ರಾಜೇಂದ್ರ ಸಿಂಗ್ ಧಾಮಿ 
ಕ್ರಿಕೆಟ್

ಹೊಟ್ಟೆ ಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿರುವ ವಿಕಲಚೇತನ ಕ್ರಿಕೆಟ್ ತಂಡದ ನಾಯಕ!

ಮಹಾಮಾರಿ ಕೊರೋನಾ ಹೊಡತಕ್ಕೆ ಕ್ರೀಡಾಪಟುಗಳು ತತ್ತರಿಸಿದ್ದು ಜೀವನೋಪಾಯಕ್ಕಾಗಿ ತರಕಾರಿ ಮಾರುವ, ಕೂಲಿ ಕೆಲಸ ಮಾಡುವ ಪರಿಸ್ಥಿತಿ ತಂದಿಟ್ಟಿದೆ.

ಡೆಹ್ರಾಡೂನ್: ಮಹಾಮಾರಿ ಕೊರೋನಾ ಹೊಡತಕ್ಕೆ ಕ್ರೀಡಾಪಟುಗಳು ತತ್ತರಿಸಿದ್ದು ಜೀವನೋಪಾಯಕ್ಕಾಗಿ ತರಕಾರಿ ಮಾರುವ, ಕೂಲಿ ಕೆಲಸ ಮಾಡುವ ಪರಿಸ್ಥಿತಿ ತಂದಿಟ್ಟಿದೆ. 

ಉತ್ತರಾಖಂಡದ ವಿಕಲಚೇತನ ಕ್ರಿಕೆಟ್ ತಂಡದ ನಾಯಕ 34 ವರ್ಷದ ರಾಜೇಂದ್ರ ಸಿಂಗ್ ಧಾಮಿ ಅವರು ರಾಜ್ಯ ಸರ್ಕಾರದಿಂದ ಯಾವುದೇ ಆರ್ಥಿಕ ಸಹಾಯ ಸಿಗದ ಕಾರಣ ತಮ್ಮ ಹೊಟ್ಟೆ ಪಾಡಿಗಾಗಿ ಕೂಲಿ ಕೆಲಸ ಮಾಡುತ್ತಿದ್ದಾರೆ. ಕಷ್ಟದ ಸಮಯದಲ್ಲೂ ಧಾಮಿ ಅವರು ತಮ್ಮದೇ ತಂಡವನ್ನು ನಿರ್ಮಿಸಿಕೊಂಡಿದ್ದಾರೆ.

ಭಾರತೀಯ ವಿಕಲಚೇತನ ಕ್ರಿಕೆಟ್ ತಂಡದ ಮಾಜಿ ನಾಯಕ ಧಾಮಿ ಅವರು ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಸೇರಿದಂತೆ ಕ್ರಿಕೆಟ್‌ನ ವಿವಿಧ ಆಯಾಮಗಳಲ್ಲಿ ಅಂಡರ್ 19 ಮಕ್ಕಳಿಗೆ ತರಬೇತಿ ನೀಡುತ್ತಿದ್ದಾರೆ.

ಹಲವು ದಿವ್ಯಾಂಗ ಜನರು ತಮ್ಮ ಜೀವನವನ್ನು ಒತ್ತಡಕ್ಕೆ ಸಿಲುಕಿಸಿ ಭರವಸೆ ಕಳೆದುಕೊಂಡಿರುವುದನ್ನು ನಾನು ನೋಡಿದ್ದೇನೆ. ನಾನು ಒಮ್ಮೆ ಅದೇ ಕತ್ತಲೆಯ ಪ್ರದೇಶದಲ್ಲಿದ್ದೆ. ಹೀಗಾಗಿ ನನ್ನ ಪ್ರಯತ್ನಗಳು ದಿವ್ಯಾಂಗರ ಜೀವನಕ್ಕೆ ಭರವಸೆ ನೀಡುವಲ್ಲಿ ಕೇಂದ್ರೀಕರಿಸಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯಡಿ ರಸ್ತೆಗಾಗಿ ನಿರ್ಮಾಣಕ್ಕಾಗಿ ಬಳಸಬೇಕಾದ ಕಲ್ಲುಗಳನ್ನು ಒಡೆಯುವಾಗ ಧಮಿ ದೃಢ ಸಂಕಲ್ಪದೊಂದಿಗೆ ಹೇಳುತ್ತಾರೆ.

"ನಾನು ದಿವ್ಯಾಂಗ ಮಕ್ಕಳಿಗೆ ತರಬೇತಿ ನೀಡುತ್ತಿದ್ದೆ ಮತ್ತು ಭವಿಷ್ಯದ ಪಂದ್ಯಾವಳಿಗಳಿಗೆ ತಯಾರಿ ನಡೆಸಲು ನಾನು ಅಭ್ಯಾಸ ಮಾಡುತ್ತಿದ್ದೆ ಆದರೆ ಕೋವಿಡ್ ಸಾಂಕ್ರಾಮಿಕವು ಎಲ್ಲವನ್ನೂ ನಿಲ್ಲಿಸಿತು ಎಂದು ಇತಿಹಾಸದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಧಾಮಿ ಹೇಳಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT