ಶಿಖರ್ ಧವನ್ 
ಕ್ರಿಕೆಟ್

ಬೆಂಗಳೂರು ಪಂದ್ಯದ ವೇಳೆ ಧವನ್ ಭುಜಕ್ಕೆ ಗಾಯ: ನ್ಯೂಜಿಲೆಂಡ್ ಪ್ರವಾಸ ಡೌಟು

ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯದ ಪಂದ್ಯದಲ್ಲಿ  ಎಡ ಭುಜಕ್ಕೆ ಗಾಯ ಮಾಡಿಕೊಂಡಿರುವ ಆರಂಭಿಕ ಆಟಗಾರ ಶಿಖರ್ ಧವನ್ ನ್ಯೂಜಿಲೆಂಡ್ ಪ್ರವಾಸ ಅನುಮಾನವಾಗಿದೆ. 

ಬೆಂಗಳೂರು: ಆರಂಭಿಕ ಆಟಗಾರ  ಶಿಖರ್ ಧವನ್, ಆಸ್ಟ್ರೇಲಿಯಾ ವಿರುದ್ಧದ ನಿರ್ಣಾಯದ ಪಂದ್ಯದಲ್ಲಿ  ಎಡ ಭುಜಕ್ಕೆ ಗಾಯ ಮಾಡಿಕೊಂಡಿದ್ದರಿಂದ ಬ್ಯಾಟಿಂಗ್ ಮಾಡಲಿಲ್ಲ.

ನಂತರ ಎಕ್ಸ್ - ರೇ ಪರೀಕ್ಷೆ ಮಾಡಲಾಗಿದ್ದು, ಎಡ ಕೈಯಲ್ಲಿ ಬಿರುಕು ಕಾಣಿಸಿಕೊಂಡಿದೆ (ಸ್ಲಿಂಗ್ ) ಇದರಿಂದಾಗಿ ಅವರು ಜನವರಿ 24 ರಿಂದ ಆರಂಭವಾಗಲಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಪಾಲ್ಗೊಳ್ಳುವುದು ಅನುಮಾನವಾಗಿದೆ. 

ವೈದ್ಯಕೀಯ ತಂಡ ಶಿಖರ್ ಧವನ್ ಅವರಿಗೆ ಮಾಡಿರುವ ಸ್ಕ್ಯಾನ್ ನ್ನು ಪರಿಶೀಲಿಸಿದ್ದು, ಯಾವಾಗ ಆಡಬಹುದು ಎಂದು ಹೇಳುವುದಾಗಿ ಬಿಸಿಸಿಐ ಮಾಧ್ಯಮ ಮ್ಯಾನೇಜರ್  ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದ ಐದನೇ ಓವರ್ ನಲ್ಲಿ ಚೆಂಡನ್ನು ತಡೆಯುವ ಯತ್ನದಲ್ಲಿ ಧವನ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ನಂತರ ಚಾಹೆಲ್ ಬದಲಿ ಆಟಗಾರನಾಗಿ ಆಡಿದ್ದರು. ನಂತರ ಬ್ಯಾಟಿಂಗ್ ಕೂಡಾ ಮಾಡಿರಲಿಲ್ಲ.

ವಿಶ್ವಕಪ್ ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯದಲ್ಲಿ ಧವನ್ ಹೆಬ್ಬೆಟ್ಟು ಗಾಯದಿಂದ ನರಳಿದ್ದರು. ನಂತರ ವಾಪಾಸ್ ಆದ ನಂತರ ಮುಸ್ತಾಕ್ ಆಲಿ ಟ್ರೋಫಿ ವೇಳೆಯಲ್ಲಿ ಮೊಣಕಾಲಿನ ಗಾಯದಿಂದ ಬಳಲಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

SCROLL FOR NEXT