ಶ್ರೀಶಾಂತ್ 
ಕ್ರಿಕೆಟ್

ಐಪಿಎಲ್‌‌ಗೆ ಕಮ್ ಬ್ಯಾಕ್: ಮೂರು ತಂಡಗಳನ್ನು ಆಯ್ಕೆ ಮಾಡಿಕೊಂಡ ಶ್ರೀಶಾಂತ್

2013ರ ಇಂಡಿಯನ್ ಪ್ರೀಮಿಯರ್ ಲೀಗ್ ಫಿಕ್ಸಿಂಗ್ ಆರೋಪದಿಂದ ಸದ್ಯ ದೋಷ ಮುಕ್ತಗೊಂಡಿರುವ ಕೇರಳದ ವೇಗಿ ಎಸ್. ಶ್ರೀಶಾಂತ್ ಸ್ಪರ್ಧಾತ್ಮಕ ಕ್ರಿಕೆಟ್ ಗೆ ಮರಳಲು ಸಜ್ಜಾಗಿದ್ದಾರೆ.

ಕೊಚ್ಚಿ: 2013ರ ಇಂಡಿಯನ್ ಪ್ರೀಮಿಯರ್ ಲೀಗ್ ಫಿಕ್ಸಿಂಗ್ ಆರೋಪದಿಂದ ಸದ್ಯ ದೋಷ ಮುಕ್ತಗೊಂಡಿರುವ ಕೇರಳದ ವೇಗಿ ಎಸ್. ಶ್ರೀಶಾಂತ್ ಸ್ಪರ್ಧಾತ್ಮಕ ಕ್ರಿಕೆಟ್ ಗೆ ಮರಳಲು ಸಜ್ಜಾಗಿದ್ದಾರೆ.

ಫಿಕ್ಸಿಂಗ್ ಆರೋಪದಲ್ಲಿ ಪ್ರಮುಖ ಆರೋಪಿಯಾಗಿದ್ದ ಶ್ರೀಶಾಂತ್ ಸುಮಾರು 7 ವರ್ಷಗಳ ಕಾಲ ಸ್ಪರ್ಧಾತ್ಮಕ ಕ್ರಿಕೆಟ್ ನಿಂದ ಹೊರಗಿದ್ದರು. ಆದರೀಗ ಸ್ಪರ್ಧೆಗೆ ಮರಳಲು ಹಾತೊರೆಯುತ್ತಿದ್ದಾರೆ.  ಸ್ಪಾಟ್‌ ಫಿಕ್ಸಿಂಗ್‌ ಪ್ರಕರಣದಲ್ಲಿ ಎಸ್‌ ಶ್ರೀಶಾಂತ್‌ ಕಳೆದ ವರ್ಷ ಆರೋಪ ಮುಕ್ತರಾಗಿ ಹೊರಬಂದರಾದರೂ ಅವರ ವಿರುದ್ಧ ಬಿಸಿಸಿಐ ಹೇರಿದ್ದ ಆಜೀವ ನಿಷೇಧ ಮಾತ್ರ ಮುಂದುವರಿದಿತ್ತು.

ಇದರ ವಿರುದ್ಧವೂ ಸುಪ್ರೀಂ ಕೋರ್ಟ್‌ ಮೆಟ್ಟಲೇರಿದ್ದ ಶ್ರೀ ನಿಷೇಧದ ಅವಧಿಯನ್ನು ತಗ್ಗಿಸಿಕೊಳ್ಳುವಲ್ಲಿ ಸಫಲರಾಗಿದ್ದರು. ಈ ಮೂಲಕ ಮುಂಬರುವ ಸೆಪ್ಟೆಂಬರ್‌ಗೆ ಕೇರಳ ವೇಗಿಗೆ ಎಲ್ಲ ನಿಷೇಧಗಳು ದೂರವಾಗಲಿದ್ದು, ಕ್ರಿಕೆಟ್‌ಗೆ ಕಮ್‌ಬ್ಯಾಕ್‌ ಮಾಡುವುದನ್ನು ಎದುರು ನೋಡುತ್ತಿದ್ದಾರೆ.

ಈಗಾಗಲೇ ಕೇರಳ ಕ್ರಿಕೆಟ್‌ ಸಂಸ್ಥೆ ಮುಂಬರುವ ರಣಜಿ ಟ್ರೋಫಿ ಕ್ರಿಕೆಟ್‌ ಟೂರ್ನಿಗೆ ಕೇರಳ ರಣಜಿ ತಂಡ ಶ್ರೀಶಾಂತ್‌ ಬೆಂಬಲ ಪಡೆಯಲಿದೆ ಎಂದು ಘೋಷಿಸಿದೆ. ಇದರೊಂದಿಗೆ ಶ್ರೀಶಾಂತ್‌ ಕಮ್‌ಬ್ಯಾಕ್‌ ಬಹುತೇಕ ಖಾತ್ರಿಯಾಗಿದೆ. ಇದರ ಬೆನ್ನಲ್ಲೇ ಮಾತಿಗಿಳಿದಿರುವ ಶ್ರೀಶಾಂತ್‌, ಮುಂಬರುವ ಐಪಿಎಲ್‌ಗಾಗಿ ನಡೆಯಲಿರುವ ಆಟಗಾರರ ಹರಾಜಿನಲ್ಲಿ ತಾವು ಪಾಲ್ಗೊಳ್ಳುವುದಾಗಿ ಹೇಳಿದ್ದಾರೆ. ಈ ಮೂಲಕ ಐಪಿಎಲ್‌ನಲ್ಲಿ ಎರಡನೇ ಇನಿಂಗ್ಸ್‌ ಆರಂಭಿಸಲು ತಾವು ರೆಡಿ ಎಂದು ಘೋಷಿಸಿದ್ದಾರೆ.

ಎಂಎಸ್‌ ಧೋನಿ ಸಾರಥ್ಯದ ಚೆನ್ನೈ ಸೂಪರ್‌ ಕಿಂಗ್ಸ್‌ ಅಥವಾ ವಿರಾಟ್‌ ಕೊಹ್ಲಿ ಸಾರಥ್ಯದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಪರ ಆಡುವ ಇಂಗಿತವನ್ನೂ ಶ್ರೀಶಾಂತ್‌ ಹೊರಹಾಕಿದ್ದಾರೆ. "ಧೋನಿ ಸಾರಥ್ಯದ ಸಿಎಸ್‌ಕೆ ಅಥವಾ ಆರ್‌ಸಿಬಿ ಪರ ಆಡುವುದನ್ನೂ ಬಯಸುತ್ತೇನೆ," ಎಂದಿದ್ದಾರೆ. ಶ್ರೀಶಾಂತ್‌ ಈ ಮೊದಲು ಕಿಂಗ್ಸ್‌ ಇಲೆವೆನ್‌ ಪಂಜಾಬ್‌, ರಾಜಸ್ಥಾನ್‌ ರಾಯಲ್ಸ್‌ ಮತ್ತು ಕೊಚ್ಚಿ ಟಸ್ಕರ್ಸ್‌ ಕೇರಳ ತಂಡದ ಪರ ಆಡಿದ ಅನುಭವ ಹೊಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT