ಹರ್ಮನ್‌ಪ್ರೀತ್ ಕೌರ್ 
ಕ್ರಿಕೆಟ್

ಐಸಿಸಿ ಮಹಿಳಾ ಟಿ20 ವಿಶ್ವಕಪ್ ಗೆ ಭಾರತದ ತಂಡ ಪ್ರಕಟ

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ  ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

ಫೆಬ್ರವರಿ 21 ರಿಂದ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಐಸಿಸಿ ಮಹಿಳಾ ಟಿ 20 ವಿಶ್ವಕಪ್‌ಗಾಗಿ 15 ಸದಸ್ಯರ ಹರ್ಮನ್‌ಪ್ರೀತ್ ಕೌರ್ ನೇತೃತ್ವದ ಭಾರತ ತಂಡ ಪ್ರಕಟಿಸಲಾಗಿದೆ. ಬಂಗಾಳಿ ಆಟಗಾರ್ತಿ  ರಿಚಾ ಘೋಷ್ ತಂಡಕ್ಕೆ ಸೇರ್ಪಡೆಗೊಂಡ ಏಕೈಕ ಹೊಸ ಪ್ರತಿಭೆ ಎನಿಸಿದ್ದಾರೆ.

15 ವರ್ಷದ ಹರಿಯಾಣ ಶಾಲಾ ವಿದ್ಯಾರ್ಥಿನಿ ಶಫಾಲಿ ವರ್ಮಾಮೊದಲ ಋತುವಿನಲ್ಲಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಕೆಲವು ಉತ್ತಮ ಪ್ರದರ್ಶನ ನೀಡಿದ ನಂತರ ತನ್ನ ಮೊದಲ ಜಾಗತಿಕ  ಪಂದ್ಯಾವಳಿಯನ್ನು ಆಡಲಿದ್ದಾರೆ.

ಇತ್ತೀಚಿನ ಮಹಿಳಾ ಚಾಲೆಂಜರ್ ಟ್ರೋಫಿಯಲ್ಲಿ ನೀಡಿದ್ದ ಉತ್ತಮ ಪ್ರದರ್ಶನದ ಹಿನ್ನೆಲೆಯಲ್ಲಿ ಪಂದ್ಯಾವಳಿಗೆ ರಿಚಾ ಆಯ್ಕೆಯಾಗಿದ್ದಾರೆ.ರಿಚಾ ಒಂದೇ ಪಂದ್ಯದಲ್ಲಿ  ಪಂದ್ಯದಲ್ಲಿ 26 ಎಸೆತಗಳಲ್ಲಿ 36 ರನ್ (ನಾಲ್ಕು ಬೌಂಡರಿ ಮತ್ತು ಒಂದು ಸಿಕ್ಸರ್) ಬಾರಿಸಿ ಗಮನ ಸೆಳೆದಿದ್ದರು.

ಟಿ 20 ವಿಶ್ವಕಪ್‌ಗೆ ಮುಂಚಿತವಾಗಿ ಆಸ್ಟ್ರೇಲಿಯಾದಲ್ಲಿ ತ್ರಿಕೋನ ಸರಣಿಗಾಗಿ 16 ಸದಸ್ಯರ ತಂಡವನ್ನು ಆಯ್ಕೆದಾರರು ಘೋಷಿಸಿದ್ದು, ನುಝತ್ ಪರ್ವೀನ್  ಅವರನ್ನು 16 ನೇ ಆಟಗಾರರನ್ನಾಗಿ ಸೇರ್ಪಡೆ ಮಾಡಲಾಗಿದೆ. ಆ ಪಂದ್ಯಾವಳಿ ಜನವರಿ 31 ರಂದು ಪ್ರಾರಂಭಗೊಳ್ಳುತ್ತಿದ್ದು ಇಂಗ್ಲೆಂಡ್ ಸಹ ಸ್ಪರ್ಧಿಸಲಿದೆ.

ಇನ್ನು ವುಶ್ವ ಟಿ20  ತಂಡ ಹೀಗಿದೆ-

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನಾ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್, ರಾಜೇಶ್ವರಿ ಗಾಯಕ್ವಾಡ್‌, ಶಿಖಾ ಪಾಂಡೆ, ಪೂಜಾ ವಸ್ತ್ರಕಾರ್‌, ಅರುಂಧತಿ ರೆಡ್ಡಿ.

ತ್ರಿಕೋನ ಸರಣಿಗೆ ಆಯ್ಕೆಯಾಗಿರುವ ತಂಡ ಹೀಗಿದೆ-

ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಶಫಾಲಿ ವರ್ಮಾ, ಜೆಮಿಮಾ ರೊಡ್ರಿಗಸ್, ಹರ್ಲೀನ್ ಡಿಯೋಲ್, ದೀಪ್ತಿ ಶರ್ಮಾ, ವೇದ ಕೃಷ್ಣಮೂರ್ತಿ, ರಿಚಾ ಘೋಷ್, ತಾನಿಯಾ ಭಾಟಿಯಾ, ಪೂನಂ ಯಾದವ್, ರಾಧಾ ಯಾದವ್‌, ರಾಜೇಶ್ವರಿ ಗಾಯಕ್ವಾಡ್‌, ಪೂಜಾ ವಸ್ತ್ರಕಾರ್, ಅರುಂಧತಿ ರೆಡ್ಡಿ, ನುಝಾಹತ್‌ ಪರ್ವೀನ್.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT