ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ 
ಕ್ರಿಕೆಟ್

ರಣಜಿ ಟೂರ್ನಿಯಲ್ಲಿ 200ನೇ ಗೆಲುವು ದಾಖಲಿಸಿದ ಕರ್ನಾಟಕ

ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ.

ಮುಂಬೈ: ರಣಜಿ ಟೂರ್ನಿಯಲ್ಲಿ ಕರ್ನಾಟಕ ಭರ್ಜರಿ ಪ್ರದರ್ಶನವನ್ನು ಮುಂದುವರಿಸಿದೆ. ಮಾಜಿ ಚಾಂಪಿಯನ್ ಮುಂಬೈ ತಂಡವನ್ನು ಐದು ವಿಕೆಟ್ ಗಳಿಂದ ಮಣಿಸಿದ ಕರುಣ್ ನಾಯರ್ ಪಡೆ ಅಬ್ಬರಿಸಿದೆ. ಈ ಮೂಲಕ ಕರ್ನಾಟಕ ತಂಡ ರಣಜಿ ಟೂರ್ನಿಯ ಇತಿಹಾಸದಲ್ಲಿ 200ನೇ ಗೆಲುವಿನ ನಗೆ ಬೀರಿದೆ. 

ಇಲ್ಲಿನ ಬಾಂದ್ರಾ ಕುರ್ಲಾ ಸಂಕೀರ್ಣದ ಕ್ರೀಡಾಂಗಣದಲ್ಲಿ ಮೂರನೇ ದಿನವಾದ ಇಂದು ಬೆಳಗ್ಗೆ 8 ವಿಕೆಟ್ ಕಳೆದುಕೊಂಡು 139 ರನ್ ಗಳಿಂದ ದ್ವಿತೀಯ ಇನಿಂಗ್ಸ್ ಮುಂದುವರಿಸಿದ ಆತಿಥೇಯ ಮುಂಬೈ ತಂಡ 50 ಓವರ್ ಗಳಿಗೆ 149 ರನ್ ಗಳಿಗೆ ಆಲೌಟ್ ಆಯಿತು. ಆ ಮೂಲಕ ಪ್ರವಾಸಿ ಕರ್ನಾಟಕ ತಂಡಕ್ಕೆ 126 ರನ್ ಸಾಧಾರಣ ಗುರಿ ನೀಡಿತು. 24.3 ಓವರ್ ಗಳಲ್ಲಿ ಐದು ವಿಕೆಟ್ ಕಳೆದುಕೊಂಡು ಕರುಣ್ ನಾಯರ್ ಪಡೆ 129 ರನ್ ಕಲೆ ಹಾಕಿತು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT