ಟೀಂ ಇಂಡಿಯಾ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿ: 16 ಆಟಗಾರರ ಭಾರತ ತಂಡ ಪ್ರಕಟಿಸಿದ ಬಿಸಿಸಿಐ!

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಟಿ20 ಸರಣಿಗೆ ಬಿಸಿಸಿಐ 16 ಆಟಗಾರರ ಟೀಂ ಇಂಡಿಯಾವನ್ನು...

ಮುಂಬೈ: ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿ ನಂತರ ಟೀಂ ಇಂಡಿಯಾ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಿದ್ದು ಈ ಹಿನ್ನೆಲೆಯಲ್ಲಿ ಟಿ20 ಸರಣಿಗೆ ಬಿಸಿಸಿಐ 16 ಆಟಗಾರರ ಟೀಂ ಇಂಡಿಯಾವನ್ನು ಪ್ರಕಟಿಸಿದ್ದು ಶ್ರೀಲಂಕಾ ತಂಡದಿಂದ ದೂರ ಉಳಿದಿದ್ದ ರೋಹಿತ್ ಶರ್ಮಾ ಮತ್ತೆ ತಂಡವನ್ನು ಸೇರಿಕೊಂಡಿದ್ದಾರೆ.

ಜನವರಿ 24ರಿಂದ ನ್ಯೂಜಿಲ್ಯಾಂಡ್ ವಿರುದ್ಧದ ಟಿ20, ಏಕದಿನ ಮತ್ತು ಟೆಸ್ಟ್ ಸರಣಿಗಳು ಆರಂಭಗೊಳ್ಳಲಿದೆ. ಸದ್ಯ ಟಿ20 ಸರಣಿಗೆ ಬಿಸಿಸಿಐ ತಂಡವನ್ನು ಪ್ರಕಟಿಸಿದ್ದು ತಂಡದಲ್ಲಿ ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮಾ, ರಿಷಬ್ ಪಂತ್, ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಶಿವಂ ದುಬೆ, ಕುಲದೀಪ್ ಯಾದವ್, ಯಜುವೇಂದ್ರ ಚಹಾಲ್, ವಾಷ್ಟಿಂಗನ್ ಸುಂದರ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇದಾ ಮತ್ತು ಶಾರ್ದೂಲ್ ಠಾಕೂರ್. 

ಅಚ್ಚರಿ ವಿಷಯವೆಂದರೆ ನ್ಯೂಜಿಲ್ಯಾಂಡ್ ವಿರುದ್ಧದ ಸರಣಿಗೂ ಕೇರಳದ ಆಟಗಾರ ಸಂಜು ಸ್ಯಾಮ್ಸನ್ ಅವರನ್ನು ಬಿಸಿಸಿಐ ಆಯ್ಕೆಗಾರರು ಕೈಬಿಟ್ಟಿದ್ದಾರೆ. 

ಜನವರಿ 14ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ ಮುಂಬೈನಲ್ಲಿ ನಡೆಯಲಿದೆ. ಮಧ್ಯಾಹ್ನ 1.30ಕ್ಕೆ ಪಂದ್ಯ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT