ಕ್ರಿಕೆಟ್

ಟಿ20 ವಿಶ್ವಕಪ್ ನನ್ನ ಕನಸು, ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತ: ರವಿಶಾಸ್ತ್ರಿ

Vishwanath S

ನವದೆಹಲಿ: 2020ರ ಅಕ್ಟೋಬರ್ ನಲ್ಲಿ ಐಸಿಸಿ ವಿಶ್ವಕಪ್ ಪಂದ್ಯಾವಳಿಯ ನಡೆಯಲಿದ್ದು ಕಪ್ ಗೆಲ್ಲುವುದು ನನ್ನ ಕನಸಾಗಿದೆ. ಇನ್ನು ಪ್ರಸ್ತುತ ನಡೆಯುತ್ತಿರುವ ಏಕದಿನ ಸರಣಿಗಳು ತಂಡಕ್ಕೆ ಉಪಯುಕ್ತವಾಗಲಿದೆ ಎಂದು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. 

ಆಸ್ಟ್ರೇಲಿಯಾ ವಿರುದ್ಧ ಏಕದಿನ ಸರಣಿ ಗೆಲುವು ಟೀಂ ಇಂಡಿಯಾದ ಮಾನಸಿಕ ಶಕ್ತಿ ಮತ್ತು ಒತ್ತಡದಲ್ಲಿ ಆಡುವ ಸಾಮರ್ಥ್ಯಕ್ಕೆ ಪುರಾವೆಯಾಗಿದೆ. ಇನ್ನು ನಾವು ಕ್ರಿಕೆಟ್ ಅನ್ನು ದೋಷರಹಿತವಾಗಿ ಆಡುತ್ತೇವೆ ಎಂಬುದಕ್ಕೆ ಈ ಗೆಲವು ಸಾಕ್ಷಿ ಎಂದರು. 

ಇದೇ ವೇಳೆ ಹಿರಿಯ ಆಟಗಾರರ ಗಾಯದ ಸಮಸ್ಯೆ ಬಗ್ಗೆ ಮಾತನಾಡಿದ ರವಿಶಾಸ್ತ್ರಿ, ತಂಡಕ್ಕೆ ಅನುಭವಿ ಆಟಗಾರರ ಅನುಪಸ್ಥಿತಿ ಕಾಡುತ್ತದೆ. ಆದರೆ ಪರಿಸ್ಥಿತಿಗೆ ಅನುಗುಣವಾಗಿ ಮುಂದಿನ ನ್ಯೂಜಿಲ್ಯಾಂಡ್ ಪ್ರವಾಸ ಕೈಗೊಳ್ಳಲಾಗುವುದು ಎಂದರು.

SCROLL FOR NEXT