ಭಾರತದ ನಾಟ್‌ವೆಸ್ಟ್ ಸರಣಿ ಗೆಲುವಿಗೆ 18 ವರ್ಷಗಳು 
ಕ್ರಿಕೆಟ್

ಭಾರತದ ನಾಟ್‌ವೆಸ್ಟ್ ಸರಣಿ ಗೆಲುವಿಗೆ 18 ವರ್ಷಗಳು

ಇಂಗ್ಲೆಂಡ್‌ ಲಾರ್ಡ್ಸ್‌ ಕ್ರಿಕೆಟ್‌ ಮೈದಾನದಲ್ಲಿ ಇದೇ ದಿನ 2002 ರಂದು ಭಾರತ ತಂಡದ ಸಂಭ್ರಮ ಮುಗಿಲು ಮುಟ್ಟಿತ್ತು. 

ನವದೆಹಲಿ: ಇಂಗ್ಲೆಂಡ್‌ ಲಾರ್ಡ್ಸ್‌ ಕ್ರಿಕೆಟ್‌ ಮೈದಾನದಲ್ಲಿ ಇದೇ ದಿನ 2002 ರಂದು ಭಾರತ ತಂಡದ ಸಂಭ್ರಮ ಮುಗಿಲು ಮುಟ್ಟಿತ್ತು. 

ಸೌರವ್ ಗಂಗೂಲಿ ನಾಯಕತ್ವದ ಟೀಮ್‌ ಇಂಡಿಯಾ ನಾಟ್‌ವೆಸ್ಟ್‌ ಸರಣಿಯ ಫೈನಲ್‌ ಹಣಾಹಣಿಯಲ್ಲಿ ಇಂಗ್ಲೆಂಡ್‌ ತಂಡವನ್ನು ಮಣಿಸಿ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಅಂದು ದಾದಾ ತಮ್ಮ ಶರ್ಟ್‌ ಬಿಚ್ಚಿ ಸಂಭ್ರಮಿಸಿದ್ದರು. 

ಭಾರತೀಯ ಕ್ರಿಕೆಟ್‌ ಅಭಿಮಾನಿಗಳು ಈ ಕ್ಷಣವನ್ನು ಎಂದಿಗೂ ಮರೆಯಲು ಸಾಧ್ಯವೇ ಇಲ್ಲ.

ನಾಸೀರ್‌ ಹುಸೇನ್‌ ನಾಯಕತ್ವದ ಇಂಗ್ಲೆಂಡ್‌ ತಂಡ ನೀಡಿದ್ದ 326 ರನ್‌ ಗುರಿ ಹಿಂಬಾಲಿಸಿದ್ದ ಭಾರತ, ಒಂದು ಹಂತದಲ್ಲಿ 146 ರನ್‌ಗಳಿಗೆ ಐದು ವಿಕೆಟ್‌ ಕಳೆದುಕೊಂಡು ತೀವ್ರ ಆಘಾತಕ್ಕೆ ಒಳಗಾಗಿತ್ತು. ನಾಯಕ ಸೌರವ್‌ ಗಂಗೂಲಿ, ವಿರೇಂದ್ರ ಸೆಹ್ವಾಗ್‌, ಸಚಿನ್‌ ತೆಂಡೂಲ್ಕರ್‌ ಸೇರಿದಂತೆ ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳು ಔಟ್‌ ಆಗಿ ಪೆವಿಲಿಯನ್‌ ಸೇರಿದ್ದರು. 

ಇಂತಹ ಒತ್ತಡದ ಪರಿಸ್ಥಿತಿಯಲ್ಲಿ ತಂಡವನ್ನು ಗೆಲ್ಲಿಸುವ ಜವಾಬ್ದಾರಿ ಯುವರಾಜ್ ಸಿಂಗ್ ಹಾಗೂ ಮೊಹಮ್ಮದ್ ಕೈಫ್ ಅವರ ಹೆಗಲೇರಿತ್ತು. ಅಂಡರ್-19 ನಿಂದಲೂ ಜೊತೆಯಾಗಿ ಆಡಿದ್ದ ಇಬ್ಬರೂ ಆಟಗಾರರು ಪಂದ್ಯವನ್ನೇ ಬದಲಿಸುವ ಪಾರ್ಟ್ನರ್ಶಿಪ್ ಗೆ ಮುಂದಾದರು. ಆ ನಂತರದ್ದು ಇತಿಹಾಸ!

121 ರನ್ ಗಳ ಜೊತೆಯಾಟ ಆಡಿದ್ದ ಕೈಫ್ ಹಾಗೂ ಯುವರಾಜ್ ಸಿಂಗ್ ಭಾರತ ತಂಡವನ್ನು ಆ ಪಂದ್ಯದಲ್ಲಿ ಮರಳಿ ಹಳಿಗೆ ತಂದಿದ್ದರು. ಆದರೆ 42 ನೇ ಓವರ್ ನಲ್ಲಿ 69 ರನ್ ಗಳಿಸಿದ್ದ ಯುವರಾಜ್ ಸಿಂಗ್ ವಿಕೆಟ್ ಒಪ್ಪಿಸಿದರು, ನಾನ್ ಸ್ಟ್ರೈಕ್ ಎಂಡ್ ನಲ್ಲಿದ್ದ ಕೈಫ್ ಏಕಾಂಗಿಯಾಗಿದ್ದರು. ಆದರೂ ಛಲ ಬಿಡದೇ 87 ರನ್ ಗಳ ಮೂಲಕ ಗೆಲುವು ಭಾರತ ತಂಡಕ್ಕೆ ದಕ್ಕುವಂತೆ ಮಾಡಿದ್ದರು. ಕೈಫ್ ಗೆ ಜಹೀರ್ ಖಾನ್ ಅಂದು ಸಾಥ್ ನೀಡಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT