ಪ್ರವಾಸ ಕೈಗೊಂಡ 5 ಪಂದ್ಯಗಳ ಟಿ20 ಸರಣಿಯಲ್ಲಿ ಪೈಪೋಟಿ ನಡೆಸಲಿದೆ. ಇದರೊಂದಿಗೆ ಐಪಿಎಲ್‌ನ 13ನೇ ಆವೃತ್ತಿ ಆರಂಭದ ಹೊತ್ತಿಗೆ ಭಾರತ ತಂಡ ಒಟ್ಟು 8 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನೂ ಆಡಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ನಮ್ಮ ಆಚರಣೆಯ ನಡುವೆ ಬೇರೆಯದನ್ನು ಯಾಕೆ ತರುತ್ತೀರಾ: ದಸರಾದಲ್ಲಿ ಕಂಬಳ ಆಯೋಜನೆಗೆ ಯದುವೀರ್- ಪ್ರತಾಪ್ ಸಿಂಹ ವಿರೋಧ!

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್