ಹರ್ಮನ್‌ಪ್ರೀತ್ ಕೌರ್ 
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆ ಭಾರತದ ತಂಡ ಪ್ರಕಟ

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ  ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ  ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

15 ವರ್ಷದ ಹರಿಯಾಣ ಶಾಲಾ ವಿದ್ಯಾರ್ಥಿನಿ ಶಫಾಲಿ ವರ್ಮಾಮೊದಲ ಋತುವಿನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಲವು ಉತ್ತಮ ಪ್ರದರ್ಶನ ನೀಡಿದ ನಂತರ ತನ್ನ ಮೊದಲ ಜಾಗತಿಕ  ಪಂದ್ಯಾವಳಿಯನ್ನು ಆಡಲಿದ್ದಾರೆ.

ಇತ್ತೀಚಿನ ಮಹಿಳಾ ಚಾಲೆಂಜರ್ ಟ್ರೋಫಿಯಲ್ಲಿ ನೀಡಿದ್ದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಪಂದ್ಯಾವಳಿಗೆ ರಿಚಾ ಆಯ್ಕೆಯಾಗಿದ್ದಾರೆ.ರಿಚಾ ಒಂದೇ ಪಂದ್ಯದಲ್ಲಿ  ಪಂದ್ಯದಲ್ಲಿ 26 ಎಸೆತಗಳಲ್ಲಿ 36 ರನ್ (ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್) ಬಾರಿಸಿ ಗಮನ ಸೆಳೆದಿದ್ದರು.

ಟಿ 20 ವಿಶ್ವಕಪ್‌ಗೆ ಮುಂಚಿತವಾಗಿ ಆಸ್ಟ್ರೇಲಿಯಾದಲ್ಲಿ ತ್ರಿಕೋನ ಸರಣಿಗಾಗಿ 16 ಸದಸ್ಯರ ತಂಡವನ್ನು ಆಯ್ಕೆದಾರರು ಘೋಷಿಸಿದ್ದು, ನುಝತ್ ಪರ್ವೀನ್  ಅವರನ್ನು 16 ನೇ ಆಟಗಾರರನ್ನಾಗಿ ಸೇರ್ಪಡೆ ಮಾಡಲಾಗಿದೆ. ಆ ಪಂದ್ಯಾವಳಿ ಜನವರಿ 31 ರಂದು ಪ್ರಾರಂಭಗೊಳ್ಳುತ್ತಿದ್ದು ಇಂಗ್ಲೆಂಡ್ ಸಹ ಸ್ಪರ್ಧಿಸಲಿದೆ.

ಇನ್ನು ವುಶ್ವ ಟಿ20  ತಂಡ ಹೀಗಿದೆ-

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್‌, ಶಿಖಾ ಪಾಂಡೆ, ಪೂಜಾ ವಸ್ತ್ರಕಾರ್‌, ಅರುಂಧತಿ ರೆಡ್ಡಿ.

ತ್ರಿಕೋನ ಸರಣಿಗೆ ಆಯ್ಕೆಯಾಗಿರುವ ತಂಡ ಹೀಗಿದೆ-

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್‌, ರಾಜೇಶ್ವರಿ ಗಾಯಕ್ವಾಡ್‌, ಪೂಜಾ ವಸ್ತ್ರಕಾರ್, ಅರುಂಧತಿ ರೆಡ್ಡಿ, ನುಝಾಹತ್‌ ಪರ್ವೀನ್.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್, ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

ಲೆಬನಾನ್ ನಲ್ಲಿ ಇಸ್ರೇಲ್ ಆರ್ಭಟ: ಮನೆಗಳ ಮೇಲೆ ಸ್ಫೋಟಕಗಳಿಂದ ದಾಳಿ; ಹಲವು ಹಳ್ಳಿಗಳು ನಾಮಾವಶೇಷ!

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

SCROLL FOR NEXT