ವಿರಾಟ್ ಕೊಹ್ಲಿ 
ಕ್ರಿಕೆಟ್

ಸ್ವ-ಹಿತಾಸಕ್ತಿ ಸಂಘರ್ಷ ಆರೋಪ: ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ತನಿಖೆ!

ಸ್ವ-ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ತನಿಖೆ ನಡೆಸುತ್ತೇವೆ ಎಂದು ಬಿಸಿಸಿಐ ಹೇಳಿದೆ.

ನವದೆಹಲಿ: ಸ್ವ-ಹಿತಾಸಕ್ತಿ ಸಂಘರ್ಷ ಆರೋಪಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ ದಾಖಲಾಗಿರುವ ದೂರಿನ ಕುರಿತಂತೆ ತನಿಖೆ ನಡೆಸುತ್ತೇವೆ ಎಂದು ಬಿಸಿಸಿಐ ಹೇಳಿದೆ.

ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ವಿರುದ್ಧ Conflict of Interest (ಸ್ವಹಿತಾಸಕ್ತಿ ಸಂಘರ್ಷ) ದೂರು ದಾಖಲಾಗಿದೆ. ಮಧ್ಯ ಪ್ರದೇಶ ಕ್ರಿಕೆಟ್​ ಸಂಸ್ಥೆಯ ಸದಸ್ಯ ಸಂಜೀವ್​ ಗುಪ್ತಾ, ಬಿಸಿಸಿಐ ಎಥಿಕ್ಸ್ ಆಫೀಸರ್​ ಡಿಕೆ ಜೈನ್​, ಹಾಗೂ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ, ಸಿಇಒ ರಾಹುಲ್ ಜೊಹ್ರಿಗೆ ಇ-ಮೇಲ್​ ಮೂಲಕ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಸ್ಪೋರ್ಟ್ಸ್ ಎಲ್​ಎಲ್​ಪಿ ಮತ್ತು ಕಾರ್ನರ್​ಸ್ಟೋನ್​ ವೆಂಚರ್ಸ್​ ಪಾರ್ಟ್ನರ್ಸ್ ಎಲ್​ಎಲ್​ಪಿ​ ಈ ಎರಡು ಕಂಪನಿಗಳಿಗೆ ಕೊಹ್ಲಿ, ಡೈರೆಕ್ಟರ್ ಆಗಿದ್ದಾರೆ. ಆ ಸಂಸ್ಥೆಗಳಲ್ಲಿ ಸಹ ನಿದೇರ್ಶಕರಾಗಿರುವ ಕೆಲವರು, ಟೀಮ್ ಇಂಡಿಯಾ ಆಟಗಾರರ ವ್ಯವಹಾರ ನೋಡಿಕೊಳ್ಳುವ ಕಾರ್ನರ್​ಸ್ಟೋನ್ ಆ್ಯಂಡ್​ ಎಂಟರ್​ಟೇನ್​ಮೆಂಟ್ ಪ್ರೈವೇಟ್​ ಲಿಮಿಟೆಡ್​ನಲ್ಲೂ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಸಂಜೀವ್ ಗುಪ್ತಾ ಆರೋಪಿಸಿದ್ದಾರೆ.

ಒಂದೇ ಬಾರಿ ಎರಡು ಪದವಿ ಹೊಂದಿರುವ ಕೊಹ್ಲಿ, ಸುಪ್ರೀಂ ಕೋರ್ಟ್ ಅನುಮೋದಿಸಿರುವ ಬಿಸಿಸಿಐ ಸಂವಿಧಾನದ 38(4) ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಕೊಹ್ಲಿ ಒಂದು ಪದವಿ ತ್ಯಜಿಸಬೇಕು. ಪ್ರಸ್ತುತ ಕೊಹ್ಲಿ 38(4) ಎ ಪ್ರಕಾರ ಆಟಗಾರನಾಗಿ, 38(4) ಪ್ರಕಾರ ಸಂಸ್ಥೆಯೊಂದರ ಪದವಿಯಲ್ಲಿದ್ದಾರೆ. ಬಿಸಿಸಿಐ ನಿಯಮ 38(4) ಪ್ರಕಾರ ಆಟಗಾರರಾಗಲಿ ಅಥವಾ ಅಧಿಕಾರಿಗಳಾಗಲಿ ಒಂದೇ ಬಾರಿ ಎರಡು ಪದವಿಯಲ್ಲಿರಬಾರದು. 

ಈ ಬಗ್ಗೆ ಮಾಹಿತಿ ನೀಡಿರುವ ಬಿಸಿಸಿಐ ಎಥಿಕ್ಸ್ ಆಫೀಸರ್​ ಡಿಕೆ ಜೈನ್​ ಅವರು, 'ಕೊಹ್ಲಿ ವಿರುದ್ಧ ದೂರು ಬಂದಿದೆ. ಆ ದೂರನ್ನು ಪರಿಗಣನೆಗೆ ತೆಗೆದುಕೊಳ್ಳಬೇಕೋ, ಬೇಡವೋ ಎಂದು ಪರಿಶೀಲಿಸುತ್ತಿದ್ದೇವೆ. ಒಂದು ವೇಳೆ ಪರಿಗಣಿಸಬೇಕಾದಲ್ಲಿ ಈ ಬಗ್ಗೆ ಸ್ಪಂದಿಸಲು ಕೊಹ್ಲಿಗೆ ಅವಕಾಶ ನೀಡುತ್ತೇವೆ ಎಂದು ಜೈನ್​ ತಿಳಿಸಿದ್ದಾರೆ. 

ಈ ಹಿಂದೆ ಇದೇ ಸಂಜೀವ್​ ಗುಪ್ತಾ  ಸಚಿನ್ ತೆಂಡುಲ್ಕರ್​, ವಿವಿಎಸ್ ಲಕ್ಷ್ಮಣ್​, ರಾಹುಲ್ ದ್ರಾವಿಡ್ ವಿರುದ್ಧವೂ ಹಿತಾಸಕ್ತಿ ಸಂಘರ್ಷ ದೂರು ದಾಖಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT