ಮನೀಷ್ ಪಾಂಡೆ ಅರ್ಧಶತಕ: ನ್ಯೂಜಿಲೆಂಡ್ ಗೆ 166 ರನ್ ಗುರಿ ನೀಡಿದ ಭಾರತ 
ಕ್ರಿಕೆಟ್

 ನಾಲ್ಕನೇ ಟಿ20: ಮನೀಷ್ ಪಾಂಡೆ ಅರ್ಧಶತಕ, ನ್ಯೂಜಿಲೆಂಡ್ ಗೆ 166 ರನ್ ಗುರಿ ನೀಡಿದ ಭಾರತ

ಕೆ.ಎಲ್ ರಾಹುಲ್ (39 ರನ್) ಹೊರತುಪಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಹೊರತಾಗಿಯೂ ಮನೀಷ್ ಪಾಂಡೆ (ಔಟಾಗದೆ 50 ರನ್) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ 166 ರನ್ ಸ್ಪರ್ಧಾತ್ಮಕ ಗುರಿ ನೀಡಿದೆ.

ವೆಲ್ಲಿಂಗ್ಟನ್: ಕೆ.ಎಲ್ ರಾಹುಲ್ (39 ರನ್) ಹೊರತುಪಡಿಸಿ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ವೈಫಲ್ಯದ ಹೊರತಾಗಿಯೂ ಮನೀಷ್ ಪಾಂಡೆ (ಔಟಾಗದೆ 50 ರನ್) ಅವರ ಅರ್ಧಶತಕದ ನೆರವಿನಿಂದ ಭಾರತ ತಂಡ ನಾಲ್ಕನೇ ಟಿ-20 ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡಕ್ಕೆ 166 ರನ್ ಸ್ಪರ್ಧಾತ್ಮಕ ಗುರಿ ನೀಡಿದೆ.
  
ಇಲ್ಲಿನ ಸ್ಕೈ ಕ್ರೀಡಾಂಗಣದಲ್ಲಿ  ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತದ ಆರಂಭ ಉತ್ತಮವಾಗಿರಲಿಲ್ಲ. ರೋಹಿತ್ ಶರ್ಮಾ ಸ್ಥಾನದಲ್ಲಿ ರಾಹುಲ್ ಜತೆ ಇನಿಂಗ್ಸ್ ಆರಂಭಿಸಿದ ಸಂಜು ಸ್ಯಾಮ್ಸನ್ ಅವರು ಎಂಟು ರನ್ ಗಳಿಸಿ ಬೇಗ ವಿಕೆಟ್ ಒಪ್ಪಿಸಿದರು.
  
ನಾಯಕ ವಿರಾಟ್ ಕೊಹ್ಲಿ(11), ಶ್ರೇಯಸ್ ಅಯ್ಯರ್(1), ಶಿವಂ ದುಬೆ(12) ನಿರಾಸೆ ಮೂಡಿಸಿದರು. ಆದರೆ, ಎಂದಿನಂತೆ ಅತ್ಯುತ್ತಮ ಬ್ಯಾಟಿಂಗ್ ಕೆ.ಎಲ್ ರಾಹುಲ್ 26 ಎಸೆತಗಳಲ್ಲಿ ಎರಡು ಸಿಕ್ಸರ್ ಹಾಗೂ ಮೂರು ಬೌಂಡರಿಯೊಂದಿಗೆ 39 ರನ್ ಗಳಿಸಿದರು. ನಂತರ, ಇವರು ಇಶ್ ಸೋಧಿ ಎಸೆತದಲ್ಲಿ ವಿಕೆಟ್ ಒಪ್ಪಿಸಿದರು.


  
ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಸರೆಯಾದ ಮನೀಷ್ ಪಾಂಡೆ ಸಮಯಕ್ಕೆ ತಕ್ಕಂತೆ ಬ್ಯಾಟಿಂಗ್ ಮಾಡಿದರು. ತಂಡದ ಜವಾಬ್ದಾರಿ ಹೊತ್ತು ಬ್ಯಾಟಿಂಗ್ ಮಾಡಿದ ಅವರು ನಿರೀಕ್ಷೆಯಂತೆ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು. 36 ಎಸೆತಗಳಲ್ಲಿ ಮೂರು ಬೌಂಡರಿಯೊಂದಿಗೆ 50 ರನ್ ಗಳಿಸಿ ಅಜೇಯರಾಗಿ ಉಳಿದರು. ಇವರ ಅರ್ಧಶತಕದ ಬಲದಿಂದ ಭಾರತ ನಿಗದಿತ 20 ಓವರ್ ಗಳಿಗೆ ಎಂಟು ವಿಕೆಟ್ ನಷ್ಟಕ್ಕೆ 165 ರನ್ ಗಳಿಸಿದೆ. ಆ ಮೂಲಕ ನ್ಯೂಜಿಲೆಂಡ್ ತಂಡಕ್ಕೆ 166 ರನ್ ಗುರಿ ನೀಡಿದೆ. ಇದರಲ್ಲಿ ಶಾರ್ದೂಲ್ ಠಾಕೂರ್(20) ಹಾಗೂ ನವದೀಪ್ ಸೈನಿ (11) ಅಲ್ಫ ಕಾಣಿಕೆ ನೀಡಿದರು.
  
ಅತ್ಯುತ್ತಮ ಬೌಲಿಂಗ್ ಮಾಡಿದ ಇಶ್ ಸೋಧಿ 26 ರನ್ ನೀಡಿ ಮೂರು ವಿಕೆಟ್ ಪಡೆದರು. ಹಮೀಶ್ ಬೆನೆಟ್ ಎರಡು ವಿಕೆಟ್ ಕಿತ್ತರು.
  
ಸಂಕ್ಷಿಪ್ತ ಸ್ಕೋರ್
  

ಭಾರತ: 20 ಓವರ್ ಗಳಿಗೆ 165/8 (ಮನೀಷ್ ಪಾಂಡೆ ಔಟಾಗದೆ 50, ಕೆ.ಎಲ್ ರಾಹುಲ್ 39, ಶಾರ್ದೂಲ್ ಠಾಕೂರ್ 20; ಇಶ್ ಸೋಧಿ 26 ಕ್ಕೆ 3, ಹಮೀಶ್ ಬೆನೆಟ್ 41 ಕ್ಕೆ 2)

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ತ್ರಿಪುರದಲ್ಲಿ ಎರಡು ಸಮುದಾಯಗಳ ನಡುವೆ ಘರ್ಷಣೆ: ಉನಕೋಟಿಯಲ್ಲಿ ಮಸೀದಿ-ಮುಸ್ಲಿಂ ಅಂಗಡಿಗಳಿಗೆ ಬೆಂಕಿ

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

SCROLL FOR NEXT