ಗಂಭೀರ್-ಸುನೀಲ್ ನರೈನ್ 
ಕ್ರಿಕೆಟ್

ಸುನೀಲ್ ನರೇನ್‌ ಬೇಕೇ ಬೇಕು ಎಂದು ಪಟ್ಟು ಹಿಡಿದಿದ್ದೇಕೆ ಗೌತಮ್ ಗಂಭೀರ್‌!

ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾಜಿ ಸಹಾಯಕ ಕೋಚ್‌ ವಿಜಯ್‌ ದಹಿಯಾ ಶ್ಲಾಘಿಸಿದ್ದಾರೆ.

ನವದೆಹಲಿ: ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್‌ ಗೌತಮ್‌ ಗಂಭೀರ್‌ ಅವರ ನಾಯಕತ್ವವನ್ನು ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾಜಿ ಸಹಾಯಕ ಕೋಚ್‌ ವಿಜಯ್‌ ದಹಿಯಾ ಶ್ಲಾಘಿಸಿದ್ದಾರೆ.

ಸ್ಪೋರ್ಟ್‌ಕೀಡಾದ ಫೇಸ್‌ಬುಕ್‌ ಪೇಜ್‌ನಲ್ಲಿ ಶಾನಿವಿ ಸಾದನ ಅವರೊಂದಿಗೆ ಲೈವ್‌ ಚಾಟ್‌ನಲ್ಲಿ ಮಾತನಾಡಿದ ಅವರು, ಕೋಲ್ಕತ್ತಾ ನೈಟ್‌ ರೈಡರ್ಸ್ ತಂಡದ ಯಶಸ್ಸಿನಲ್ಲಿ ಗೌತಮ್‌ ಗಂಭೀರ್‌ ಅವರ ಪಾತ್ರವನ್ನು ಶ್ಲಾಘಿಸಿದರು ಹಾಗೂ ವೆಸ್ಟ್ ಇಂಡಿಸ್‌ ತಂಡದ ಹಿರಿಯ ಆಫ್‌ ಸ್ಪಿನ್ನರ್ ಸುನೀಲ್‌ ನರೇನ್‌ ಅವರನ್ನು ತಂಡಕ್ಕೆ ಕರೆದುಕೊಂಡ ಉದ್ದೇಶವನ್ನು ಬಹಿರಂಗಪಡಿಸಿದರು.

ಐಪಿಎಲ್‌ ಮೊದಲು ಮೂರು ಆವೃತ್ತಿಗಳಲ್ಲಿ ಕೋಲ್ಕತ್ತಾ ನೈಟ್‌ ರೈಡರ್ಸ್‌ ತಂಡ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನವನ್ನು ಪಡೆದಿತ್ತು. 2011ರಲ್ಲಿ ಟೀಮ್‌ ಮ್ಯಾನೇಜ್‌ಮೆಂಟ್‌ ಗೌತಮ್‌ ಗಂಭೀರ್‌ ಅವರನ್ನು ತಂಡಕ್ಕೆ ಸೇರಿಸಿಕೊಂಡು ನಾಯಕತ್ವವನ್ನು ನೀಡಿತ್ತು. ಅದೇ ವರ್ಷ ಮೊಟ್ಟ ಮೊದಲ ಬಾರಿ ಕೆಕೆಆರ್‌ ಪ್ಲೇ ಅಫ್‌ಗೆ ತಲುಪಿತ್ತು. ನಂತರ, 2012 ಮತ್ತು 2014ರ ಆವೃತ್ತಿಗಳಲ್ಲಿ ಟ್ರೋಫಿಯನ್ನು ಮುಡಿಗೇರಿಸಿಕೊಂಡಿತ್ತು. ಗೌತಮ್‌ ಗಂಭೀರ್‌ ಅವರ ಆಕ್ರಮಣಕಾರಿ ನಾಯಕತ್ವ ತಂಡದ ಯಶಸ್ಸಿಗೆ ಕಾರಣವಾಗಿತ್ತು.

2012ರಲ್ಲಿ ಐಪಿಎಲ್‌ ಹರಾಜು ಪ್ರಕ್ರಿಯೆ ಕೆಲ ಕ್ಷಣಗಳನ್ನು ವಿಜಯ್ ದಹಿಯಾ ಮೆಲುಕು ಹಾಕಿದರು. ಭಾರತ ತಂಡ, ಆಸ್ಟ್ರೇಲಿಯಾ ಪ್ರವಾಸಕ್ಕೆ ತೆರಳಿದ್ದ ವೇಳೆ, ಗೌತಮ್‌ ಗಂಭೀರ್‌ ನನಗೆ ಕರೆ ಮಾಡಿ, ಎಷ್ಟು ಬೆಲೆಯಾದರೂ ಪರವಾಗಿಲ್ಲ ಸುನೀಲ್‌ ನರೇನ್‌ ಬೇಕು ಎಂದು ಹೇಳಿದ್ದರು. ಅದರಂತೆ, ವೆಸ್ಟ್ ಇಂಡೀಸ್‌ ಸ್ಪಿನ್ನರ್‌ 110 ಐಪಿಎಲ್‌ ಪಂದ್ಯಗಳಿಂದ 122 ವಿಕೆಟ್‌ಗಳನ್ನು ಕಬಳಿಸಿದ್ದಾರೆ ಹಾಗೂ ಎರಡು ಬಾರಿ ಟೂರ್ನಿ ಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದರು. ಕಳೆದ ಆವೃತ್ತಿಗಳಲ್ಲಿ ಅವರನ್ನು ಅಗ್ರ ಕ್ರಮಾಂಕದಲ್ಲಿ ಆಡಿಸಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT