ಕ್ರಿಕೆಟ್

ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ

Srinivas Rao BV

ಮುಂಬೈ: ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ. ಈ ಮೂಲಕ ಕರ್ನಾಟಕ ತಂಡ ರಣಜಿ ಟೂರ್ನಿಯ ಇತಿಹಾಸದಲ್ಲಿ 200ನೇ ಗೆಲುವಿನ ನಗೆ ಬೀರಿದೆ. 

ಇಲ್ಲಿನ ಬಾಂದ್ರಾ ಕುರ್ಲಾ ಸಂಕೀರ್ಣದ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ಬೆಳಗ್ಗೆ 8 ವಿಕೆಟ್ ಕಳೆದುಕೊಂಡು 139 ರನ್ ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಆತಿಥೇಯ ಮುಂಬೈ ತಂಡ 50 ಓವರ್ ಗಳಿಗೆ 149 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರವಾಸಿ ಕರ್ನಾಟಕ ತಂಡಕ್ಕೆ 126 ರನ್ ಸಾಧಾರಣ ಗುರಿ ನೀಡಿತು. 24.3 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಕರುಣ್ ನಾಯರ್ ಪಡೆ 129 ರನ್ ಕಲೆ ಹಾಕಿತು.
 

SCROLL FOR NEXT