ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ 
ಕ್ರಿಕೆಟ್

ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ

ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ.

ಮುಂಬೈ: ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ. ಈ ಮೂಲಕ ಕರ್ನಾಟಕ ತಂಡ ರಣಜಿ ಟೂರ್ನಿಯ ಇತಿಹಾಸದಲ್ಲಿ 200ನೇ ಗೆಲುವಿನ ನಗೆ ಬೀರಿದೆ. 

ಇಲ್ಲಿನ ಬಾಂದ್ರಾ ಕುರ್ಲಾ ಸಂಕೀರ್ಣದ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ಬೆಳಗ್ಗೆ 8 ವಿಕೆಟ್ ಕಳೆದುಕೊಂಡು 139 ರನ್ ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಆತಿಥೇಯ ಮುಂಬೈ ತಂಡ 50 ಓವರ್ ಗಳಿಗೆ 149 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರವಾಸಿ ಕರ್ನಾಟಕ ತಂಡಕ್ಕೆ 126 ರನ್ ಸಾಧಾರಣ ಗುರಿ ನೀಡಿತು. 24.3 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಕರುಣ್ ನಾಯರ್ ಪಡೆ 129 ರನ್ ಕಲೆ ಹಾಕಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT